Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಸಕ್ತ ವರ್ಷದ ವಿದ್ಯಾರ್ಥಿಗಳಿಗೆ ಸಿಗದ...

ಪ್ರಸಕ್ತ ವರ್ಷದ ವಿದ್ಯಾರ್ಥಿಗಳಿಗೆ ಸಿಗದ 'ಸೈಕಲ್ ಭಾಗ್ಯ': ಬನ್ನಡ್ಕ ಶಾಲೆಯಲ್ಲೇ ಉಳಿದುಕೊಂಡ ಬೈಸಿಕಲ್‍ಗಳು

ವಾರ್ತಾಭಾರತಿವಾರ್ತಾಭಾರತಿ28 Dec 2018 10:35 PM IST
share
ಪ್ರಸಕ್ತ ವರ್ಷದ ವಿದ್ಯಾರ್ಥಿಗಳಿಗೆ ಸಿಗದ ಸೈಕಲ್ ಭಾಗ್ಯ: ಬನ್ನಡ್ಕ ಶಾಲೆಯಲ್ಲೇ ಉಳಿದುಕೊಂಡ ಬೈಸಿಕಲ್‍ಗಳು

ಮೂಡುಬಿದಿರೆ, ಡಿ. 28 : ಕಳೆದ 10 ವರ್ಷಗಳಿಂದ ಸರಕಾರವು ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್‍ಗಳನ್ನು ನೀಡುತ್ತಾ ಬರುತ್ತಿತ್ತು. ಆದರೆ ಪ್ರಸಕ್ತ ವರ್ಷದಲ್ಲಿ ಮೂಡುಬಿದಿರೆ ವಲಯದ ವಿದ್ಯಾರ್ಥಿಗಳಿಗೆ ವಿತರಿಸಬೇಕಾದ ಸೈಕಲ್‍ಗಳು ಸುಮಾರು ಮೂರು ತಿಂಗಳುಗಳಿಂದ ಬನ್ನಡ್ಕದ ಪಾಡ್ಯಾರು ಸರಕಾರಿ ಪ್ರಾಥಮಿಕ ಶಾಲೆಯಲ್ಲೆ ಉಳಿದುಕೊಳ್ಳುವ ಮೂಲಕ ವಿದ್ಯಾರ್ಥಿಗಳು "ಸೈಕಲ್ ಭಾಗ್ಯ"ದಿಂದ ವಂಚಿತರಾಗುವಂತೆ ಮಾಡಿದೆ. 

ಸರಕಾರವು  ಹೀರೊ ಕಂಪೆನಿಯ 898 ಸೈಕಲ್‍ಗಳನ್ನು ಮೂಡುಬಿದಿರೆ ವಲಯದ ಒಂಬತ್ತು ಸರಕಾರಿ ಪ್ರೌಢಶಾಲೆ, ಒಂಬತ್ತು ಅನುದಾನಿತ ಪ್ರೌಢಶಾಲೆ ಮತ್ತು 5 ಉನ್ನತೀಕರಿಸಿದ ಶಾಲೆಗಳ ವಿದ್ಯಾರ್ಥಿಗಳಿಗೆ ಈ ವರ್ಷ ಮಂಜೂರು ಮಾಡಿತ್ತು. ಅದರಂತೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ಬನ್ನಡ್ಕ ಶಾಲಾ ಮೈದಾನಕ್ಕೆ ಸೈಕಲ್‍ಗಳ ಬಿಡಿಭಾಗಗಳನ್ನು ತಂದು ಹಾಕಿಸಿ ಅದನ್ನು ಜೋಡಿಸುವ ಕಾರ್ಯಕ್ಕೆ  ಸುಮಾರು 6 ಮಂದಿ ಕಾರ್ಮಿಕರನ್ನು ನೇಮಿಸಿ ಕೆಲಸ ಮಾಡಿಸಿತ್ತು. ಜೋಡಿಸುವ ಕೆಲಸ ಪೂರ್ಣಗೊಂಡು ಸುಮಾರು ಎರಡು ತಿಂಗಳು ಕಳೆದರೂ ಸೈಕಲ್‍ಗಳು ಮಾತ್ರ ವಿದ್ಯಾರ್ಥಿಗಳಿಗೆ ವಿತರಣೆಯಾಗದೆ ಇನ್ನೂ ಅದೇ ಸ್ಥಳದಲ್ಲಿವೆ.

ಗುಣಮಟ್ಟವಿಲ್ಲದ ಕಾರಣಕ್ಕೆ ತಡೆ: ರಾಜ್ಯದ ಕೆಲವೆಡೆ ಈ ವರ್ಷ ವಿತರಿಸಿದ ಸೈಕಲ್‍ಗಳು ದೋಷಪೂರಿತವಾಗಿದ್ದ ಬಗ್ಗೆ ಇಲಾಖೆಗೆ ದೂರುಗಳು ಹೋದ ಹಿನ್ನೆಲೆಯಲ್ಲಿ ಗುಣಮಟ್ಟ ಪರಿಶೀಲಿಸಿದ ಬಳಿಕವೆ ಸೈಕಲ್‍ಗಳನ್ನು ವಿತರಿಸಬೇಕೆಂದು ಸರಕಾರ ಎಲ್ಲಾ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶ ನೀಡಿದ್ದರಿಂದ ಮೂಡುಬಿದಿರೆಯಲ್ಲು ಸೈಕಲ್‍ಗಳ ವಿತರಣೆಯನ್ನು ತಡೆಹಿಡಿಯಲಾಗಿದೆ ಎನ್ನಲಾಗಿದೆ.

ಗುಣಮಟ್ಟ ಪರಿಶೀಲಿಸಿದ ಅಧಿಕಾರಿಗಳು : ಸರಕಾರದ ಆದೇಶದಂತೆ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಅಶಾ ನೇತ್ರತ್ವದ ತಂಡವು ಈಚೆಗೆ ಬನ್ನಡ್ಕಕ್ಕೆ ತೆರಳಿ  ಸೈಕಲ್‍ಗಳ ಗುಣಮಟ್ಟ ಪರಿಶೀಲಿಸಿತು. ಕೆಲವು ಸೈಕಲ್‍ಗಳಲ್ಲಿ ದೋಷ ಇರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದಾರೆ ಎನ್ನಲಾಗಿದೆ. ದೋಷ ಇರುವ ಸೈಕಲ್‍ಗಳು ಮರುದುರಸ್ತಿಯಾದ ಬಳಿಕ ಮುಂದಿನ ಜನವರಿಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೆ ಸರಕಾರ ಆದೇಶಿಸಬಹುದೆನ್ನಲಾಗಿದೆ.

ಗುಣಮಟ್ಟದ ಕೊರತೆಯ ಹಿನ್ನೆಲೆಯಲ್ಲಿ ಸೈಕಲ್‍ಗಳ ವಿತರಣೆಯನ್ನು ತಡೆಹಿಡಿಯಲಾಗಿದೆ. ಸರಕಾರದ ಆದೇಶದಂತೆ ಸೈಕಲ್‍ಗಳ ಗುಣಮಟ್ಟವನ್ನು ಪರಿಶೀಲಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದೇನೆ. ಶೀಘ್ರದಲ್ಲೆ ಸೈಕಲ್‍ಗಳ ವಿತರಣೆಗೆ ಸರಕಾರ ಆದೇಶಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಶಾ ಮಾದ್ಯಮಕ್ಕೆ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X