Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂವಿಧಾನದ ವಿರುದ್ಧ ಆಡಳಿತ ನಡೆಸುವವರು...

ಸಂವಿಧಾನದ ವಿರುದ್ಧ ಆಡಳಿತ ನಡೆಸುವವರು ಮನುಷ್ಯ ವಿರೋಧಿಗಳು: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 Dec 2018 10:05 PM IST
share
ಸಂವಿಧಾನದ ವಿರುದ್ಧ ಆಡಳಿತ ನಡೆಸುವವರು ಮನುಷ್ಯ ವಿರೋಧಿಗಳು: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು,ಡಿ.30: ಸಂವಿಧಾನದ ವಿರುದ್ಧ ಆಡಳಿತ ನಡೆಸುವವರು ಮನುಷ್ಯ ವಿರೋಧಿಗಳು, ಅಂತವರನ್ನು ಧಿಕ್ಕರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಮೈಸೂರು-ಹುಣಸೂರು ರಸ್ತೆಯಲ್ಲಿರುವ ಮೈಸೂರು ವಿವಿಯ ರಾಣಿಬಹದ್ದೂರು ಸಭಾಂಗಣದಲ್ಲಿ ರವಿವಾರ ಮೈಸೂರು ವಿಭಾಗೀಯ ಕೇಂದ್ರ, ರಾಜ್ಯ ಸರ್ಕಾರಿ, ಅರೆ ಸರ್ಕಾರಿ ಹಾಗೂ ಅನುದಾನಿತ ಸಂಸ್ಥೆಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಧಿಕಾರಿಗಳು ನೌಕರರ ಪರಿಷತ್ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಭಿನಂದನಾ ಸಮಾರಂಭ ಮತ್ತು ಪ್ರೊ.ಟಿ.ಎಂ.ಮಹೇಶ್ ರವರ “ಕರ್ನಾಟಕ ರಾಜ್ಯದ ಅನ್ನಭಾಗ್ಯ ಯೋಜನೆ ಮತ್ತು ಆಹಾರ ಭದ್ರತೆ” ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ನಂತರ ಅವರು ಮಾತನಾಡಿದರು.

ಸಂವಿಧಾನದ ಆಶಯಗಳ ವಿರುದ್ಧವಾಗಿ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಅಂತವರು ಮನುಷ್ಯ ವಿರೋಧಿಗಳು. ಅವರನ್ನು ಧಿಕ್ಕರಿಸಬೇಕಾಗಿರುವುದು ಕರ್ತವ್ಯ ಮತ್ತು ಜವಾಬ್ದಾರಿಯಾಗಬೇಕು ಎಂದು ಹೇಳಿದರು.

ಸಂವಿಧಾನ ಬದಲಾಬೇಕು, ಅದಕ್ಕಾಗಿ ನಾವು ಅಧಿಕಾರಕ್ಕೆ ಬಂದಿರುವುದು ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳುತ್ತಾರೆ. ಕೆಲವರು ಸಂವಿಧಾನದ ಪ್ರತಿಯನ್ನು ಸುಟ್ಟುಹಾಕುತ್ತಾರೆ. ಕೇಂದ್ರ ಸಚಿವನ ಹೇಳಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅದು ಅವರ ವೈಯಕ್ತಿಕ ಎಂದು ಸಮರ್ಥಿಸಿಕೊಳ್ಳುತ್ತಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಯಾವುದೇ ಮಾತನ್ನು ಆಡದೆ ಮೌನ ವಹಿಸುತ್ತಾರೆ. ಇವರು ಸಂವಿಧಾನದ ಪರ ಇದ್ದಿದ್ದರೆ  ಕೂಡಲೇ ಆತನನ್ನು ಸಚಿವ ಸಂಪುಟದಿಂದ ಕಿತ್ತುಹಾಕಬೇಕಿತ್ತು. ಆದರೆ ಆ ಕೆಲಸವನ್ನು ಮಾಡಲಿಲ್ಲ. ಇಂತಹವರ ಮನಸ್ಥಿಯನ್ನು ಅರ್ಥಮಾಡಿಕೊಳ್ಳದಿದ್ದರೆ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ವಾಜಪೇಯಿ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲೂ ಸಂವಿಧಾನ ಪರಮಾರ್ಶೆಗೆ ಕೈಹಾಕಿದರು. ಮೋದಿ ಆಡಳಿತದ ಅವಧಿಯಲ್ಲಿ ಸಂವಿಧಾನ ಬದಲಾವಣೆಗೆ ನಾವು ಅಧಿಕಾರಕ್ಕೆ ಬಂದಿರುವುದು ಎಂದು ಕೇಂದ್ರ ಸಚಿವ ಹೇಳುತ್ತಾರೆ. ಸಂವಿಧಾನದ ಪ್ರತಿಯನ್ನು ಸುಟ್ಟುಹಾಕುತ್ತಾರೆ. ಸಂವಿಧಾನದ ವಿರುದ್ಧ ಇರುವ ಮನಸ್ಸುಗಳಿಗೆ ಇಂತಹ ಆಲೋಚನೆ ಬಂದು ವ್ಯವಸ್ಥಿತ ಸಂಚನ್ನು ರೂಪಿಸುತ್ತಾರೆ. ಹಾಗಾಗಿ ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವ ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ದಲಿತರಿಗೆ ರಾಜಕೀಯ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಬದಲಾವಣೆ ತರಲು ಸಾಧ್ಯ. ಹಾಗಾಗಿ ನನ್ನ ಅಡಳಿತವಾಧಿಯಲ್ಲಿ ದಲಿತರಿಗಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಾಯಿತು. ಎಸ್ಸಿಪಿ ಟಿಎಸ್ಪಿ ಯೋಜನೆಗಳಲ್ಲಿ ಐದು ವರ್ಷದಲ್ಲಿ 1.12 ಲಕ್ಷ ಕೋಟಿ ರೂ. ನೀಡಲಾಯಿತು. ಹಾಗೆ ಈ ಯೋಜನೆಗೆ ಕಾನೂನನ್ನು ತಂದು ಈ ವರ್ಷ ಪೂರ್ಣಗೊಳಿಸಲಾಗದ ಹಣವನ್ನು ಮುಂದಿನ ವರ್ಷಕ್ಕೆ ವರ್ಗಾಯಿಸಿ ಖರ್ಚುಮಾಡುಂತೆ ಮಾಡಿದೆ. ಹಾಗೆ ಯಾವುದಾದರೂ ಅಧಿಕಾರಿಗಳು ತಲುಪಿಸುವಲ್ಲಿ ವಿಫಲರಾದರೆ ಅಂತಹರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಮಾಡಿದೆ ಎಂದು ಹೇಳಿದರು.

ನನ್ನನ್ನು ಕೆಲವರು ಒರಟ ಎಂದು ಹೇಳುತ್ತಾರೆ. ಸ್ವಾಭಿಮಾನಿಗಳು ಒರಟಾಗಿಯೇ ಇರುತ್ತಾರೆ. ನಾವು ಗುಲಾಮಗಿರಿ ಮನಸ್ಥಿತಿಯಿಂದ ಹೊರಬಂದಿದ್ದೇವಾ ಎಂಬ ಪ್ರಶ್ನೆಯನ್ನು ಹಾಕಿಕೊಳ್ಳಬೇಕಿದೆ. ಸ್ವಾಭಿಮಾನ ಇದ್ದಿದ್ದರಿಂದಲೇ ನಾನು ಹಲವು ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಯಿತು ಎಂದು ಹೇಳಿದರು.

ಇದೇ ವೇಳೆ ಸಿದ್ದರಾಮಯ್ಯ ಅವರಿಗೆ ರೇಷ್ಮೆ ಶಾಲು, ಟಿಪ್ಪು ಸುಲ್ತಾನ್ ಪೇಟಾ ತೊಡಿಸಿ ಅಂಬೇಡ್ಕರ್ ಪುತ್ಥಳಿ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಚಿವ ಆರ್.ಬಿ.ತಿಮ್ಮಾಪುರ್, ಸಂಸದ ಆರ್.ಧ್ರುವನಾರಾಯಣ, ದಲಿತ ವೆಲ್‍ಫೇರ್ ಟ್ರಸ್ಟ್ ಗೌರವಾಧ್ಯಕ್ಷ ಶಾಂತರಾಜು, ಪ್ರೊ.ಟಿ.ಎಂ.ಮಹೇಶ್, ಸಾಹಿತಿ ತಲಕಾಡು ಚಿಕ್ಕರಂಗೇಗೌಡ, ಪೆರಿಯಾರ್ ವಾದಿ ಕಲೈ ಸೆಲ್ಫಿ, ಪೂಜಾರ್, ಮುಡಾ ಮಾಜಿ ಸದಸ್ಯ ಜಯಕುಮಾರ್, ರಾಜರತ್ನಂ, ಶಿವಪ್ಪ, ಶಿವಸ್ವಾಮಿ, ಸುರೇಂದ್ರ, ಕೆ.ಎಸ್.ಶಿವರಾಮು, ರಾಮಯ್ಯ, ನಂದಕುಮಾರ್, ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾಹಿತಿ ಮಾಯಿಗೌಡ, ಪ್ರೊ.ಶಬ್ಬೀರ್ ಮುಸ್ತಾಫ, ಕಲೀಂ, ಮಂಜುಳ ಮಾನಸ, ಸಾಹಿತಿ ಸಿದ್ದಸ್ವಾಮಿ, ಮೈಸೂರು ಬಸವಣ್ಣ, ಸೋಸಲೆ ಮಹೇಶ್, ಕೆಪಿಸಿಸಿ ಸದಸ್ಯ ಎನ್.ಭಾಸ್ಕರ್, ಅಕ್ಬರ್ ಅಲಿ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X