Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ...

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ1 Jan 2019 5:42 PM IST
share
ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

ಮೂಡಿಗೆರೆ, ಜ.1: ಚಿಕ್ಕಮಗಳೂರು ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಜ.18ರಿಂದ 19ರವರೆಗೆ ನಡೆಯಲಿದೆ ಎಂದು ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ತಿಳಿಸಿದರು.

ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 10 ಸಾವಿರ ಆಹ್ವಾನ ಪತ್ರಿಕೆ ಮುದ್ರಿಸಲಾಗಿದೆ. ಎರಡು ದಿನಗಳವರೆಗೆ ನಡೆಯುವ ಸಮ್ಮೇಳನಲ್ಲಿ ಪ್ರತಿನಿಧಿಗಳಾಗಿ ಪಾಲ್ಗೊಳ್ಳುವ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಅನ್ಯಕಾರ್ಯ ನಿಮಿತ್ತ ರಜೆ ಹಾಗೂ ಒ.ಒ.ಡಿ. ಸೌಲಭ್ಯ ನೀಡಲಾಗುವುದು. ಶಿಕ್ಷಕರಿಗಷ್ಟೇ ಅಲ್ಲದೆ ಬೇರೆ ಇಲಾಖೆಗಳಿಂದ ಅನುಮತಿ ಪಡೆದು ಸಮ್ಮೇಳನದಲ್ಲಿ ಪ್ರತಿನಿಧಿಗಳಾಗಿ ಪಾಲ್ಗೊಳ್ಳುವವರಿಗೂ ಒ.ಒ.ಡಿ.ಸೌಲಭ್ಯ ನೀಡಲಾಗುವುದು. ಸಮ್ಮೇಳನದಲ್ಲಿ ಪಾಲ್ಗೊಳ್ಳುವವರಿಗೆ ಊಟದ ವ್ಯವಸ್ಥೆಯಲ್ಲಿ ಯಾವುದೇ ಕೊರತೆ ಬಾರದಂತೆ ಪಾಲ್ಗೊಂಡ ಪ್ರತಿಯೊಬ್ಬರಿಗೂ ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. 

ಸಮ್ಮೇಳನದ ಕಾರ್ಯಕ್ರಮಗಳ ಕುರಿತಾಗಿ ಲೆಕ್ಕಪರಿಶೋಧಕ ಸಮಿತಿಯ ಪ್ರೊ.ಕೆ.ಎನ್.ಲಕ್ಷ್ಮೀಕಾಂತ್ ಮಾಹಿತಿ ನೀಡಿ ಸಮ್ಮೇಳನದ ಆರಂಭದಲ್ಲಿ ಬೆಳಗ್ಗೆ 7-30ಕ್ಕೆ ಪ್ರವೇಶಗೊಳ್ಳುವ ದಿ.ಪೂರ್ಣಚಂದ್ರತೇಜಸ್ವಿ ಮಹಾದ್ವಾರವನ್ನು ತಾಲೂಕು ಕಸಾಪ ಅಧ್ಯಕ್ಷ ಮಗ್ಗಲಮಕ್ಕಿ ಗಣೇಶ್ ಉದ್ಘಾಟಿಸಲಿದ್ದಾರೆ.

ದಿ.ಚಂದ್ರಯ್ಯನಾಯ್ಡು ಮಹಾಮಂಟಪವನ್ನು ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ಉದ್ಘಾಟಿಸಲಿದ್ದಾರೆ. 8 ಗಂಟೆಗೆ ತಹಸೀಲ್ದಾರ್ ಪದ್ಮನಾಭಶಾಸ್ತ್ರಿ ಅವರಿಂದ ರಾಷ್ಟ್ರಧ್ವಜಾರೋಹಣ ಬಳಿಕ ಇಒ ಡಿ.ಡಿ.ಪ್ರಕಾಶ್ ಅವರಿಂದ ನಾಡಧ್ವಜ, ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಅವರಿಂದ ಪರಿಷತ್ತಿನ ಧ್ವಜಾರೋಹಣ ಕಾರ್ಯಕ್ರಮಗಳ ನಂತರ ಪ್ರಮುಖ ಬೀದಿಗಳಲ್ಲಿ ಸಮ್ಮೇಳನಾಧ್ಯಕ್ಷ ಡಾ.ಡಿ.ಎಸ್.ಜಯಪ್ಪಗೌಡ ಮೆರವಣಿಗೆ ನಡೆಯಲಿದೆ.

ನಂತರ 10-30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ದೇಶೀಯ ಪ್ರಜ್ಞೆ, ಸಂಜೆ 4ರಿಂದ  ಸ್ತ್ರೀ ಪ್ರಜ್ಞೆ ಗೋಷ್ಠಿಗಳು, ಜ.19ರಂದು ಬೆಳಗ್ಗೆ 9-30ಕ್ಕೆ ಕಾವ್ಯಪ್ರಜ್ಞೆ, ಕವಿಗೋಷ್ಠಿ, 12 ಗಂಟೆಗೆ ಸಾಮುದಾಯಿಕ ಪ್ರಜ್ಞೆ, ಮಧ್ಯಾಹ್ನ 2-15 ಗಂಟೆಗೆ ಸಮ್ಮೇಳನಾಧ್ಯಕ್ಷ ಬದುಕು-ಬರಹ, ಬಹಿರಂಗ ಅಧಿವೇಶನ, 3-45ಕ್ಕೆ ಹಾಸ್ಯಪ್ರಜ್ಞೆ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 6 ಗಂಟೆಗೆ ಜಿಲ್ಲೆಯ ಸಾಧಕರುಗಳಿಗೆ ಸನ್ಮಾನ ನಂತರ ಸಮಾರೋಪ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಎಂ.ಪಿ.ಕುಮಾರಸ್ವಾಮಿ, ಕೋಶಾಧ್ಯಕ್ಷ ರಂಜನ್ ಅಜಿತ್‍ಕುಮಾರ್ ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್, ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ, ರೈತಸಂಘದ ನಾಗೇಶ್, ಪ್ರೊ. ಎಂ.ಎಸ್.ಅಶೋಕ್, ಲಕ್ಷ್ಮಣಗೌಡ, ಶಿವಾನಂದ್, ಭಾನುಮತಿ, ಜಿಲ್ಲಾ ಕಾರ್ಯದರ್ಶಿ ಮಂಜುನಾಥಸ್ವಾಮಿ ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X