Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿರಿಯದಿಂದ ಅಮೆರಿಕ ಸೇನಾ ವಾಪಸಾತಿಯನ್ನು...

ಸಿರಿಯದಿಂದ ಅಮೆರಿಕ ಸೇನಾ ವಾಪಸಾತಿಯನ್ನು ಸಮರ್ಥಿಸಿದ ಟ್ರಂಪ್: ಇರಾಕ್‌ಗೆ ಕ್ಷಿಪ್ರ ಭೇಟಿ

ವಾರ್ತಾಭಾರತಿವಾರ್ತಾಭಾರತಿ27 Dec 2018 11:44 PM IST
share
ಸಿರಿಯದಿಂದ ಅಮೆರಿಕ ಸೇನಾ ವಾಪಸಾತಿಯನ್ನು ಸಮರ್ಥಿಸಿದ ಟ್ರಂಪ್: ಇರಾಕ್‌ಗೆ ಕ್ಷಿಪ್ರ ಭೇಟಿ

ವಾಶಿಂಗ್ಟನ್, ಡಿ. 27: ಸಿರಿಯದಿಂದ ಅಮೆರಿಕ ಸೇನೆಯ ವಾಪಸಾತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿದ್ದಾರೆ ಹಾಗೂ ಅಫ್ಘಾನಿಸ್ತಾನದಲ್ಲಿ ಅಮೆರಿಕ ಸೇನೆಯನ್ನು ನಿಯೋಜಿಸಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಇರಾಕ್‌ಗೆ ಕ್ಷಿಪ್ರ ಭೇಟಿ ನೀಡಿ, ಅಲ್ಲಿನ ಸಂಘರ್ಷ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಅಮೆರಿಕ ಸೈನಿಕರನ್ನು ಭೇಟಿಯಾದ ಬಳಿಕ ಅವರು ಹೇಳಿಕೆಗಳನ್ನು ನೀಡಿದ್ದಾರೆ.

‘‘ನಾನು ಸಿರಿಯದಲ್ಲಿ ಸೇನಾ ವಾಪಸಾತಿಯ ಸೂಚನೆ ನೀಡಿದೆ. ಆದರೆ, ನಾನು ಸೇನೆಯನ್ನು ಮಾತ್ರ ವಾಪಸ್ ಪಡೆದುಕೊಳ್ಳುತ್ತಿದ್ದೇನೆ ಎಂಬ ರೀತಿಯಲ್ಲಿ ಅದನ್ನು ವರದಿ ಮಾಡಲಾಯಿತು. ನಾನು ಕೇವಲ ವಾಪಸ್ ಪಡೆದಿಲ್ಲ’’ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್ ಹೇಳಿದರು.

ಸಿರಿಯದಿಂದ 2,000 ಅಮೆರಿಕ ಸೈನಿಕರನ್ನು ವಾಪಸ್ ಕರೆಸಿಕೊಳ್ಳುವುದಾಗಿ ಕಳೆದ ವಾರ ಹೊರಡಿಸಿರುವ ಘೋಷಣೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸುತ್ತಿದ್ದರು.

‘‘ನಾನು ಇದರ ಬಗ್ಗೆ ಒಂದೂವರೆ ವರ್ಷದಿಂದ ಮಾತನಾಡುತ್ತಿದ್ದೇನೆ. ನಾನು ಸೇನಾಧಿಕಾರಿಗಳಿಗೆ ಹೇಳುತ್ತಿದ್ದೇನೆ, ‘ನಾವು ಮುಂದುವರಿಯುವ, ಹೆಚ್ಚು ಸಮಯ ತೆಗೆದುಕೊಳ್ಳುವ’ ಎಂದು. ಅವರಿಗೆ ನಾನು ನಿರಂತರವಾಗಿ ಹೆಚ್ಚಿನ ಸಮಯವನ್ನು ನೀಡುತ್ತಾ ಬಂದಿದ್ದೇನೆ. ಕೊನೆಯದಾಗಿ ನಾನು ಹೇಳಿದೆ, ‘ಸರಿ, ಈಗ ಈ ಯುದ್ಧವನ್ನು ಇತರರು ಮುಂದುವರಿಸಲು ಸಕಾಲ’ ಎಂದು. ನಾವು ಅಲ್ಲಿರಲು ಬಯಸುವುದಿಲ್ಲ’’ ಎಂದು ಟ್ರಂಪ್ ನುಡಿದರು.

ಸಿರಿಯದಿಂದ ಸೈನಿಕರನ್ನು ವಾಪಸ್ ಕರೆಸಿಕೊಳ್ಳುವ ಟ್ರಂಪ್ ನಿರ್ಧಾರವನ್ನು ವಿರೋಧಿಸಿ ರಕ್ಷಣಾ ಸಚಿವ ಜೇಮ್ಸ್ ಮ್ಯಾಟಿಸ್ ಮತ್ತು ‘ಐಸಿಸ್ ವಿರುದ್ಧ ಹೋರಾಡುವ ಅಂತಾರಾಷ್ಟ್ರೀಯ ಮಿತ್ರಕೂಟ’ಕ್ಕೆ ಅಮೆರಿಕದ ವಿಶೇಷ ರಾಯಭಾರಿ ಬ್ರೆಟ್ ಮೆಕ್‌ಗರ್ಕ್ ರಾಜೀನಾಮೆ ನೀಡಿರುವುದನ್ನು ಸ್ಮರಿಸಬಹುದಾಗಿದೆ.

ಇರಾಕ್‌ನಿಂದ ಸೇನಾ ವಾಪಸಾತಿಯಿಲ್ಲ

ಇರಾಕ್‌ನಿಂದ ಅಮೆರಿಕ ಸೈನಿಕರನ್ನು ವಾಪಸ್ ಕರೆಸಿಕೊಳ್ಳುವ ಯೋಜನೆಯಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ಸದ್ಯಕ್ಕೆ ಇರಾಕ್‌ನಿಂದ ಸೈನಿಕರನ್ನು ವಾಪಸ್ ಕರೆಸಿಕೊಳ್ಳುವ ಯೋಚನೆಯಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

‘‘ವಾಸ್ತವವಾಗಿ, ಸಿರಿಯದಲ್ಲಿ ನಾವೇನಾದರೂ ಮಾಡಲು ಬಯಸಿದರೆ ಇರಾಕನ್ನು ನಾವು ನೆಲೆಯಾಗಿ ಬಳಸಬಹುದು’’ ಎಂದರು.

ಮಿಂಚಿನ ಭೇಟಿ

 ಇರಾಕ್‌ಗೆ ಅನಿರೀಕ್ಷಿತ ಭೇಟಿ ನೀಡಿದ ಡೊನಾಲ್ಡ್ ಟ್ರಂಪ್, ಪಶ್ಚಿಮ ಇರಾಕ್‌ನಲ್ಲಿನ ಅಲ್-ಅಸಾದ್ ವಾಯುನೆಲೆಯಲ್ಲಿ ಸ್ಥಳೀಯ ಸಮಯ ಸಂಜೆ 7:16ಕ್ಕೆ ಇಳಿದರು. ಅವರು ಪತ್ನಿ ಮೆಲಾನಿಯಾ ಜೊತೆಗೆ ‘ಏರ್‌ಫೋರ್ಸ್ ವನ್’ ವಿಮಾನದಲ್ಲಿ ಪ್ರಯಾಣಿಸಿದರು.

ಅವರು ಸುಮಾರು 100 ವಿಶೇಷ ಪಡೆ ಸಿಬ್ಬಂದಿಯ ಗುಂಪಿನೊಂದಿಗೆ ಮಾತನಾಡಿದರು. ಬಳಿಕ ಪ್ರತ್ಯೇಕವಾಗಿ ಸೇನಾಧಿಕಾರಿಗಳೊಂದಿಗೆ ಚರ್ಚಿಸಿದರು. ಕೆಲವು ಗಂಟೆಗಳ ಬಳಿಕ ಅವರು ವಾಪಸಾದರು.

ಅವರು ಇರಾಕ್ ಪ್ರಧಾನಿ ಆದಿಲ್ ಅಬ್ದುಲ್ ಮಹ್ದಿಯನ್ನು ಭೇಟಿಯಾಗುವ ಕಾರ್ಯಕ್ರಮವಿತ್ತು. ಆದರೆ, ಬಳಿಕ ಭೇಟಿಯನ್ನು ರದ್ದುಪಡಿಸಿ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದರು.

ಫೋನ್ ಸಂಭಾಷಣೆಯಲ್ಲಿ ಟ್ರಂಪ್ ಇರಾಕ್ ಪ್ರಧಾನಿಯನ್ನು ವಾಶಿಂಗ್ಟನ್‌ಗೆ ಆಹ್ವಾನಿಸಿದರು. ಆಹ್ವಾನವನ್ನು ಅಬ್ದುಲ್ ಮಹದಿ ಸ್ವೀಕರಿಸಿದರು ಎಂದು ಶ್ವೇತಭವನದ ವಕ್ತಾರೆ ಸಾರಾ ಸ್ಯಾಂಡರ್ಸ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X