Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಟೋ ಚಾಲಕರಿಗೆ ಸಾಲ ಸೌಲಭ್ಯ ಒದಗಿಸಲು...

ಆಟೋ ಚಾಲಕರಿಗೆ ಸಾಲ ಸೌಲಭ್ಯ ಒದಗಿಸಲು ಕೋರಿ ಅರ್ಜಿ: ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕಲ್ಪಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ2 Jan 2019 9:37 PM IST
share
ಆಟೋ ಚಾಲಕರಿಗೆ ಸಾಲ ಸೌಲಭ್ಯ ಒದಗಿಸಲು ಕೋರಿ ಅರ್ಜಿ: ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕಲ್ಪಿಸಿದ ಹೈಕೋರ್ಟ್

ಬೆಂಗಳೂರು, ಜ.2: ನಗರದ ಆಟೋ ರಿಕ್ಷಾ ಚಾಲಕರಿಗೆ ಬಿಡಿಎ ನಿವೇಶನ ಹಂಚಿಕೆ, ಯಶಸ್ವಿನಿ ಯೋಜನೆ ಜಾರಿ, ಬಿಪಿಎಲ್ ಕಾರ್ಡ್ ವಿತರಣೆ ಹಾಗೂ ಸಾಲ ಸೌಲಭ್ಯ ಒದಗಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರಕಾರ ಕಾಲಾವಕಾಶ ಕೇಳಿದೆ.

ಬೆಂಗಳೂರು ಆಟೋ ಚಾಲಕರ ಸೌಹಾರ್ದ ಕೋ-ಆಪರೇಟಿವ್ ಲಿಮಿಟೆಡ್ ಹಾಗೂ ಸೋಮಶೇಖರ್ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾ. ಅರವಿಂದ ಕುಮಾರ್ ನೇತೃತ್ವದ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಈ ವೇಳೆ ಸರಕಾರದ ಪರ ವಕೀಲರು ವಾದ ಮಂಡಿಸಿ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು. ಇದಕ್ಕೂ ಮೊದಲು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಸಾರ್ವಜನಿಕ ಸೇವೆಯಲ್ಲಿ ಆಟೋ ಚಾಲಕರು ಪಾತ್ರ ಬಹಳ ಮುಖ್ಯವಾಗಿದೆ. ಹಗಲಿರುಳು ಕಷ್ಟ ಪಟ್ಟು ದುಡಿದರೂ, ಅವರ ಆದಾಯ ಆಷ್ಟಕ್ಕಷ್ಟೇ. ಇದರಿಂದಾಗಿ ಆಟೋ ಚಾಲಕರ ಕುಟುಂಬಗಳು ಸಂಕಷ್ಟ ಎದುರಿಸುತ್ತಿವೆ. ಹೀಗಾಗಿ, ನಗರದ ಆಟೋ ಚಾಲಕರಿಗೆ ನಿವೇಶನ, ಬಿಪಿಎಲ್ ಕಾರ್ಡ್, ಆರೋಗ್ಯ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಆಟೋ ಚಾಲಕರಿಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ, ಯಶಸ್ವಿನಿ ಯೋಜನೆ ಜಾರಿ, ಬಿಪಿಎಲ್ ಕಾರ್ಡ್ ವಿತರಣೆ ಹಾಗೂ 2 ಸ್ಟ್ರೋಕ್ ಹೊಂದಿರುವ ಆಟೋ ಚಾಲಕರು 4 ಸ್ಟ್ರೋಕ್ ಆಟೋ ಖರೀದಿಸಲು ರಾಷ್ಟ್ರೀಕೃತ ಬ್ಯಾಂಕುಗಳಿಂದ 30 ಸಾವಿರ ರೂ. ಸಾಲ ಸೌಲಭ್ಯ ಒದಗಿಸುವ ಸಂಬಂಧ 2016ರ ಜೂ.1ರಂದು ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡಾವಳಿಗಳಿಗೆ (ನಿರ್ಣಯ) ತಾರ್ಕಿಕ ಅಂತ್ಯ ಕಾಣಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X