Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಜಮಾಡಿ ಟೋಲ್‍ನಲ್ಲಿ ಪ್ರತಿಭಟನೆ:...

ಹೆಜಮಾಡಿ ಟೋಲ್‍ನಲ್ಲಿ ಪ್ರತಿಭಟನೆ: ಸ್ಥಳೀಯ ವಾಹನಗಳಿಗೆ ವಿನಾಯಿತಿ, ವಿವಿಧ ಬೇಡಿಕೆ ಈಡೇರಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Jan 2019 8:31 PM IST
share
ಹೆಜಮಾಡಿ ಟೋಲ್‍ನಲ್ಲಿ ಪ್ರತಿಭಟನೆ: ಸ್ಥಳೀಯ ವಾಹನಗಳಿಗೆ ವಿನಾಯಿತಿ, ವಿವಿಧ ಬೇಡಿಕೆ ಈಡೇರಿಸಲು ಆಗ್ರಹ

ಪಡುಬಿದ್ರಿ, ಜ. 2: ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಹೆಜಮಾಡಿ ಟೋಲ್ ಪ್ಲಾಝಾ ಬಳಿ ಬುಧವಾರ ಪ್ರತಿಭಟನೆ ನಡೆಯಿತು.

ಹೆಜಮಾಡಿ ಟೋಲ್‍ಗೇಟ್ ಹಾಗೂ  ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಉಪಾಧ್ಯಕ್ಷ ಗುಲಾಂ ಮುಹಮ್ಮದ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ  ಹೆಜಮಾಡಿ ಟೋಲ್‍ಗೇಟ್ ಹಾಗೂ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಮತ್ತು ಮುಲ್ಕಿ ನಾಗರಿಕ ಸಮಿತಿ ನೂರಾರು ಮಂದಿ ಪಾಲ್ಗೊಂಡರು. 

ಹೆಜಮಾಡಿ ಟೋಲ್‍ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ತೊಂದರೆಯಾಗುತ್ತಿದ್ದು, ಎಲ್ಲಾ ಟೋಲ್‍ಗೇಟ್‍ಗಳನ್ನು ತೆರೆದು ಸಂಚಾರಕ್ಕೆ ಮುಕ್ತಗೊಳಿಸಬೇಕು. ಟೋಲ್ ಫ್ಲಾಝಾದಲ್ಲಿ ಮೂಲ ಸೌಕರ್ಯಕ್ಕೆ ಒತ್ತು ನೀಡಬೇಕು. ಈಗಾಗಲೇ ವಿಳಂಬವಾಗಿರುವ ಉಭಯ ಜಿಲ್ಲೆಗಳ ರಾಷ್ಟ್ರೀಯ ಹೆದ್ದಾರಿ ಹಾಗೂ ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. 

ಹೆಜಮಾಡಿ ಟೋಲ್ ವ್ಯಾಪ್ತಿಯ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಉಚ್ಚಿಲ, ಪಲಿಮಾರು, ಮೂಲ್ಕಿ ಹಾಗೂ ಹಳೆಯಂಗಡಿ ಪ್ರದೇಶದ ವಾಹನಗಳಿಗೆ ಟೋಲ್ ವಿನಾಯಿತಿ ನೀಡಬೇಕು. ಈ ಹಿಂದಿನ ಸಭೆಗಳಲ್ಲಿ ನವಯುಗ ಕಂಪೆನಿ ನೀಡಿದ ಹೆಜಮಾಡಿ ಕನ್ನಂಗಾರು ಬೈಪಾಸ್ ಬಳಿ ಸರ್ವಿಸ್ ರಸ್ತೆ, ಶಿವನಗರ ಬಳಿ ಸ್ಕೈವಾಕ್ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಬೇಕು ಒಂದು ಒತ್ತಾಯಿಸಿ ಪ್ರತಿಭಟನಕಾರರು ಕಾಪು ಕಂದಾಯ ನಿರೀಕ್ಷಕ ರವಿಶಂಕರ್ ಮೂಲಕ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಮುಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸುನಿಲ್ ಆಳ್ವ, ಶೇಖರ್ ಹೆಜಮಾಡಿ, ಮಧು ಆಚಾರ್ಯ, ಸುಧಾಕರ ಕರ್ಕೇರ, ಸಿದ್ದೀಕ್ ತಲಪಾಡಿ, ಅನ್ಸಾರ್ ಅಹ್ಮದ್, ಧನಂಜಯ್ ಮಟ್ಟು, ಮುನೀರ್ ಕಾರ್ನಾಡ್, ಸುಧೀರ್ ಕರ್ಕೇರ, ಉದಯ ಶೆಟ್ಟಿ, ರಾಧಿಕಾ, ದೇವಪ್ರಸಾದ್ ಪುನರೂರು, ಶ್ರೀಪತಿ ಭಟ್, ಸಾಧು ಅಂಚನ್, ಹರೀಶ್ ಶೆಟ್ಟಿ ಪಾದೆಬೆಟ್ಟು, ಪ್ರತಾಪ್ ಶೆಟ್ಟಿ ಸಾಸ್ತಾನ, ಜೀವನ್ ಶೆಟ್ಟಿ, ದೇವಣ್ಣ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗಣೇಶ್ ಕೋಟ್ಯಾನ್, ವೈ. ಸುಧೀರ್ ಕುಮಾರ್, ಅಬ್ದುಲ್ ಅಜೀಜ್, ವಿಶ್ವಾಸ್ ಅಮೀನ್, ಎಂ.ಎಸ್. ನಿಝಾಮುದ್ದೀನ್ ಉಪಸ್ಥಿತರಿದ್ದರು.

ಮುಖ್ಯಾಂಶಗಳು

ಮುಲ್ಕಿಯಿಂದ ಹಲವಾರು ವಾಹನಗಳಲ್ಲಿ ಬಂದಿದ್ದ ನೂರಾರು ಪ್ರತಿಭಟನಕಾರರು ಸುಂಕ ಪಾವತಿಸದೇ ಟೋಲ್‍ಗೇಟ್ ದಾಟಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಪ್ರತಿಭಟನೆಗೆ ಮಣಿದು ಸಾಸ್ತಾನ ಟೋಲ್ ಐದು ಕಿ.ಮೀ. ವ್ಯಾಪ್ತಿಯ ವಾಹನಗಳಿಗೆ ನವಯುಗ ಕಂಪೆನಿ ಟೋಲ್ ವಿನಾಯಿತಿ ನೀಡಿದೆ. ಎಎಸ್ಪಿ ಕೃಷ್ಣಕಾಂತ್, ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಟೋಲ್ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಈ ಮೊದಲು ಪ್ರತಿಭಟನೆ ನಡೆಸಿದವರು ಈ ಪ್ರತಿಭಟನೆಯಲ್ಲಿ ನಾಪತ್ತೆಯಾಗಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X