Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭೆಯಲ್ಲಿ ಮತ್ತೆ ರಫೇಲ್ ವಿಚಾರ...

ಲೋಕಸಭೆಯಲ್ಲಿ ಮತ್ತೆ ರಫೇಲ್ ವಿಚಾರ ಪ್ರಸ್ತಾಪಿಸಿದ ಕಾಂಗ್ರೆಸ್

ಚರ್ಚೆಯಿಂದ ನುಣುಚಿಕೊಳ್ಳುತ್ತಿದ್ದೀರಿ ಎಂದ ಸರಕಾರ

ವಾರ್ತಾಭಾರತಿವಾರ್ತಾಭಾರತಿ31 Dec 2018 7:53 PM IST
share
ಲೋಕಸಭೆಯಲ್ಲಿ ಮತ್ತೆ ರಫೇಲ್ ವಿಚಾರ ಪ್ರಸ್ತಾಪಿಸಿದ ಕಾಂಗ್ರೆಸ್

ಹೊಸದಿಲ್ಲಿ,ಡಿ.31: ತನ್ನ ಪಟ್ಟು ಬಿಡದ ಕಾಂಗ್ರೆಸ್ ಸೋಮವಾರ ಲೋಕಸಭೆಯಲ್ಲಿ ಮತ್ತೆ ರಫೇಲ್ ವಿಷಯವನ್ನೆತ್ತಲು ಪ್ರಯತ್ನಿಸಿದ್ದು,ಇದಕ್ಕೆ ಪ್ರತಿಕ್ರಿಯಿಸಿದ ನೀಡಿದ ಸರಕಾರವು,ಈ ವಿಷಯದಲ್ಲಿ ಚರ್ಚೆಯಿಂದ ಪ್ರತಿಪಕ್ಷವು ನುಣುಚಿಕೊಳ್ಳುತ್ತಿದೆ ಎಂದು ಕುಟುಕಿತು.

ಶೂನ್ಯವೇಳೆಯಲ್ಲಿ ಭಿತ್ತಿಪತ್ರಗಳೊಂದಿಗೆ ಘೋಷಣೆಗಳನ್ನು ಕೂಗುತ್ತ ಸದನದ ಬಾವಿಯಲ್ಲಿ ನೆರೆದ ಕಾಂಗ್ರೆಸ್ ಸದಸ್ಯರು ಕೋಲಾಹಲವನ್ನು ಸೃಷ್ಟಿಸಿದರು.

ವಿಷಯವನ್ನೆತ್ತಿದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು,ರಫೇಲ್ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದರಲ್ಲದೆ,ಸರಕಾರವೇಕೆ ಯುದ್ಧವಿಮಾನಗಳ ಬೆಲೆಯನ್ನು ಬಹಿರಂಗಗೊಳಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಬಿಜೆಪಿ ಸದಸ್ಯರ ತೀವ್ರ ಪ್ರತಿಭಟನೆಗಳ ನಡುವೆಯೇ ರಫೇಲ್ ಒಪ್ಪಂದದ ಕುರಿತು ಜಂಟಿ ಸಂಸದೀಯ ಸಮತಿಯಿಂದ ತನಿಖೆಗೆ ಅವರು ಆಗ್ರಹಿಸಿದರು.

ಖರ್ಗೆಯವರ ಆಗ್ರಹಕ್ಕೆ ಉತ್ತರಿಸಿದ ಗೃಹ ಸಚಿವ ರಾಜನಾಥ ಸಿಂಗ್ ಅವರು,ಒಂದೇ ಸುಳ್ಳನ್ನು ಪದೇ ಪದೇ ಹೇಳುತ್ತಿದ್ದರೆ ಅದು ಸತ್ಯವಾಗುವುದಿಲ್ಲ ಎಂದರು. ಈ ವಿಷಯದಲ್ಲಿ ಚರ್ಚೆಗೆ ಸರಕಾರವು ಸಿದ್ಧವಿದೆ,ಆದರೆ ಕಾಂಗ್ರೆಸ್ ಅದರಿಂದೇಕೆ ನುಣುಚಿಕೊಳ್ಳುತ್ತಿದೆ ಎಂದು ಅವರು ಪ್ರಶ್ನಿಸಿದರು.

ಈ ವೇಳೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸದನದಲ್ಲಿ ಉಪಸ್ಥಿತರಿದ್ದರು.

ಅಪರಾಹ್ನ ಎರಡು ಗಂಟೆಗೆ ಸದನವು ಅನುದಾನಗಳಿಗೆ ಪೂರಕ ಬೇಡಿಕೆಗಳ ಕುರಿತು ಚರ್ಚೆಯನ್ನು ಕೈಗೆತ್ತಿಕೊಳ್ಳಲು ಮಂದಾದಾಗ ಖರ್ಗೆಯವರು ಮತ್ತೊಮ್ಮೆ ರಫೇಲ್ ಒಪ್ಪಂದದಲ್ಲಿ ಜೆಪಿಸಿ ತನಿಖೆಗೆ ಆಗ್ರಹಿಸಿದರು. ಈ ವೇಳೆ ವಿತ್ತ ಸಚಿವ ಅರುಣ್ ಜೇಟ್ಲಿ ಅವರು,ಖರ್ಗೆ ತಕ್ಷಣವೇ ಈ ವಿಷಯದಲ್ಲಿ ಚರ್ಚೆಯನ್ನು ಆರಂಭಿಸಬೇಕು ಮತ್ತು ಉತ್ತರಿಸಲು ಸರಕಾರವು ಸಿದ್ಧವಾಗಿದೆ ಎಂದು ಹೇಳಿದರು. ಖರ್ಗೆ ಚರ್ಚೆಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದರು. ರಫೇಲ್ ಒಪ್ಪಂದದ ಕುರಿತು ಚರ್ಚೆಗೆ ಒತ್ತು ನೀಡಿದ ಜೇಟ್ಲಿ,ಒಪ್ಪಂದದ ಕುರಿತು ಕಾಂಗ್ರೆಸ್ ಪಕ್ಷವು ಸುಳ್ಳುಗಳನ್ನು ಹರಡುತ್ತಿದೆ ಎನ್ನುವುದನ್ನು ತಾನು ರುಜುವಾತು ಮಾಡುತ್ತೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X