Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಜಯ...

ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಜಯ ಬ್ಯಾಂಕ್, ದೇನಾ ಬ್ಯಾಂಕ್ ವಿಲೀನಕ್ಕೆ ಸಂಪುಟ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ2 Jan 2019 9:13 PM IST
share
ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಜಯ ಬ್ಯಾಂಕ್, ದೇನಾ ಬ್ಯಾಂಕ್ ವಿಲೀನಕ್ಕೆ ಸಂಪುಟ ಒಪ್ಪಿಗೆ

ಹೊಸದಿಲ್ಲಿ, ಜ.2: ಬ್ಯಾಂಕ್ ಆಫ್ ಬರೋಡಾ(ಬಿಒಬಿ)ದೊಂದಿಗೆ ವಿಜಯ ಬ್ಯಾಂಕ್ ಮತ್ತು ದೇನಾ ಬ್ಯಾಂಕ್‌ಗಳ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರೊಂದಿಗೆ ಸ್ಟೇಟ್ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳ ಬಳಿಕದ ಮೂರನೇ ಬೃಹತ್ ಬ್ಯಾಂಕ್ ಆಗಿ ಬ್ಯಾಂಕ್ ಆಫ್ ಬರೋಡಾ ಮಾನ್ಯತೆ ಪಡೆಯಲಿದೆ.

 ವಿಲೀನದಿಂದಾಗಿ ಬ್ಯಾಂಕ್ ಆಫ್ ಬರೋಡಾಕ್ಕೆ ಹೆಚ್ಚಿನ ಸಾಲ ನೀಡುವ ಅಧಿಕಾರ ಮತ್ತು ಜಾಗತಿಕ ಮಟ್ಟದಲ್ಲಿ ಸ್ಪರ್ಧೆಯೊಡ್ಡುವ ಅನನ್ಯತೆ ಪ್ರಾಪ್ತಿಯಾಗಲಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ವಿಲೀನ ಪ್ರಕ್ರಿಯೆಯಿಂದ ದೇನಾ ಬ್ಯಾಂಕ್ ಮತ್ತು ವಿಜಯ ಬ್ಯಾಂಕ್‌ನ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಹಾಗೂ ಕೆಲಸದ ಪರಿಸ್ಥಿತಿಯ ಮೇಲೆ ಯಾವುದೇ ಪರಿಣಾಮವಾಗದು. ಉದ್ಯೋಗಿಗಳ ಸಂಖ್ಯೆಯಲ್ಲಿ ಕಡಿತವಾಗದು. ಈ ಸಿಬ್ಬಂದಿಗಳು ಬ್ಯಾಂಕ್ ಆಫ್ ಬರೋಡಾದಡಿ ಬರಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಈ ಮೂರು ಬ್ಯಾಂಕ್‌ಗಳ ವಿಲೀನದ ಕುರಿತು ಕಳೆದ ಸೆಪ್ಟೆಂಬರ್‌ನಲ್ಲಿ ಸರಕಾರ ಘೋಷಿಸಿತ್ತು. ಮೂರು ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ಇದೇ ಮೊದಲ ಬಾರಿಗೆ ನಡೆದಿದೆ. ಈ ಹಿಂದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜೊತೆ ಐದು ಅಧೀನ ಬ್ಯಾಂಕ್‌ಗಳು ವಿಲೀನಗೊಂಡಿದ್ದವು ಮತ್ತು ಭಾರತೀಯ ಮಹಿಳಾ ಬ್ಯಾಂಕ್ ಅನ್ನು ಸ್ಟೇಟ್‌ಬ್ಯಾಂಕ್ ವಶಕ್ಕೆ ಪಡೆದುಕೊಳ್ಳುವ ಮೂಲಕ ವಿಶ್ವದ 50 ಪ್ರಮುಖ ಬ್ಯಾಂಕ್‌ಗಳ ಸಾಲಿನಲ್ಲಿ ಸ್ಥಾನ ಪಡೆದಿತ್ತು. ಈ ಮಧ್ಯೆ ಬ್ಯಾಂಕ್ ಆಫ್ ಬರೋಡಾ(ಬಿಒಬಿ) ಶೇರುಗಳ ಸಂಯೋಜನೆ ವ್ಯವಸ್ಥೆಯನ್ನು ಅಂತಿಮಗೊಳಿಸಿದ್ದು , ವಿಜಯಾ ಬ್ಯಾಂಕ್‌ನ 1 ಸಾವಿರ ಶೇರುಗಳನ್ನು ಹೊಂದಿದವರು ಬಿಒಬಿಯ 402 ಇಕ್ವಿಟಿ ಶೇರುಗಳನ್ನು, ದೇನಾ ಬ್ಯಾಂಕ್‌ನ 1 ಸಾವಿರ ಶೇರುಗಳನ್ನು ಹೊಂದಿದ್ದವರು ಬಿಒಬಿಯ 110 ಶೇರುಗಳನ್ನು ಪಡೆಯಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X