Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಈ ವಿಮಾನಯಾನ ಸಂಸ್ಥೆಯ 5 ಪೈಲಟ್ ಗಳು 10ನೆ...

ಈ ವಿಮಾನಯಾನ ಸಂಸ್ಥೆಯ 5 ಪೈಲಟ್ ಗಳು 10ನೆ ತರಗತಿ ಉತ್ತೀರ್ಣರಾಗಿಲ್ಲ !

ವಾರ್ತಾಭಾರತಿವಾರ್ತಾಭಾರತಿ30 Dec 2018 10:13 PM IST
share
ಈ ವಿಮಾನಯಾನ ಸಂಸ್ಥೆಯ 5 ಪೈಲಟ್ ಗಳು 10ನೆ ತರಗತಿ ಉತ್ತೀರ್ಣರಾಗಿಲ್ಲ !

ಲಾಹೋರ್, ಡಿ.30: ಪಾಕಿಸ್ತಾನ್ ಇಂಟರ್‌ನ್ಯಾಶನಲ್ ಏರ್‌ಲೈನ್ಸ್ (ಪಿಐಎ)ನ ಐದು ಮಂದಿ ಪೈಲಟ್‌ಗಳು 10ನೇ ತರಗತಿಯನ್ನು ಕೂಡಾ ಪಾಸ್ ಮಾಡಿಲ್ಲವೆಂದು, ಪಾಕಿಸ್ತಾನದ ಈ ಸರಕಾರಿ ಸ್ವಾಮ್ಯದ ವಾಯುಯಾನ ಸಂಸ್ಥೆಯು ಶನಿವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಏಳು ಮಂದಿ ಪೈಲಟ್‌ಗಳ ಶೈಕ್ಷಣಿಕ ಅರ್ಹತೆಯು ನಕಲಿಯೆಂದು ಪತ್ತೆಯಾದ ಹಿನ್ನೆಲೆಯಲ್ಲಿ ಅದು ನ್ಯಾಯಾಲಯದ ಮುಂದೆ ಈ ಹೇಳಿಕೆ ನೀಡಿದೆ.

ಮೆಟ್ರಿಕ್ ಪಾಸ್ ಮಾಡಿರದ ವ್ಯಕ್ತಿ ಬಸ್ ಕೂಡಾ ಚಲಾಯಿಸಲು ಸಾಧ್ಯವಿಲ್ಲ. ಹೀಗಿರುವ ಈ ಅವಿದ್ಯಾವಂತ ಮಂದಿ ವಿಮಾನಗಳನ್ನು ಹಾರಿಸುವ ಮೂಲಕ ಜನರ ಪ್ರಾಣವನ್ನು ಅಪಾಯಕ್ಕೆ ದೂಡಿದ್ದಾರೆ ಎಂದು ಈ ಸಂದರ್ಭ ಪ್ರಕರಣದ ಆಲಿಕೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಹ್ಸಾನ್ ಅವರು ಆತಂಕ ವ್ಯಕ್ತಪಡಿಸಿದ್ದಾರೆಂದು ಡಾನ್ ಪತ್ರಿಕೆ ವರದಿ ಮಾಡಿದೆ.

 ತಮ್ಮ ಅಧಿಕೃತ ದಾಖಲೆಗಳನ್ನು ಸಲ್ಲಿಸದೆಯೇ ಉದ್ಯೋಗದಲ್ಲಿದ್ದ ಪಿಐಎನ ಕನಿಷ್ಠ 50 ಮಂದಿ ಉದ್ಯೋಗಿಗಳನ್ನು ಅಮಾನತಿನಲ್ಲಿರಿಸಲಾಗಿದೆಯೆಂದು, ಪಾಕ್ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠಕ್ಕೆ ವಾಯುಯಾನ ಸಂಸ್ಥೆಯು ತಿಳಿಸಿರುವುದಾಗಿ ಪತ್ರಿಕಾ ವರದಿ ಹೇಳಿದೆ.

 ಪಿಐಎ ವಾಯುಯಾನಸಂಸ್ಥೆಯ ಪೈಲಟ್ ಹಾಗೂ ಇತರ ಸಿಬ್ಬಂದಿಯ ಪದವಿಗಳ ದೃಢೀಕರಣಪತ್ರಕ್ಕೆ ಸಂಬಂಧಿಸಿದ ವಿಷಯವನ್ನು ನ್ಯಾಯಪೀಠವು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದರೆ ಈ ಪದವಿಗಳ ದೃಢೀಕರಣ ಪ್ರಕ್ರಿಯೆಯನ್ನು ನಡೆಸಲು ಶೈಕ್ಷಣಿಕ ಮಂಡಳಿಗಳು ಹಾಗೂ ವಿಶ್ವವಿದ್ಯಾನಿಲಯಗಳು ಸಹಕರಿಸುತ್ತಿಲ್ಲವೆಂದು ಪಾಕ್ ನಾಗರಿಕ ವಾಯು ಯಾನ ಪ್ರಾಧಿಕಾರ (ಸಿಎಎ) ತಿಳಿಸಿದೆ. ಪಿಐಎನ 4321 ಉದ್ಯೋಗಿಗಳ ಪ್ರಕರಣಗಳನ್ನು ದೃಢೀಕರಿಸಲಾಗಿದ್ದರೆ, ಉಳಿದ 402 ಪ್ರಕರಣಗಳು ಇನ್ನೂ ವಿಚಾರಣೆಗೆ ಬಾಕಿಯುಳಿದಿವೆ.

ನೇಮಕಗೊಂಡ ಎಲ್ಲಾ 498 ಪೈಲಟ್‌ಗಳು ಹಾಗೂ ಅವರ ಪರವಾನಗಿ ಪರೀಕ್ಷೆಯ ಫಲಿತಾಂಶದ ವಿವರಗಳನ್ನು ತನಗೆ ಸಲ್ಲಿಸುವಂತೆ ನ್ಯಾಯಮೂರ್ತಿ ನಿಸಾರ್, ಪಿಐಎಗೆ ತಿಳಿಸಿದರು.

ಪಿಐಎನಿಂದ 50 ಉದ್ಯೋಗಿಗಳ ವಜಾ

ಪಾಕಿಸ್ತಾನದ ರಾಷ್ಟ್ರೀಯ ವಾಯುಯಾನ ಸಂಸ್ಥೆ ಪಿಐಎ ಮೂವರು ಪೈಲಟ್‌ಗಳು ಸೇರಿದಂತೆ 50 ಮಂದಿ ಉದ್ಯೋಗಿಗಳ ನೇಮಕಾತಿಯ ಗುತ್ತಿಗೆ ಒಪ್ಪಂದಗಳನ್ನು ರದ್ದುಪಡಿಸಿದೆ. ಈ ಉದ್ಯೋಗಿಗಳು ನಕಲಿ ಪದವಿ ಪ್ರಮಾಣಪತ್ರಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆಯೆಂದು ಅದು ಹೇಳಿದೆ.

ನಕಲಿ ಪದವಿ ಪ್ರಮಾಣ ಪತ್ರಗಳನ್ನು ಹೊಂದಿರುವ ಪೈಲಟ್‌ಗಳು ಹಾಗೂ ಇತರ ಕ್ಯಾಬಿನ್ ಉದ್ಯೋಗಿಗಳ ವಿರುದ್ಧ ಪಾಕಿಸ್ತಾನದ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಪಿಐಎ ಈ ಆದೇಶ ಹೊರಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X