Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ದಂತ ಮಹಾವಿದ್ಯಾಲಯಕ್ಕೆ ಲೇಸರ್...

ಸರಕಾರಿ ದಂತ ಮಹಾವಿದ್ಯಾಲಯಕ್ಕೆ ಲೇಸರ್ ಚಿಕಿತ್ಸಾ ಲ್ಯಾಬ್ ಕೊಡುಗೆ: ರಾಜೀವ್‌ ಗಾಂಧಿ ವಿವಿ ಕುಲಪತಿ ಡಾ.ಸಚ್ಚಿದಾನಂದ್

ವಾರ್ತಾಭಾರತಿವಾರ್ತಾಭಾರತಿ28 Dec 2018 11:21 PM IST
share

ಬೆಂಗಳೂರು, ಡಿ.28: ವಜ್ರ ಮಹೋತ್ಸವದ ಹಿನ್ನೆಲೆಯಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಸರಕಾರಿ ದಂತ ಮಹಾವಿದ್ಯಾಲಯಕ್ಕೆ ಉಚಿತ ಲೇಸರ್ ಚಿಕಿತ್ಸಾ ಲ್ಯಾಬ್ ಕೊಡುಗೆಯಾಗಿ ನೀಡಲಾಗುತ್ತದೆ ಎಂದು ರಾಜೀವ್‌ಗಾಂಧಿ ವಿವಿ ಕುಲಪತಿ ಡಾ.ಸಚ್ಚಿದಾನಂದ್ ಹೇಳಿದ್ದಾರೆ.

ಶುಕ್ರವಾರ ನಗರದ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಸರಕಾರಿ ದಂತ ಮಹಾವಿದ್ಯಾಲಯದ ವಜ್ರ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡು ವಜ್ರ ಮಹೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ನಾಡಿಗೆ ಸರಕಾರಿ ದಂತ ಮಹಾವಿದ್ಯಾಲಯ ಮಾತೃ ಸಂಸ್ಥೆಯಾಗಿದ್ದು, ದೊಡ್ಡ ಆಲದ ಮರದ ರೀತಿ ಬೆಳೆದು ಹಲವು ವೈದ್ಯರನ್ನು ನೀಡಿದೆ. 45 ದಂತ ಮಹಾವಿದ್ಯಾಲಯಗಳಿಗೆ ವೈದ್ಯರನ್ನು, ಶಿಕ್ಷಕರನ್ನು ನೀಡಿದೆ. ಹೀಗಾಗಿ, 41 ಲಕ್ಷ ವೆಚ್ಚದಲ್ಲಿ ಲೇಸರ್ ಚಿಕಿತ್ಸೆಯ ಲ್ಯಾಬ್ ನೀಡಲಾಗುತ್ತದೆ. ಅಲ್ಲದೆ, ಯಾವುದೇ ಆರ್ಥಿಕ ಅಗತ್ಯವಿದ್ದಲ್ಲಿ ರಾಜೀವ್ ಗಾಂಧಿ ವಿವಿಯ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದರು.

ದಂತ ವೈದ್ಯ, ಮನೋರೋಗ ವೈದ್ಯ ಹಾಗೂ ಚರ್ಮ ವೈದ್ಯಕೀಯಕ್ಕೆ ಹೆಚ್ಚು ಪ್ರಾಶಸ್ತ್ಯವಿಲ್ಲದಿದ್ದರೂ ಈಗ ಬಹಳಷ್ಟು ಪ್ರಾಮುಖ್ಯತೆ ಬಂದಿದೆ. ಈ ಮಹಾವಿದ್ಯಾಲಯಕ್ಕೆ ವ್ಯವಸ್ಥಿತ ಕಟ್ಟಡಗಳೂ ಇರದೇ ಇದ್ದರೂ ಮೂರ್ತಿ ಚಿಕ್ಕದು ಕೀರ್ತಿ ದೊಡ್ಡದು ಎಂಬಂತೆ ಇದೆ. ಅಲ್ಲದೆ ಇಲ್ಲಿ ಕಲಿತು ಹೋದ ವಿದ್ಯಾರ್ಥಿಗಳು ತಮ್ಮ ಸಂಪರ್ಕಗಳಿಂದ ಕಾಲೇಜಿಗೆ ಉತ್ತಮ ಹೆಸರು ತರಲಿ ಎಂದು ಆಶಿಸಿದರು.

ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ. ಎಸ್.ಎಸ್.ಹಿರೇಮಠ್ ಮಾತನಾಡಿ, ತಾತ್ಕಾಲಿಕವಾಗಿ ವಿಕ್ಟೋರಿಯಾ ಆಸ್ಪತ್ರೆ ಕಟ್ಟಡದ ಆವರಣದಲ್ಲಿ 1958 ರಲ್ಲಿ ಡಾ.ವಿ.ಆರ್.ನಾಯ್ಡು ನಿರ್ದೇಶನದಲ್ಲಿ ಆರಂಭಗೊಂಡಿತು. ಬಳಿಕ ಡಾ.ರಾಮಚಂದ್ರರ ನೇತೃತ್ವದಲ್ಲಿ ಮೊದಲ ಪ್ರಾಂಶುಪಾಲರಾಗಿ, 1959 ರಲ್ಲಿ ದಂತ ಮಹಾವಿದ್ಯಾಲಯಕ್ಕೆ ಭದ್ರ ಬುನಾದಿ ಹಾಕಿದರು. 1964 ರಲ್ಲಿ ಕಾಲೇಜು ಕಟ್ಟಡ ನಿರ್ಮಾಣವಾಯ್ತು. ದಂತ ವೈದ್ಯಕೀಯ ಸೇವೆಯಲ್ಲಿ ದೇಶದಲ್ಲೇ ಮಾದರಿ ಸಂಸ್ಥೆಯಾಯಿತು ಎಂದರು.

ದಂತ ಕಾಲೇಜು ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ. ದಂತ ವೈದ್ಯಕೀಯ ಓದಬೇಕು ಎಂಬ ಕನಸು ಕಂಡವರಿಗೆ ಆಸರೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಲಕ್ಷಾಂತರ ಹಣ ಖರ್ಚು ಮಾಡಿ ಖಾಸಗಿ ಕಾಲೇಜುಗಳಲ್ಲಿ ಶಿಕ್ಷಣ ಪಡೆಯುತ್ತಿದ್ದರೆ, ಅರ್ಹ ಬಡವರಿಗೆ ಈ ಕಾಲೇಜು ನೆರವು ನೀಡಿದೆ. ಅಲ್ಲದೆ, ಸಾವಿರಾರು ಸಂಖ್ಯೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಮುಖದಲ್ಲಿ ನಗುವನ್ನು ಮರುಸೃಷ್ಟಿಸಿದೆ ಎಂದು ನುಡಿದರು.

ದಂತ ಮಹಾವಿದ್ಯಾಲಯ ಮತ್ತು ಸಂಶೋಧನ ಸಂಸ್ಥೆಯ ನಿರ್ದೇಶಕರಾದ ಡಾ.ಎಂ.ಎ.ಶೇಖರ್ ಮಾತನಾಡಿ, ಆರಂಭದಲ್ಲಿ ಕೆಲವೇ ವಿದ್ಯಾರ್ಥಿಗಳಿಂದ ಆರಂಭಗೊಂಡಿದ್ದ ಕಾಲೇಜು ಇಂದು ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆದು ನಿಂತಿದೆ. ದಂತ ವೈದ್ಯಕೀಯ ಶಾಸ್ತ್ರದ ಎಲ್ಲ 9 ವಿಭಾಗಗಳಲ್ಲಿಯೂ ಸ್ನಾತಕೋತ್ತರ ಪದವಿ ಶಿಕ್ಷಣ ಸಿಗುತ್ತಿದೆ. ಬಾಯಿ ರೋಗ ಪತ್ತೆ ಮತ್ತು ಕ್ಷಕಿರಣ ವಿಭಾಗ ಸೇರಿದಂತೆ ಹಲವಾರು ವಿಭಾಗಗಳಿಂದು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಜ್ರ ಮಹೋತ್ಸವ ಸಮಿತಿ ಸಂಘಟನಾ ಕಾರ್ಯದರ್ಶಿ ಡಾ.ಮಂಜುನಾಥ್ ಪಿ.ಪುರಾಣಿಕ್, ಹಳೆ ವಿದ್ಯಾರ್ಥಿಗಳ ಸಂಘದ ಗೌರವ ಕಾರ್ಯದರ್ಶಿ ಡಾ. ಸೂರ್ಯ ಪೊಡುವಾಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X