Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಂಪ್ಯೂಟರ್ ಮಾಹಿತಿಗಳನ್ನು ಭೇದಿಸಲು 10...

ಕಂಪ್ಯೂಟರ್ ಮಾಹಿತಿಗಳನ್ನು ಭೇದಿಸಲು 10 ಏಜೆನ್ಸಿಗಳಿಗೆ ಮುಕ್ತ ಅಧಿಕಾರ ನೀಡಿಲ್ಲ: ಗೃಹ ಸಚಿವಾಲಯದ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ30 Dec 2018 9:29 PM IST
share
ಕಂಪ್ಯೂಟರ್ ಮಾಹಿತಿಗಳನ್ನು ಭೇದಿಸಲು 10 ಏಜೆನ್ಸಿಗಳಿಗೆ ಮುಕ್ತ ಅಧಿಕಾರ ನೀಡಿಲ್ಲ: ಗೃಹ ಸಚಿವಾಲಯದ ಸ್ಪಷ್ಟನೆ

ಹೊಸದಿಲ್ಲಿ,ಡಿ.30: ಯಾವುದೇ ಕಂಪ್ಯೂಟರ್‌ನಿಂದ ಮಾಹಿತಿಗಳನ್ನು ಸಂಗ್ರಹಿಸಲು ಯಾವುದೇ ಏಜೆನ್ಸಿಗೆ ಕೇಂದ್ರ ಸರಕಾರವು ಮುಕ್ತ ಅಧಿಕಾರವನ್ನು ನೀಡಿಲ್ಲ ಮತ್ತು ಅವು ಇಂತಹ ಕ್ರಮವನ್ನು ಕೈಗೊಳ್ಳುವಾಗ ಜಾರಿಯಲ್ಲಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ ಮತ್ತು ಇಂತಹ ಪ್ರತಿಯೊಂದೂ ಕ್ರಮಕ್ಕೂ ಮುನ್ನ ಪೂರ್ವಾನುಮತಿಯನ್ನು ಪಡೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೋರ್ವರು ರವಿವಾರ ಇಲ್ಲಿ ತಿಳಿಸಿದರು.

ಇದು ಹೊಸದಾಗಿ ಜಾರಿಗೊಳಿಸಿರುವ ಕಾನೂನು ಅಲ್ಲ,ಕಂಪ್ಯೂಟರ್‌ಗಳ ಮೇಲೆ ಕಣ್ಗಾವಲು ಇಡುವ ಸಂಸ್ಥೆೆಗಳೂ ಹೊಸದಲ್ಲ. ಮೊದಲಿನಿಂದಲೂ ಜಾರಿಯಲ್ಲಿರುವ ನಿಯಮಗಳಲ್ಲಿ ಒಂದೇ ಒಂದು ಸಣ್ಣ ಬದಲಾವಣೆಯನ್ನೂ ಮಾಡಲಾಗಿಲ್ಲ ಎಂದರು.

ಗೃಹ ಸಚಿವಾಲಯವು ಡಿ.20ರಂದು 10 ಸರಕಾರಿ ಸಂಸ್ಥೆಗಳನ್ನು ಹೆಸರಿಸಿ ಹೊರಡಿಸಿದ್ದ ಅಧಿಸೂಚನೆಯು ರಾಜಕೀಯ ಬಿರುಗಾಳಿಯನ್ನೇ ಸೃಷ್ಟಿಸಿತ್ತು. ‘ಕಣ್ಗಾವಲು ದೇಶ’ವನ್ನು ಸೃಷ್ಟಿಸಲು ಸರಕಾರವು ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

ಅಧಿಸೂಚನೆಯಲ್ಲಿ ಹೆಸರಿಸಲಾಗಿರುವ 10 ಸಂಸ್ಥೆಗಳು 2011ರಿಂದಲೇ ವಿದ್ಯುನ್ಮಾನ ಸಂವಹನಗಳನ್ನು ಛೇದಿಸುವ ಅಧಿಕಾರಗಳನ್ನು ಹೊಂದಿವೆ ಎಂದ ಅಧಿಕಾರಿ,ಯಾವುದೇ ಕಂಪ್ಯೂಟರ್‌ನಿಂದ ಮಾಹಿತಿಯನ್ನು ಭೇದಿಸುವ ಮುನ್ನ ಕೇಂದ್ರ ಅಥವಾ ರಾಜ್ಯ ಗೃಹ ಕಾರ್ಯದರ್ಶಿಗಳ ಪೂರ್ವಾನುಮತಿಯನ್ನು ಪಡೆಯುವುದನ್ನು ಕಡ್ಡಾಯವಾಗಿಸಿರುವ 2011ರ ಪ್ರಮಾಣಿತ ಕಾರ್ಯ ವಿಧಾನ(ಎಸ್‌ಒಪಿ)ವನ್ನು ಅನುಸರಿಸಬೇಕು ಎನ್ನುವುದನ್ನು ಅಧಿಸೂಚನೆಯಲ್ಲಿ ಗೃಹ ಸಚಿವಾಲಯವು ಒತ್ತಿ ಹೇಳಿತ್ತು ಎಂದು ತಿಳಿಸಿದರು.

 ಕಂಪ್ಯೂಟರ್ ಮಾಹಿತಿಗಳನ್ನು ಭೇದಿಸುವ ಮತ್ತು ಅವುಗಳ ಮೇಲೆ ನಿಗಾಯಿರಿಸಲು ನಿಯಮಾವಳಿಗಳನ್ನು 2009ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ಅಧಿಕಾರದಲ್ಲಿದ್ದಾಗ ರೂಪಿಸಲಾಗಿತ್ತು ಮತ್ತು ತನ್ನ ಹೊಸ ಆದೇಶದಲ್ಲಿ ಇಂತಹ ಕಾರ್ಯಾಚರಣೆಗಳನ್ನು ನಡೆಸುವ ನಿಯೋಜಿತ ಸಂಸ್ಥೆಗಳನ್ನು ಮಾತ್ರ ಅಧಿಸೂಚಿಸಲಾಗಿದೆ ಎಂದು ಕೇಂದ್ರ ಸರಕಾರವು ಪ್ರತಿಪಾದಿಸುತ್ತಿದೆ.

2014ರಿಂದೀಚಿಗೆ ದೇಶದಲ್ಲಿ ಮೊಬೈಲ್ ಫೋನ್ ಸಂಪರ್ಕಗಳು ಹೆಚ್ಚಾಗಿದ್ದರೂ ಮಾಹಿತಿ ಸಂಗ್ರಹ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದೂ ಅಧಿಕಾರಿ ತಿಳಿಸಿದರು.

ಸರಕಾರದ ಅಧಿಸೂಚನೆಯನ್ವಯ ನಿಯೋಜಿತ ಸಂಸ್ಥೆಗಳು ಐಟಿ ಕಾಯ್ದೆ,2000ರ ಕಲಂ 69ರಡಿ ದೇಶಾದ್ಯಂತ ಕಂಪ್ಯೂಟರ್‌ಗಳಲ್ಲಿ ಸಂಗ್ರಹಿತ,ಸೃಷ್ಟಿಯಾದ,ರವಾನೆಯಾದ,ಸ್ವೀಕರಿಸಲಾದ ಯಾವುದೇ ಮಾಹಿತಿಯನ್ನು ಪಡೆದುಕೊಳ್ಳುವ ಅಧಿಕಾರವನ್ನು ಹೊಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X