Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುವೆಂಪು ಜನರ ಒಳಿತಿಗಾಗಿ ಸಾಹಿತ್ಯ...

ಕುವೆಂಪು ಜನರ ಒಳಿತಿಗಾಗಿ ಸಾಹಿತ್ಯ ರಚಿಸಿದ ಜಗದ ಕವಿ: ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ

ವಾರ್ತಾಭಾರತಿವಾರ್ತಾಭಾರತಿ29 Dec 2018 9:56 PM IST
share
ಕುವೆಂಪು ಜನರ ಒಳಿತಿಗಾಗಿ ಸಾಹಿತ್ಯ ರಚಿಸಿದ ಜಗದ ಕವಿ: ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ

ಬೆಂಗಳೂರು, ಡಿ.29: ರಾಷ್ಟ್ರಕವಿ ಕುವೆಂಪು ಜನರ ಸರ್ವಾಂಗೀಣ ಅಭಿವೃದ್ಧಿಗಾಗಿ ಸಾಹಿತ್ಯವನ್ನು ರಚಿಸುವ ತಪಸ್ಸು ಕೈಗೊಂಡವರು. ಹೀಗಾಗಿ ಅವರನ್ನು ಜಗದ ಕವಿ-ಯುಗದ ಕವಿಯೆಂದು ದ.ರಾ.ಬೇಂದ್ರೆ ಬಣ್ಣಿಸಿದ್ದರು ಎಂದು ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ತಿಳಿಸಿದರು.

ಶನಿವಾರ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ನಗರದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪುರವರ 115ನೆ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕುವೆಂಪುರವರು ಜಗತ್ತಿನ ಪ್ರತಿ ಮನುಷ್ಯನು ವಿಶ್ವ ಮಾನವನಾಗಲು ಸಾಧ್ಯವಿದೆ ಎಂಬುದನ್ನು ಬಲವಾಗಿ ನಂಬಿದ್ದರು. ಹೀಗಾಗಿಯೆ ಅವರ ಪ್ರತಿ ಕವನ, ಕತೆ, ಕಾದಂಬರಿ ಹಾಗೂ ನಾಟಕಗಳಲ್ಲಿ ಮಾನವೀಯತೆ, ಮನುಷ್ಯ ಪ್ರೀತಿಯನ್ನೊಳಗೊಂಡಿದೆ. ಜಾತಿ, ಧರ್ಮ, ವರ್ಗಗಳ ಮೌಢ್ಯಗಳಾಚೆಗಿನ ಬದುಕಿನ ಮೌಲ್ಯವೆ ಕುವೆಂಪು ಸಾಹಿತ್ಯದ ಒಟ್ಟು ಸಾರವೆಂದು ಅವರು ಹೇಳಿದರು.

ಸಾಹಿತ್ಯದಾಚೆಗೆ ಬದುಕುವ ರೀತಿ, ನೀತಿಗಳನ್ನು ರೂಪಿಸಿ, ಅದೇ ಮಾದರಿಯಲ್ಲಿ ಬದುಕಿದವರು ಕುವೆಂಪು. ಲಕ್ಷಾಂತರ ರೂ.ಖರ್ಚು ಮಾಡಿ ಅದ್ಧೂರಿಯಾಗಿ ಮದುವೆಯಾಗುವುದಕ್ಕಿಂತ ಸರಳವಾಗಿ ಮದುವೆಯಾಗುವ ವಿಧಾನವನ್ನು ಮಂತ್ರ ಮಾಂಗಲ್ಯದ ಮೂಲಕ ಹೇಳಿಕೊಟ್ಟಿದ್ದಾರೆ. ಸ್ವತಃ ತಮ್ಮ ಮಗ ಪೂರ್ಣಚಂದ್ರ ತೇಜಸ್ವಿಗೆ ಮಂತ್ರಮಾಂಗಲ್ಯ ರೀತಿಯಲ್ಲಿ ಮದುವೆ ಮಾಡಿಸುವ ಮೂಲಕ ಮಾದರಿಯಾದರು ಎಂದು ಅವರು ಸ್ಮರಿಸಿದರು.

ನಾಡಿನಲ್ಲಿ ಹಲವು ಸಾಹಿತಿಗಳು ಕನ್ನಡ ಭಾಷೆ, ಇಲ್ಲಿನ ಪರಿಸರ ಹಾಗೂ ಸಂಸ್ಕೃತಿಯ ಕುರಿತು ಸಾಕಷ್ಟು ಬರೆದಿರಬಹುದು. ಆದರೆ, ಕುವೆಂಪು ರೀತಿಯಲ್ಲಿ ಕನ್ನಡವನ್ನು ಕಾಯಕದ ರೀತಿಯಲ್ಲಿ ತೊಡಗಿಸಿಕೊಂಡವರು ಮತ್ತೊಬ್ಬ ಕವಿಯನ್ನು ಕಾಣಲಾಗುವುದಿಲ್ಲ. ಅವರ ಪ್ರತಿ ಸಾಹಿತ್ಯದ ಬರವಣಿಗೆಯಲ್ಲಿಯು ಕನ್ನಡತನ ಎಂಬುದು ಹಾಸುಹೊಕ್ಕಾಗಿದೆ ಎಂದು ಅವರು ಬಣ್ಣಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮನು ಬಳಿಗಾರ್ ಮಾತನಾಡಿ, ಕುವೆಂಪುರವರು ತಮ್ಮ ಸಾಹಿತ್ಯದ ಮೂಲಕ ಜಗತ್ತಿಗೆ ನೀಡಿರುವ ತತ್ವಗಳು ಸಾರ್ವಕಾಲಿಕವಾದದ್ದು. ಶೋಷಿತರ ಆತ್ಮಾಭಿಮಾನವನ್ನು ಬಡಿದೆಬ್ಬಿಸುವುದು ಹಾಗೂ ಉಳ್ಳವರಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲು ಪ್ರೇರಣೆಯಾಗುವಂತಹ ಸಾಹಿತ್ಯ ರಚಿಸಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ತಿಮ್ಮಯ್ಯ, ಕನ್ನಡಪರ ಹೋರಾಟಗಾರ ರಾ.ನಂ.ಚಂದ್ರಶೇಖರ ಮತ್ತಿರರಿದ್ದರು.

ರಾಜ್ಯ ಸರಕಾರ ಮುಂದಿನ ಶೈಕ್ಷಣಿಕ ಸಾಲಿನಿಂದ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯುವ ಚಿಂತನೆ ಕೈ ಬಿಡಬೇಕು. ಆದರೆ, ಒಂದು ಭಾಷೆಯಾಗಿ ಇಂಗ್ಲಿಷ್ ಕಲಿಸುವುದಕ್ಕೆ ಯಾವುದೆ ಅಭ್ಯಂತರವಿಲ್ಲ. ಒಂದು ವೇಳೆ ಜನಾಭಿಪ್ರಾಯದ ವಿರುದ್ಧವಾಗಿ ಸರಕಾರ ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ತೆರೆಯಲು ಮುಂದಾದರೆ, ಗೋಕಾಕ್ ರೀತಿಯ ಹೋರಾಟ ನಡೆಸಬೇಕಾದೀತು.

-ಮನು ಬಳಿಗಾರ್, ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X