Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರೊ. ಹಿಲ್ಡಾ ರಾಯಪ್ಪನ್‌ಗೆ ‘ಕರಾವಳಿ’...

ಪ್ರೊ. ಹಿಲ್ಡಾ ರಾಯಪ್ಪನ್‌ಗೆ ‘ಕರಾವಳಿ’ ಗೌರವ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ28 Dec 2018 8:46 PM IST
share
ಪ್ರೊ. ಹಿಲ್ಡಾ ರಾಯಪ್ಪನ್‌ಗೆ ‘ಕರಾವಳಿ’ ಗೌರವ ಪ್ರಶಸ್ತಿ

ಮಂಗಳೂರು, ಡಿ.28: ಕರಾವಳಿ ಉತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆಗೈದಿರುವ ಓರ್ವ ಸಾಧಕರಿಗೆ ಕರಾವಳಿ ಗೌರವ ಪ್ರಶಸ್ತಿಯನ್ನು ನೀಡಲಾಗುತ್ತದೆ. ಅದರಂತೆ ಈ ಬಾರಿ ಕರಾವಳಿ ಗೌರವ ಪ್ರಶಸ್ತಿಗೆ ಪ್ರೊ.ಹಿಲ್ಡಾ ರಾಯಪ್ಪನ್ ಅವರನ್ನು ಸಮಿತಿಯು ಆಯ್ಕೆ ಮಾಡಿದೆ.

ಡಿ.30ರಂದು ಸಂಜೆ 5:30ಕ್ಕೆ ಪಣಂಬೂರು ಕಡಲ ಕಿನಾರೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರೊ. ಹೀಲ್ಡಾ ರಾಯಪ್ಪನ್ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಸಮಾಜದ ಬಡತನ, ನೋವು, ವೇದನೆಗಳ ಒಳ ಆಯಾಮಗಳನ್ನು ಕಂಡ ಪ್ರೊ. ಹಿಲ್ಡಾ ರಾಯಪ್ಪನ್ ಸಮಾಜಸೇವೆಯ ಮೂಲಕ ತನ್ನೊಳಗಿನ ಅಂತರಂಗದ ಒಡಲನ್ನು ಕಡಲನ್ನಾಗಿ ಹರಿಯ ಬಿಟ್ಟಿದ್ದರು. ಅದರ ಪರಿಣಾಮವಾಗಿ 1987ರಲ್ಲಿ ಕೌನ್ಸಿಲಿಂಗ್ ಸೇವಾ ಕಾರ್ಯಕ್ಕೆ ಸಾಂಸ್ಥಿಕ ರೂಪು ನೀಡಿ ಪ್ರಜ್ಞಾ ಸಲಹಾ ಕೇಂದ್ರ ಸ್ಥಾಪಿಸಿದ್ದರು. ಇದು ಮಂಗಳೂರಿನ ಪ್ರಪ್ರಥಮ ಕೌಟುಂಬಿಕ ಸಲಹಾ ಕೇಂದ್ರವಾಗಿಯೂ ಗುರುತಿಸಲ್ಪಟ್ಟಿವೆ.

ಎಲ್ಲಾ ವರ್ಗದ ಜನರ ಕೌಟುಂಬಿಕ, ಮಾನಸಿಕ ಸಮಸ್ಯೆಗಳಿಗೆ ಪರಿಹಾರ ನೀಡಿ, ಮುದುಡಿದ ಮನಸ್ಸುಗಳನ್ನು ಅರಳಿಸಲು, ಒಡೆದ ಮನಸ್ಸುಗಳನ್ನು ಬೆಸೆಯಲು ಆಪ್ತ ಸಮಾಲೋಚನೆಯನ್ನು ಪರಿಹಾರ ತಂತ್ರವಾಗಿ ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತಂದು ಕಾರ್ಯಸಾಧಿಸಿರುವ ಕೀರ್ತಿ ಹಿಲ್ಡಾ ರಾಯಪ್ಪನ್‌ಗೆ ಸಲ್ಲುತ್ತದೆ.

ಮಕ್ಕಳಿಗಾಗಿ ನಿರ್ಗತಿಕ ಮಕ್ಕಳ ಕುಟೀರ, ಬಾಲ ಕಾರ್ಮಿಕ ಮಕ್ಕಳ ರಕ್ಷಣೆ ಮತ್ತು ಶಿಕ್ಷಣ, ಚಿಣ್ಣರ ತಂಗುದಾಣ, ಮಕ್ಕಳ ನಿಧಿ ಮುಂತಾದ ಚಟುವಟಿಕೆಗಳಿಂದ ನೊಂದ ಮಕ್ಕಳಿಗೆ ಆಶ್ರಯ ನೀಡಿರುವ ಹಿಲ್ಡಾ ರಾಯಪ್ಪನ್ ಮಹಿಳೆಯರನ್ನು ಕೇಂದ್ರೀಕರಿಸಿ ಅಲ್ಪಾವಧಿ ವಸತಿ ಗೃಹ, ಸ್ವಾಧಾರ ಗೃಹ, ಸಾಂತ್ವನ ಮಹಿಳಾ ಸಹಾಯವಾಣಿ, ಮಹಿಳಾ ಸ್ವಸಹಾಯ ಗುಂಪುಗಳು ಮೊದಲಾದವುಗಳನ್ನು ಸ್ಥಾಪಿಸಿ ಶೋಷಿತ ಮಹಿಳೆಯರ ಬದುಕಿಗೆ ಆಸರೆಯಾಗಿರುತ್ತಾರೆ.

ಪುರುಷರನ್ನು ಕೇಂಧ್ರೀಕರಿಸಿ ಅಮಲು ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ ಸ್ಥಾಪಿಸುವ ಮೂಲಕ ಪ್ರಜ್ಞಾ ಸಲಹಾ ಕೇಂದ್ರವು ಅನೇಕ ಕುಟುಂಬಗಳ ಬದುಕಿಗೆ ಬೆಳಕು ನೀಡುತ್ತಾ ಸಮಾಜಕ್ಕೊಂದು ಮಾದರಿ ಸಂಸ್ಥೆಯಾಗಿ ಬೆಳೆದುಬಂದಿವೆ.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ 125ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅತ್ಯುತ್ತಮ ವಿದ್ಯಾರ್ಥಿ ಎಂಬ ಪುರಸ್ಕಾರ (1996), ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾಜ ಸೇವೆಗಾಗಿ ಗೌರವ (1997), ಟ್ರೈನಿಂಗ್ ಸೆಂಟರ್‌ನಿಂದ ಸಮಾಜ ಸೇವೆಗಾಗಿ ಗೌರವ (1998), ಸೈಂಟ್ ಆಗ್ನೇಸ್ ಮಹಿಳಾ ಕಾಲೇಜಿನಲ್ಲಿ ಮಹಿಳೆಯರ ಸಬಲೀಕರಣ ಮತ್ತು ಅಭಿವೃದ್ಧಿಗಾಗಿ ಸನ್ಮಾನ (2000), ರೋಟರಿ ಕ್ಲಬ್ ಮಂಗಳೂರು ಇವರಿಂದ ಸಮಾಜಕ್ಕೆ ಅಮೂಲ್ಯ ಸೇವೆ ನೀಡಿದ್ದಕ್ಕಾಗಿ ಗೌರವ (2002), ರೋಶನಿ ನಿಲಯ ಹಳೆ ವಿದ್ಯಾರ್ಥಿ ಸಂಘದಿಂದ ಸಮಾಜ ಸೇವಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದಕ್ಕಾಗಿ ಗೌರವ (2007), ರಚನಾ ಫೌಂಡೇಶನ್ ಸಂಸ್ಥೆಯ ವತಿಯಿಂದ ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ್ದಕ್ಕಾಗಿ ಪ್ರಶಸ್ತಿ (2012), ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಗೌರವ ಪುರಸ್ಕಾರಗಳು ಪ್ರೊ. ಹಿಲ್ಡಾ ರಾಯಪ್ಪನ್ ಅವರನ್ನು ಅರಸಿಕೊಂಡು ಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X