Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೈಗಾರಿಕೋದ್ಯಮಿಗಳಿಗೆ ಹಣ ನೀಡಲು ವಿಲೀನ:...

ಕೈಗಾರಿಕೋದ್ಯಮಿಗಳಿಗೆ ಹಣ ನೀಡಲು ವಿಲೀನ: ಪರಿಷತ್ ಸದಸ್ಯ ಐವಾನ್ ಡಿಸೋಜಾ

ವಿಜಯ ಬ್ಯಾಂಕ್ ವಿಲೀನಕ್ಕೆ ಕಾಂಗ್ರೆಸ್ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ3 Jan 2019 7:14 PM IST
share
ಕೈಗಾರಿಕೋದ್ಯಮಿಗಳಿಗೆ ಹಣ ನೀಡಲು ವಿಲೀನ: ಪರಿಷತ್ ಸದಸ್ಯ ಐವಾನ್ ಡಿಸೋಜಾ

ಬೆಂಗಳೂರು, ಜ.3: ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ವಿಜಯ ಬ್ಯಾಂಕನ್ನು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಕ್ಕೆ ಮುಂದಾಗಿರುವ ಕೇಂದ್ರ ಸರಕಾರದ ಕ್ರಮ ಸಲ್ಲ. ವಿಲೀನ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಆಗ್ರಹಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿಕರಿಂದಲೇ ಅಭಿವೃದ್ಧಿ ಹೊಂದಿರುವ ಬ್ಯಾಂಕ್ ಅನ್ನು ಕೈಗಾರಿಕೋದ್ಯಮಿಗಳಿಗೆ ಹಣ ನೀಡಲು ವಿಲೀನ ಮಾಡಲಾಗುತ್ತಿದೆ ಎಂದು ದೂರಿದರು.

ನಷ್ಟದಲ್ಲಿರುವ ಬ್ಯಾಂಕುಗಳ ಪುನಃಶ್ಚೇತನಕ್ಕೆ ಲಾಭದಲ್ಲಿರುವ ಬ್ಯಾಂಕುಗಳ ಜತೆ ವಿಲೀನ ಸಹಜ. ಆದರೆ, ಅತ್ಯಂತ ಹೆಚ್ಚು ಲಾಭದಲ್ಲಿರುವ ಮತ್ತು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಜಯ ಬ್ಯಾಂಕ್‌ನ್ನು ನಷ್ಟದ ಸುಳಿಯಲ್ಲಿರುವ ಬ್ಯಾಂಕಿನ ಜತೆಗೆ ವಿಲೀನ ಮಾಡುತ್ತಿರುವುದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಅವರು ಸಂಶಯ ವ್ಯಕ್ತಪಡಿಸಿದರು.

ಕೃಷಿಕರ ಅಭಿವೃದ್ಧಿಗಾಗಿ 1931ರಲ್ಲಿ 87ವರ್ಷಗಳ ಹಿಂದೆ ಸ್ಥಾಪಿತವಾಗಿರುವ ವಿಜಯ ಬ್ಯಾಂಕಿನ ಬಹುತೇಕ 2,700ರಷ್ಟು ಶಾಖೆಗಳು ಗ್ರಾಮೀಣ ಪ್ರದೇಶದಲ್ಲಿವೆ. ಬ್ಯಾಂಕ್ ಲಾಭದಾಯಕವಾಗಿದ್ದು, ಎನ್‌ಪಿಎ ಶೇ.4ರಷ್ಟು ಅತ್ಯಂತ ಕಡಿಮೆ ಇದೆ. ಇಂತಹ ಬ್ಯಾಂಕನ್ನು ಹೆಸರೇ ಗೊತ್ತಿಲ್ಲದ ಬ್ಯಾಂಕಿನೊಂದಿಗಿನ ವಿಲೀನವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಐವಾನ್ ಡಿಸೋಜಾ ಹೇಳಿದರು.

ಬ್ಯಾಂಕುಗಳ ವಿಲೀನ ಅತ್ಯಂತ ಮಹತ್ವದ ವಿಚಾರ. ಜನರ ಬದುಕಿನ ಪ್ರಶ್ನೆಯೂ ಇದರಲ್ಲಿದೆ. ಇಂತಹ ತೀರ್ಮಾನವನ್ನು ಸಂಸತ್‌ನಲ್ಲಿ ಪ್ರಕಟಿಸದೆ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕೇಂದ್ರದ ಈ ಕ್ರಮ ಖಂಡಿಸಿ ರಾಜ್ಯದ ಎಲ್ಲ ಸಂಸದರು ಹೋರಾಟ ನಡೆಸಬೇಕೆಂದು ಅವರು ಆಗ್ರಹಿಸಿದರು.

ನೀರವ್ ಮೋದಿಯಂತಹವರಿಗೆ ಸಾಲ ನೀಡಲಿಲ್ಲ ಎಂದು ವಿಜಯ ಬ್ಯಾಂಕ್‌ನ್ನು ಮತ್ತೊಂದು ಬ್ಯಾಂಕಿನ ಜತೆ ವಿಲೀನಕ್ಕೆ ಕೇಂದ್ರ ಮುಂದಾಗಿದೆ. ಇದರಲ್ಲಿ ರಾಜ್ಯದ ಅಸ್ತಿತ್ವದ ಪ್ರಶ್ನೆಯೂ ಇದ್ದು, ವಿಲೀನ ಪ್ರಕ್ರಿಯೆಯಿಂದ ಕೈಬಿಡಬೇಕೆಂದು ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆಯಲು ಸಿಎಂ ಕುಮಾರಸ್ವಾಮಿಗೆ ಇದೇ ವೇಳೆ ಮನವಿ ಮಾಡಲಾಗುವುದು ಎಂದು ಐವಾನ್ ಡಿಸೋಜಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X