Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಡಂಗಳದಲ್ಲಿ ಆಳುಪ ದಾನ ಶಾಸನ ಪತ್ತೆ

ಕೊಡಂಗಳದಲ್ಲಿ ಆಳುಪ ದಾನ ಶಾಸನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ1 Jan 2019 7:51 PM IST
share
ಕೊಡಂಗಳದಲ್ಲಿ ಆಳುಪ ದಾನ ಶಾಸನ ಪತ್ತೆ

ಉಡುಪಿ, ಜ.1: ಮೂಡುಬೆಳ್ಳೆ ಸಮೀಪದ ಕೊಡಂಗಳ-ಮರ್ಣೆಯ ಕೊಲಪು ಮಹಾವಿಷ್ಣುಮೂರ್ತಿ ದೇವಾಲಯದ ಹೊರ ಪ್ರಾಕಾರದಲ್ಲಿ ತ್ರಿಕೋನಾಕಾರ ದಲ್ಲಿರುವ ಅಳುಪರ ಕಾಲದ ಒಂದು ವಿಶಿಷ್ಟ ಶಾಸನ ಕಲ್ಲು ಪತ್ತೆಯಾಗಿದೆ. ಇದೊಂದು ದಾನ ಶಾಸನವಾಗಿದೆ.

ಶಾಸನದ ಮೇಲ್ಭಾಗದಲ್ಲಿ ಒಂದು ಶಿವಲಿಂಗ, ಎಡ-ಬಲದಲ್ಲಿ ಎರಡು ದೀಪದ ಕಂಭಗಳು ಹಾಗೂ ನಂದಿಯ ಅಸ್ಪಷ್ಟ ಶಿಲ್ಪದ ಚಿತ್ರಣವಿದೆ. ಮೇಲೆ ಸೂರ್ಯ-ಚಂದ್ರರ ಉಬ್ಬು ಶಿಲ್ಪಗಳಿವೆ ಎಂದು ಶಿರ್ವದ ಎಂಎಸ್‌ಆರ್‌ಎಸ್ ಪದವಿ ಕಾಲೇಜಿನ ಇತಿಹಾಸ ಹಾಗೂ ಪುರಾತತ್ವ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸುಮಾರು 19 ಸಾಲುಗಳ ಬರಹವನ್ನು ಹೊಂದಿರುವ ಈ ಶಾಸನದಲ್ಲಿ ಕೆಳಭಾಗದಲ್ಲಿರುವ 7 ಸಾಲುಗಳ ಬರಹ ಅಸ್ಪಷ್ಟವಾಗಿ ಗೋಚರಿಸುತ್ತಿದೆ. ಮೇಲಿನ ಭಾಗದಲ್ಲಿರುವ ಬರಹ ಸಂಪೂರ್ಣ ಅಳಿಸಿಹೋಗಿದೆ ಎಂದು ಪ್ರೊ.ಮುರುಗೇಶಿ ತಿಳಿಸಿದ್ದಾರೆ.

ಶಾಸನೋಕ್ತ ವಿಷಯದ ಪ್ರಕಾರ ಇದೊಂದು ದಾನ ಶಾಸನವೆಂದು ಸ್ಪಷ್ಟವಾಗುತ್ತದೆ. ಶಾಸನದಲ್ಲಿ ದೇವಾಲಯದ ಅಧಿಕಾರಿಯನ್ನು ಉಲ್ಲೇಖಿಸಲಾಗಿದೆ. ಆಳುಪರ ಇತರೆ ಶಾಸನಗಳಲ್ಲಿ ಅತಿಕಾರಿ/ಅಧಿಕಾರಿಗಳ ಉಲ್ಲೇಖ ಕಂಡು ಬರುತ್ತದೆ. ಶಾಸನದ ಲಿಪಿ ಲಕ್ಷಣದ ಆಧಾರದ ಮೇಲೆ ಇದೊಂದು 14ನೇ ಶತಮಾನದ ಶಾಸನವೆಂದು ಕಾಲ ನಿರ್ಣಯಿಸಬಹುದಾಗಿದೆ ಎಂದವರು ಹೇಳಿದ್ದಾರೆ. ಶಾಸನದ ಕೆಳಭಾಗದಲ್ಲಿ ಎದುರು-ಬದುರಾಗಿ ನಿಂತ ಎರಡು ಕರುಗಳ ಉಬ್ಬು ಶಿಲ್ಪಗಳನ್ನು ಚಿತ್ರಿಸಲಾಗಿದೆ.

ಶಾಸನದ ಮಹತ್ವ

ಶಾಸನ ಇರುವ ದೇವಾಲಯವನ್ನು ಈಗ ಕೊಲಪು ಮಹಾವಿಷ್ಣುಮೂರ್ತಿ ದೇವಾಲಯವೆಂದು ಕರೆಯಲಾಗುತ್ತದೆ. ಶಾಸನೋಕ್ತ ಅಧಿಕಾರಿಯ ಉಲ್ಲೇಖ ಮೂಲತಃ ಈ ದೇವಾಲಯ ಜೈನ ಅಧಿಕಾರಿಗಳ ಆಡಳಿತಕ್ಕೊಳಪಟ್ಟಿತ್ತೆಂದು ಸ್ಪಷ್ಟ ಪಡಿಸುತ್ತದೆ. ಪ್ರಸ್ತುತ ದೇವಾಲಯದಲ್ಲಿರುವ ಮಹಾವಿಷ್ಣುಮೂರ್ತಿ 17ನೇ ಶತಮಾನದ ಶಿಲ್ಪಶೈಲಿಯನ್ನು ಹೊಂದಿದೆ.

ಶಾಸನ ಇರುವ ದೇವಾಲಯವನ್ನು ಈಗ ಕೊಲಪು ಮಹಾವಿಷ್ಣುಮೂರ್ತಿ ದೇವಾಲಯವೆಂದು ಕರೆಯಲಾಗುತ್ತದೆ. ಶಾಸನೋಕ್ತ ಅಧಿಕಾರಿಯ ಉಲ್ಲೇಖ ಮೂಲತಃ ಈ ದೇವಾಲಯ ಜೈನ ಅಧಿಕಾರಿಗಳ ಆಡಳಿತಕ್ಕೊಳಪಟ್ಟಿತ್ತೆಂದು ಸ್ಪಷ್ಟ ಪಡಿಸುತ್ತದೆ. ಪ್ರಸ್ತುತ ದೇವಾಲಯದಲ್ಲಿರುವ ಮಹಾವಿಷ್ಣುಮೂರ್ತಿ 17ನೇ ಶತಮಾನದ ಶಿಲ್ಪಶೈಲಿಯನ್ನು ಹೊಂದಿದೆ. ಆದ್ದರಿಂದ, ದೇವಾಲಯ ಮೂಲತಃ ಶೈವ ದೇವಾಲಯವಾಗಿದ್ದು, ಜೈನರ ಆಡಳಿತೆಗೆ ಒಳಪಟ್ಟಿತ್ತು. ನಂತರ ಇದು ವೈಷ್ಣವರ ಅಧೀನಕ್ಕೆ ಒಳಪಟ್ಟು, ಮಹಾ ವಿಷ್ಣುಮೂರ್ತಿ ದೇವಾಲಯವಾಗಿ ಮಾರ್ಪಟ್ಟಿದೆ ಎಂಬ ಅಂಶದ ಮೇಲೆ ಈ ಶಾಸನ ಬೆಳಕು ಚೆಲ್ಲುತ್ತದೆ ಎಂದವರು ತಿಳಿಸಿದ್ದಾರೆ.

ಆದ್ದರಿಂದ, ದೇವಾಲಯ ಮೂಲತಃ ಶೈವ ದೇವಾಲಯವಾಗಿದ್ದು, ಜೈನರ ಆಡಳಿತೆಗೆ ಒಳಪಟ್ಟಿತ್ತು. ನಂತರ ಇದು ವೈಷ್ಣವರ ಅಧೀನಕ್ಕೆ ಒಳಪಟ್ಟು, ಮಹಾ ವಿಷ್ಣುಮೂರ್ತಿ ದೇವಾಲಯವಾಗಿ ಮಾರ್ಪಟ್ಟಿದೆ ಎಂಬ ಅಂಶದ ಮೇಲೆ ಈ ಶಾಸನ ಬೆಳಕು ಚೆಲ್ಲುತ್ತದೆ ಎಂದವರು ತಿಳಿಸಿದ್ದಾರೆ.

ಈ ಶಾಸನದ ಅಧ್ಯಯನದಲ್ಲಿ ಕೊಡಂಗಳ ವೆಂಕಟೇಶ್ ಭಟ್, ಅರ್ಚಕರಾದ ಪುಂಡರೀಕಾಕ್ಷ ಆಚಾರ್ಯ ಹಾಗೂ ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ಪ್ರಶಾಂತ್ ಶೆಟ್ಟಿ ಅವರು ಸಹಕರಿಸಿದ್ದರು ಎಂದು ಪ್ರೊ. ಮುರುಗೇಶಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X