Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಂಗ್ಲಾ: ಹಿಂಸೆಯ ನಡುವೆ ಬಿರುಸಿನ ಮತದಾನ

ಬಾಂಗ್ಲಾ: ಹಿಂಸೆಯ ನಡುವೆ ಬಿರುಸಿನ ಮತದಾನ

ವಿವಿಧೆಡೆ ಚುನಾವಣಾ ಘರ್ಷಣೆಗೆ 12 ಬಲಿ

ವಾರ್ತಾಭಾರತಿವಾರ್ತಾಭಾರತಿ30 Dec 2018 10:51 PM IST
share
ಬಾಂಗ್ಲಾ: ಹಿಂಸೆಯ ನಡುವೆ ಬಿರುಸಿನ ಮತದಾನ

► ದೇಶಾದ್ಯಂತ ಮೊಬೈಲ್ ಇಂಟರ್‌ನೆಟ್ ಸೇವೆ ಸ್ಥಗಿತ

ಢಾಕಾ, ಡಿ.30: ಬಾಂಗ್ಲಾದೇಶದ ಸಂಸತ್ ಚುನಾವಣೆಗೆ ರವಿವಾರ ಬಿರುಸಿನ ಮತದಾನವಾಗಿದೆ. ಹಲವೆಡೆ ಹಿಂಸಾಚಾರದ ಘಟನೆಗಳು ನಡೆದಿದಿದ್ದರೂ, ದೇಶಾದ್ಯಂತ ಭಾರೀ ಸಂಖ್ಯೆಯ ಮತದಾರರು ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಬಾಂಗ್ಲಾದ ವಿವಿಧೆಡೆ ಭುಗಿಲೆದ್ದ ಚುನಾವಣಾ ಸಂಬಂಧಿ ಹಿಂಸೆಗಳಲ್ಲಿ ಇಂದು ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಅಂತಾರಾಷ್ಟ್ರೀಯ ಗಮನಸೆಳೆದಿರುವ ಈ ಚುನಾವಣೆಯಲ್ಲಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಆಡಳಿತಾರೂಢ ಅವಾಮಿಲೀಗ್ ಹಾಗೂ ಖಲೀದಾ ಜಿಯಾ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ(ಬಿಎನ್‌ಪಿ) ನಡುವೆ ಜಿದ್ದಾಜಿದ್ದಿಯ ಸ್ಪರ್ಧೆ ಏರ್ಪಟ್ಟಿದೆ.

ಇಂದು ಬೆಳಗ್ಗೆ 8:00 ಗಂಟೆಗೆ ಬಾಂಗ್ಲಾದ್ಯಂತ ಮತದಾನ ಆರಂಭಗೊಂಡಿತ್ತು. ಪ್ರಧಾನಿ ಶೇಖ್ ಹಸೀನಾ ಅವರು ಢಾಕಾದ ಮತಗಟ್ಟೆಯೊಂದಲ್ಲಿ ಪ್ರಪ್ರಥಮ ಮತದಾರರಾಗಿ ತನ್ನ ಹಕ್ಕು ಚಲಾಯಿಸಿದರು. ಈ ಕ್ಷೇತ್ರದಲ್ಲಿ ಅವರ ಸೋದರಳಿಯ ಹಾಗೂ ಅವಾಮಿ ಪಕ್ಷದ ನಾಯಕ ಫಝ್ಲೆ ನೂರ್ ತಪೊಶ್ ಸ್ಪರ್ಧಿಸಿದ್ದಾರೆ.

ಮತದಾನದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಹಸೀನಾ, ‘‘ಚುನಾವಣೆಗಳಲ್ಲಿ ನಮ್ಮ ಪಕ್ಷದ ವಿಜಯದ ಬಗ್ಗೆ ನನಗೆ ಸದಾ ಭರವಸೆಯಿದೆ ಹಾಗೂ ನನ್ನ ಜನತೆಯ ಮೇಲೆ ನನಗೆ ತುಂಬು ವಿಶ್ವಾಸವಿದೆ. ಭವಿಷ್ಯದಲ್ಲಿ ಉತ್ತಮ ಜೀವನವನ್ನು ಪಡೆಯಲು ಅವರು ನಮ್ಮನ್ನು ಆಯ್ಕೆ ಮಾಡಲಿದ್ದಾರೆ ಂದು ನಾನು ನಂಬಿದ್ದೇನೆ’ ಎಂದು ಹಸೀನಾ ಮತಚಲಾಯಿಸಿದ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ನೌಕಾಲಿ-3ರ ಮತಗಟ್ಟೆಯೊಂದರಲ್ಲಿ ದುಷ್ಕರ್ಮಿಗಳು ಮತದಾನಕ್ಕೆ ಸಂಬಂಧಪಟ್ಟ ಎಲ್ಲಾ ಸಾಧನ-ಸಲಕರಣೆಗಳನ್ನು ಕೊಂಡೊಯ್ದದ್ದರಿಂದ ಅಲ್ಲಿ ಮತದಾನವನ್ನು ರದ್ದುಪಡಿಸಲಾಗಿದೆ.

 ಚುನಾವಣೆಯ ಹಿನ್ನೆಲೆಯಲ್ಲಿ ಬಾಂಗ್ಲಾದ್ಯಂತ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಸೋಮವಾರ ಮಧ್ಯಾಹ್ನದಿಂದ ಮತ್ತೆ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಒದಗಿಸಲಾಗುವುದೆಂದು ಅಧಿಕೃತ ಮೂಲಗಳು ತಿಳಿಸಿವೆ.

 ದೇಶಾದ್ಯಂತ ಶಾಲಾಕಾಲೇಜುಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸ ಲಾಗಿದ್ದು, ದೇಶದಾದ್ಯಂತ ವಿವಿಧೆಡೆ ಮತದಾರರು ಮತದಾನ ಆರಂಭಕ್ಕೆ ಮುನ್ನವೇ ಮತಗಟ್ಟೆಗಳ ಮುಂದೆ ಸಾಲುಗಟ್ಟಿ ನಿಂತಿರುವುದು ಕಂಡುಬಂದಿತ್ತು.

ರಂಗಮತಿ ಜಿಲ್ಲೆಯ ಕಾವ್‌ಖಾಲಿಯಲ್ಲಿ ಅವಾಮಿ ಲೀಗ್ ಹಾಗೂ ಬಿಎನ್‌ಪಿ ಕಾರ್ಯಕರ್ತರ ನಡುವೆ ನಡೆದ ಹೊಡೆದಾಟದಲ್ಲಿ ಅವಾಮಿ ಲೀಗ್‌ನ ನಾಯಕರೊಬ್ಬರು ಹತ್ಯೆಯಾಗಿದ್ದಾರೆ ಹಾಗೂ ಇತರ 10 ಮಂದಿ ಗಾಯಗೊಂಡಿದ್ದಾರೆ.

ಚತ್ರೊಗ್ರಾಮ್‌ನಲ್ಲಿ ನಡೆದ ಚುನಾವಣಾ ಹಿಂಸಾಚಾರದಲ್ಲಿ ಓರ್ವ ಬಿಎನ್‌ಪಿ ಕಾರ್ಯಕರ್ತ ಸಾವನ್ನಪ್ಪಿದ್ದರೆ, ರಾಜ್‌ಶಾಹಿಯಲ್ಲಿ ಅವಾಮಿ ಲೀಗ್‌ನ ಬೆಂಬಲಿಗರೊಬ್ಬರು ಮೃತಪಟ್ಟಿರುವುದಾಗಿ ನ್ಯೂಸ್ ಪೋರ್ಟಲ್ ವರದಿ ಮಾಡಿದೆ.

ಚುನಾವಣಾ ಪ್ರಕ್ರಿಯೆಯ ಸುಗಮನಿರ್ವಹಣೆಗೆ ದೇಶಾದ್ಯಂತ ಸಾವಿರಾರು ಮಂದಿ ಸೈನಿಕರು ಸೇರಿದಂತೆ 6 ಲಕ್ಷಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಲಂಚದ ಆರೋಪಗಳ ಹಿನ್ನೆಲೆಯಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ಖಲೀದಾ ಜಿಯಾ ಅನುಭವಿಸುತ್ತಿದ್ದಾರೆ. ಬಾಂಗ್ಲಾ ಸಂಸತ್‌ನ 300 ಕ್ಷೇತ್ರಗಳ ಪೈಕಿ 299 ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದ್ದು, 1848 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಭಾರೀ ಗಮಸೆಳೆದಿರುವ ಬಾಂಗ್ಲಾ ಸಂಸತ್ ಚುನಾವಣೆಯಲ್ಲಿ ಪ್ರಧಾನಿ ಶೇಖ್ ಹಸೀನಾ ವಾಜೇದ್ ಅವರು ಅವರು ನಾಲ್ಕನೆ ಅವಧಿಗೆ ಪುನಾರಾಯ್ಕೆ ಕೋರಿ ಸ್ಪರ್ಧಿಸುತ್ತಿದ್ದರೆ, ಅವರ ಬದ್ಧ ಎದುರಾಳಿ ಬಿಎನ್‌ಪಿ ನಾಯಕಿ ಖಲೀದಾ ಜಿಯಾ ಅವರು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ 5 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಅನಿಶ್ಚಿತ ರಾಜಕೀಯ ಬದುಕನ್ನು ಎದುರಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X