Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿವಿಐಪಿ ಕಾಪ್ಟರ್ ಪ್ರಕರಣ: ವಿಚಾರಣೆ...

ವಿವಿಐಪಿ ಕಾಪ್ಟರ್ ಪ್ರಕರಣ: ವಿಚಾರಣೆ ವೇಳೆ ‘ಶ್ರೀಮತಿ ಗಾಂಧಿ’ಯನ್ನು ಪ್ರಸ್ತಾಪಿಸಿದ ದಲ್ಲಾಳಿ ಕ್ರಿಶ್ಚಿಯನ್ ಮಿಶೆಲ್

ನ್ಯಾಯಾಲಯದಲ್ಲಿ ಇಡಿ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ29 Dec 2018 10:14 PM IST
share
ವಿವಿಐಪಿ ಕಾಪ್ಟರ್ ಪ್ರಕರಣ: ವಿಚಾರಣೆ ವೇಳೆ ‘ಶ್ರೀಮತಿ ಗಾಂಧಿ’ಯನ್ನು ಪ್ರಸ್ತಾಪಿಸಿದ ದಲ್ಲಾಳಿ ಕ್ರಿಶ್ಚಿಯನ್ ಮಿಶೆಲ್

ಹೊಸದಿಲ್ಲಿ,ಡಿ.29: ಆಗಸ್ಟಾ ವೆಸ್ಟ್‌ಲ್ಯಾಂಡ್‌ನಿಂದ ವಿವಿಐಪಿಗಳಿಗಾಗಿ ಹೆಲಿಕಾಪ್ಟರ್‌ಗಳ ಖರೀದಿ ಹಗರಣದಲ್ಲಿ ದಲ್ಲಾಳಿಯಾಗಿದ್ದ ಕ್ರಿಶ್ಚಿಯನ್ ಮಿಶೆಲ್ ವಿಚಾರಣೆ ವೇಳೆ ‘ಶ್ರೀಮತಿ ಗಾಂಧಿ’ ಎಂಬ ಹೆಸರನ್ನು ಪ್ರಸ್ತಾಪಿಸಿದ್ದಾನೆ ಎಂದು ಜಾರಿ ನಿರ್ದೇಶನಾಲಯ(ಇಡಿ)ವು ಶನಿವಾರ ದಿಲ್ಲಿಯ ಪಟಿಯಾಲಾ ಹೌಸ್ ನ್ಯಾಯಾಲಯಕ್ಕೆ ತಿಳಿಸಿತು. ಆದರೆ ‘ಶ್ರೀಮತಿ ಗಾಂಧಿ’ಯ ಗುರುತಿನ ಕುರಿತು ಮತ್ತು ಯಾವ ಸಂದರ್ಭದಲ್ಲಿ ಮಿಶೆಲ್ ಈ ಹೆಸರನ್ನು ಪ್ರಸ್ತಾಪಿಸಿದ್ದ ಎಂಬ ನಿರ್ದಿಷ್ಟ ವಿವರಗಳನ್ನು ಅದು ನೀಡಲಿಲ್ಲ.

ಮಿಶೆಲ್ ‘ಇಟಲಿಯ ಮಹಿಳೆಯ ಪುತ್ರ’ನ ಬಗ್ಗೆಯೂ ಪ್ರಸ್ತಾಪಿಸಿದ್ದ ಮತ್ತು ಆತ ಹೇಗೆ ‘ದೇಶದ ಮುಂದಿನ ಪ್ರಧಾನಿ’ಯಾಗಲಿದ್ದಾನೆ ಎನ್ನುವುದರ ಬಗ್ಗೆಯೂ ಬಾಯಿಬಿಟ್ಟಿದ್ದ ಎಂದು ಇಡಿ ತಿಳಿಸಿತು. ಈ ವೇಳೆ ಮಿಶೆಲ್‌ನನ್ನು ನ್ಯಾಯಾಲಯವು ಇನ್ನೂ ಏಳು ದಿನಗಳ ಅವಧಿಗೆ ಇಡಿ ವಶಕ್ಕೆ ನೀಡಿತು.

ಮಿಶೆಲ್ ಮತ್ತು ಇತರರ ನಡುವಿನ ಸಂವಹನದಲ್ಲಿ ‘ಆರ್’ ಎಂದು ಪ್ರಸ್ತಾಪಿಸಲಾಗಿರುವ ಆ ‘ದೊಡ್ಡ ವ್ಯಕ್ತಿ’ ಯಾರು ಎನ್ನುವುದನ್ನು ನಾವು ಭೇದಿಸಬೇಕಿದೆ ಎಂದೂ ಇಡಿ ನ್ಯಾಯಾಲಯಕ್ಕೆ ತಿಳಿಸಿತು.

ಇಡಿ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಆರ್‌ಪಿಎನ್ ಸಿಂಗ್ ಅವರು,ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಕರಣದಲ್ಲಿ ಸಿಲುಕಿಸಲು ಬಿಜೆಪಿ ನೇತೃತ್ವದ ಕೇಂದ್ರವು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ನಿರ್ದಿಷ್ಟ ಕುಟುಂಬವನ್ನು ಹೆಸರಿಸುವಂತೆ ಮಿಶೆಲ್ ಮೇಲೆ ಒತ್ತಡವನ್ನು ಹೇರಲಾಗಿದೆ. ಕುಟುಂಬವೊಂದನ್ನು ಹೆಸರಿಸುವಂತೆ ಸರಕಾರಿ ಸಂಸ್ಥೆಗಳ ಮೇಲೆ ಒತ್ತಡ ಹೇರಲು ಚೌಕಿದಾರ್(ಪ್ರಧಾನಿ ಮೋದಿ) ಏಕೆ ಪ್ರಯತ್ನಿಸುತ್ತಿದ್ದಾರೆ? ಬಿಜೆಪಿಯಲ್ಲಿನ ಕಥೆ ಹೆಣೆಯುವ ವ್ಯಕ್ತಿಗಳು ಹೆಚ್ಚುವರಿ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಮಿಶೆಲ್‌ನನ್ನು ಯುಎಇ ಸರಕಾರವು ಡಿ.4ರಂದು ಭಾರತಕ್ಕೆ ಗಡಿಪಾರು ಮಾಡಿದ್ದು,15 ದಿನಗಳ ಕಾಲ ಆತ ಸಿಬಿಐ ವಶದಲ್ಲಿದ್ದ. ಡಿ.22ರಂದು ವಿಶೇಷ ಸಿಬಿಐ ನ್ಯಾಯಾಲಯವು ಆತನನ್ನು ಏಳು ದಿನಗಳ ಅವಧಿಗೆ ಇಡಿ ವಶಕ್ಕೆ ಒಪ್ಪಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X