ಪ್ರವಾದಿ ಬಗ್ಗೆ ನಿಂದನೆ: ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ನಿಂದ ದೂರು

ಉಳ್ಳಾಲ, ಡಿ. 30: ಪ್ರವಾದಿ (ಸ) ರವರನ್ನು ನಿಂದನೆ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ಮಾಡುವ ರೀತಿಯಲ್ಲಿ ಅಗೌರವ ತೋರಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರ್ ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ಧ ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ವತಿಯಿಂದ ಕೊಣಾಜೆ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ಅಧ್ಯಕ್ಷ ಇರ್ಶಾದ್ ಮದನಿ ತಿಳಿಸಿದ್ದಾರೆ.
ಈ ಸಂದರ್ಭ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಎಸ್.ವೈ.ಎಸ್ ಮಂಜನಾಡಿ ಬ್ರಾಂಚ್ ಕಾರ್ಯದರ್ಶಿ ಖಾಲಿದ್ ಹಾಜಿ ಭಟ್ಕಳ್, ಎಸ್.ವೈ.ಎಸ್ ಮೊಂಟೆಪದವು ಬ್ರಾಂಚ್ ಅಧ್ಯಕ್ಷ ಅಬೂಬಕ್ಕರ್ ಮುಸ್ಲಿಯಾರ್ ಮೊಂಟೆಪದವು, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ, ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ಕೋಶಾಧಿಕಾರಿ ಶರೀಫ್ ಲೆಕ್ಕಸಿರಿ, ಸೆಕ್ಟರ್ ನಾಯಕರಾದ ನಾಝಿಮ್ ಮೊಂಟೆಪದವು, ಅನ್ಸಾರ್ ಪಡಿಕ್ಕಲ್ ಮೊದಲಾದವರು ಉಪಸ್ಥಿತರಿದ್ದರು.
Next Story