Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನಗೆ ಇವತ್ತೇ ಶಿಕ್ಷೆ ಕೊಟ್ಟುಬಿಡಿ:...

ನನಗೆ ಇವತ್ತೇ ಶಿಕ್ಷೆ ಕೊಟ್ಟುಬಿಡಿ: ಕೋರ್ಟ್‌ಗೆ ಮನವಿ ಮಾಡಿದ ಆರೋಪಿ

ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 Dec 2018 9:33 PM IST
share

ಬೆಂಗಳೂರು, ಡಿ.28: ಎಟಿಎಂನಲ್ಲಿ ಹಣ ತೆಗೆಯಲು ಬಂದಿದ್ದ ಜ್ಯೋತಿ ಉದಯ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ 65ನೆ ಸೆಷನ್ಸ್ ನ್ಯಾಯಾಲಯ ವಿಚಾರಣೆ ನಡೆಸಿತು.

ಪ್ರಕರಣದ ಆರೋಪಿ ಮಧುಕರ್ ರೆಡ್ಡಿ, ಎಟಿಎಂನಲ್ಲಿ ಹಲ್ಲೆ ಮಾಡಿದ್ದು ನಾನೇ ಎಂದು ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ನಾಯಾಧೀಶರ ಮುಂದೆ ಆರೋಪಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರಣೆ ಬೇಡ. ನಾನೇ ತಪ್ಪು ಮಾಡಿದ್ದು. ನನಗೆ ಇಂದೇ ಶಿಕ್ಷೆ ನೀಡಿ ಎಂದು ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡಿದ್ದಾನೆ. ನನ್ನ ಪರವಾಗಿ ಯಾವುದೇ ವಕೀಲರು ಬೇಡ. ದಯವಿಟ್ಟು ಇವತ್ತೇ ನನಗೆ ಶಿಕ್ಷೆ ನೀಡಿ ಸ್ವಾಮಿ ಎಂದು ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡಿದ್ದಾನೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ನ್ಯಾಯಾಧೀಶರು, ನೀವು ಮಾಡಿರುವುದು ಜೀವಾವಧಿ ಶಿಕ್ಷೆ ನೀಡುವ ಪ್ರಕರಣ. ಪ್ರಕರಣದ ಬಗ್ಗೆ ತಪ್ಪುಒಪ್ಪಿಕೊಂಡ ತಕ್ಷಣ ನಿಮಗೆ ಕಡಿಮೆ ಶಿಕ್ಷೆಯಾಗುತ್ತೆ ಅಂತ ಹೇಳಲು ಆಗಲ್ಲ. ವಕೀಲರ ನೇಮಕದ ಬಗ್ಗೆ ಪೊಲೀಸರ ಜೊತೆ ಚರ್ಚಿಸಿ ತಿಳಿಸಿ ಎಂದು ಆರೋಪಿಗೆ ಸೂಚಿಸಿದ್ದಾರೆ. ಇದೇ ವೇಳೆ, ಪ್ರಕರಣದ ವಿಚಾರಣೆಯನ್ನು ಜನವರಿ 7ಕ್ಕೆ ನ್ಯಾಯಾಲಯ ಮುಂದೂಡಿದೆ.

ಪ್ರಕರಣವೇನು: 2013ರ ನವೆಂಬರ್ 19ರ ಬೆಳಗ್ಗೆ 7.10ರ ವೇಳೆ ಈ ಪ್ರಕರಣ ಎಸ್.ಜೆ.ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಪೋರೇಷನ್ ಸರ್ಕಲ್‌ನಲ್ಲಿ ನಡೆದಿತ್ತು. ಜ್ಯೋತಿ ಉದಯ್ ಎಂಬುವರು ತಮ್ಮ ಮಗಳ ಹುಟ್ಟುಹಬ್ಬಕ್ಕೆ ವಸ್ತುಗಳ ಖರೀದಿಗೆಂದು ಹಣ ಡ್ರಾ ಮಾಡಲು ಎಟಿಎಂಗೆ ಬಂದಿದ್ದರು. ಈ ವೇಳೆ ಕಾರ್ಪೋರೇಷನ್ ಎಟಿಎಂ ಬಾಗಿಲನ್ನು ಮುಚ್ಚಿ, ಅವರ ಮೇಲೆ ಹಲ್ಲೆ ಮಾಡಲಾಗಿತ್ತು. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿಗಾಗಿ ಜಾಲ ಬೀಸಿದ್ದ ಪೊಲೀಸರು, ಆರೋಪಿಯನ್ನು ಆಂಧ್ರದ ಮದನಪಲ್ಲಿಯಲ್ಲಿ ಬಂಧಿಸಿದ್ದರು.

ಇನ್ನು, ಹಲ್ಲೆಗೊಳಗಾದ ಜ್ಯೋತಿ ಉದಯ್, ಕಾರ್ಪೊರೇಷನ್ ಬ್ಯಾಂಕ್ ಮಿಷನ್ ರೋಡ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಸೇವೆಯಲ್ಲಿದ್ದರು. ಘಟನೆಯಲ್ಲಿ ಅವರ ಬಲಗೈ ಮತ್ತು ಬಲಗಾಲು ಸ್ವಾಧೀನ ಕಳೆದುಕೊಂಡಿತ್ತು. ಗಾಯಗೊಂಡಿದ್ದ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ 6 ತಿಂಗಳ ಚಿಕಿತ್ಸೆ ನಂತರ ಚೇತರಿಕೆ ಕಂಡಿದ್ದರು. ಬಳಿಕ ಅವರನ್ನು ಆರ್.ಟಿ.ನಗರ ಕಾರ್ಪೊರೇಷನ್ ಬ್ಯಾಂಕ್‌ಗೆ ವರ್ಗಾವಣೆ ಮಾಡಲಾಗಿತ್ತು. ಘಟನೆ ನಡೆದ ವೇಳೆ ಪೊಲೀಸರು 10 ಕ್ಕೂ ಹೆಚ್ಚು ತಂಡಗಳನ್ನ ರಚಿಸಿ ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ಸೇರಿದಂತೆ ಅನೇಕ ಕಡೆ ಹುಡುಕಾಟ ನಡೆಸಲಾಗಿತ್ತು. ಸುಳಿವು ನೀಡಿದವರಿಗೆ ರಾಜ್ಯ ಸರಕಾರ 10 ಲಕ್ಷ ಬಹುಮಾನ ಘೋಷಿಸಿತ್ತು. ಆದರೆ ಅರೋಪಿ ಯಾರಿಗೂ ಸಿಗದಂತೆ ತಲೆ ಮರೆಸಿಕೊಂಡಿದ್ದ. ಆದರೆ ಮದನಪಲ್ಲಿ ಪೊಲೀಸರು ಬೇರೆ ಪ್ರಕರಣದಲ್ಲಿ ಕೆಲ ಆರೋಪಿಗಳನ್ನು ಬಂಧಿಸಿದ್ದರು.

ಬಂಧಿತ ಆರೋಪಿಗಳು ಜೈಲ್‌ನಲ್ಲಿ ಮಧುಕರ್ ಬಗ್ಗೆ ಮಾತನಾಡುತ್ತಿದ್ದರು. ಇದನ್ನ ಗಮನಿಸಿದ ಪೇದೆಯೊಬ್ಬರು ವಿಚಾರಣೆ ಮಾಡಿದ್ದರು. ಆನಂತರ ಆರೋಪಿಯನ್ನ ಮದನಪಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ ಬೆಂಗಳೂರು ಎಸ್.ಜೆ.ಪಾರ್ಕ್ ಪೊಲೀಸರು ಬಾಡಿ ವಾರೆಂಟ್ ಮೇಲೆ ಕರೆತಂದು ಶುಕ್ರವಾರ ನ್ಯಾಯಾಧೀಶ ರಾಜೇಶ್ವರ ಮುಂದೆ ಹಾಜರು ಪಡಿಸಿದ್ದಾರೆ. ಆದರೆ ಸರಕಾರದ ಪರ ವಕೀಲರಿಲ್ಲದ ಕಾರಣ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X