Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬ್ರಾಂಚ್ ಬದಲಿಸಿದ ವಿಚಾರ:...

ಬ್ರಾಂಚ್ ಬದಲಿಸಿದ ವಿಚಾರ: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಹೈಕೋರ್ಟ್ ತುರ್ತು ನೋಟಿಸ್

ವಾರ್ತಾಭಾರತಿವಾರ್ತಾಭಾರತಿ28 Dec 2018 10:21 PM IST
share
ಬ್ರಾಂಚ್ ಬದಲಿಸಿದ ವಿಚಾರ: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಹೈಕೋರ್ಟ್ ತುರ್ತು ನೋಟಿಸ್

ಬೆಂಗಳೂರು, ಡಿ.28: ಇಂಜಿನಿಯರಿಂಗ್ ಕೋರ್ಸ್‌ನ 3ನೇ ಸೆಮಿಸ್ಟರ್‌ನಲ್ಲಿ ಬ್ರಾಂಚ್ ಬದಲಿಸಿದ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆ ವಿಚಾರದಲ್ಲಿ ತಟಸ್ಥ ಧೋರಣೆ ತಳೆದಿರುವ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.

ಈ ಕುರಿತಂತೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿಯ ಬಿ.ಇ 3ನೆ ಸೆಮಿಸ್ಟರ್ ವಿದ್ಯಾರ್ಥಿ ಬಿ. ಸಾತ್ವಿಕ್ ಸೇರಿ ವಿವಿಧ ವಿಭಾಗಗಳ 14 ವಿದ್ಯಾರ್ಥಿಗಳು ಸಲ್ಲಿಸಿದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಬಿ. ವೀರಪ್ಪ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ತಾಂತ್ರಿಕ ವಿವಿಗೆ ತುರ್ತು ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು. ಅದೇ ರೀತಿ ಅರ್ಜಿಯ ಅಂತಿಮ ಇತ್ಯರ್ಥಕ್ಕೊಳಪಡುವಂತೆ ಬ್ರಾಂಚ್ ಬದಲಿಸಿದ ವಿದ್ಯಾರ್ಥಿಗಳಿಗೆ ಇದೇ ಡಿ.31ರಿಂದ ಆರಂಭಗೊಳ್ಳುತ್ತಿರುವ 3ನೇ ಸೆಮಿಸ್ಟರ್‌ನ ಅಂತಿಮ ಪರೀಕ್ಷೆಗೆ ಅವರು ಬದಲಾಯಿಸಿಕೊಂಡಿರುವ ಬ್ರಾಂಚ್‌ನ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆಯೂ ನ್ಯಾಯಪೀಠ ವಿವಿಗೆ ನಿರ್ದೇಶನ ನೀಡಿತು.

ವಿಚಾರಣೆ ವೇಳೆ ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಪಿ.ಪಿ. ಹೆಗ್ಡೆ, ಇಂಜಿನಿಯರಿಂಗ್ ಕೋರ್ಸ್‌ನ 3ನೇ ಸೆಮಿಸ್ಟರ್‌ನಲ್ಲಿ ಬ್ರಾಂಚ್ ಬದಲಿಸಿಕೊಳ್ಳಲು ಅವಕಾಶವಿದೆ. ಅದರಂತೆ 2017ರಲ್ಲಿ ಇನ್‌ಫಾರ್ಮೇಷನ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ಬ್ರಾಂಚ್ ಆಯ್ಕೆ ಮಾಡಿಕೊಂಡಿದ್ದ ಅರ್ಜಿದಾರ ವಿದ್ಯಾರ್ಥಿ 3ನೇ ಸೆಮಿಸ್ಟರ್‌ನಲ್ಲಿ ಅದನ್ನು ಬದಲಿಸಿಕೊಂಡು ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ಬ್ರಾಂಚ್ ಆಯ್ಕೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾಲೇಜು ಒಪ್ಪಿಗೆ ನೀಡಿದೆ. 2018ರ ಆಗಸ್ಟ್ 30ರಿಂದ 3ನೇ ಸೆಮಿಸ್ಟರ್ ತರಗತಿಗಳು ಆರಂಭಗೊಂಡಿವೆ. ನಿಗದಿತ ಶುಲ್ಕ ಪಾವತಿಸಿ ಬದಲಾಯಿಸಿಕೊಂಡ ಬ್ರಾಂಚ್‌ನ 3ನೇ ಸೆಮಿಸ್ಟರ್‌ನ ಎಲ್ಲ ಥಿಯರಿ, ಪ್ರಾಕ್ಟಿಕಲ್ ಮತ್ತು ಇಂಟರ್‌ನಲ್ ಅಸೆಸ್‌ಮೆಂಟ್ ಪರೀಕ್ಷೆಗಳಿಗೆ ಹಾಜರಾಗಿದ್ದಾರೆ.

ಬ್ರಾಂಚ್ ಬದಲಿಸಿದ್ದರ ಬಗ್ಗೆ ಕಾಲೇಜು ವಿವಿಗೆ ಅಗತ್ಯ ಮಾಹಿತಿ ಸಹ ರವಾನಿಸಿದೆ. ಆದರೆ, ಅಂತಿಮ ಪರೀಕ್ಷೆಗಳು ಡಿ.31ರಂದು ಆರಂಭಗೊಳ್ಳಲಿದ್ದು, ಇಲ್ಲಿವರೆಗೆ ವಿವಿ ಏನನ್ನೂ ಹೇಳಿಲ್ಲ. ಹಾಗಾಗಿ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆತಂಕಗೊಂಡಿದ್ದಾರೆ. ಬ್ರಾಂಚ್ ಬದಲಿಸಲು ವಿದ್ಯಾರ್ಥಿಗಳಿಗೆ ಅನುಮತಿ ಕೊಡಲು ವಿವಿಗೆ ನಿರ್ದೇಶನ ನೀಡುವಂತೆ ಕೋರಿದರು. ಅಲ್ಲದೇ ಹೈಕೋರ್ಟ್ ಮೆಟ್ಟಿಲೇರಿರುವ ಬ್ರಾಂಚ್ ಬದಲಿಸಿರುವ ಇತರ ವಿಭಾಗಗಳ ವಿದ್ಯಾರ್ಥಿಗಳ ಕೋರಿಕೆಯೂ ಇದೆ ಆಗಿದೆ ಎಂದು ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, 3ನೇ ಸೆಮಿಸ್ಟರ್‌ನಲ್ಲಿ ಬ್ರಾಂಚ್ ಬದಲಿಸಲು ಅವಕಾಶವಿರುವ ಬಗ್ಗೆ ನಿರ್ದಿಷ್ಟ ಮಾರ್ಗಸೂಚಿಗಳೇನಾದರೂ ಇದ್ದರೆ ತೋರಿಸಿ ಎಂದು ಅರ್ಜಿದಾರ ಪರ ವಕೀಲರನ್ನು ಪ್ರಶ್ನಿಸಿದರು. ಇದಕ್ಕೆ ‘ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ’ಯ (ಎಐಸಿಇಟಿ) ಮಾರ್ಗಸೂಚಿಗಳನ್ನು ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು. ಎಐಸಿಇಟಿ ಮಾರ್ಗಸೂಚಿಗಳನ್ನು ಪರಿಗಣಿಸಿದ ಹಾಗೂ ವಕೀಲರ ವಾದವನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿಯ ಅಂತಿಮ ಇತ್ಯರ್ಥಕ್ಕೊಳಪಡುವಂತೆ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ವಿವಿಗೆ ನಿರ್ದೇಶನ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X