Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಜರಾಯಿ ಕಾಯ್ದೆಗೆ ತಿದ್ದುಪಡಿ ತರಲು...

ಮುಜರಾಯಿ ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ: ಸಚಿವ ಪಿ.ಟಿ.ಪರಮೇಶ್ವರ್‌ ನಾಯ್ಕ್

ವಾರ್ತಾಭಾರತಿವಾರ್ತಾಭಾರತಿ3 Jan 2019 7:20 PM IST
share
ಮುಜರಾಯಿ ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ: ಸಚಿವ ಪಿ.ಟಿ.ಪರಮೇಶ್ವರ್‌ ನಾಯ್ಕ್

ಬೆಂಗಳೂರು, ಜ.3: ಮುಜರಾಯಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ‘ಎ’ ಶ್ರೇಣಿಯ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಹಣವನ್ನು ಇತರ ದೇವಾಲಯಗಳು, ಛತ್ರಗಳ ಅಭಿವೃದ್ಧಿ ಹಾಗೂ ಜೀರ್ಣೋದ್ಧಾರಕ್ಕಾಗಿ ಬಳಸಿಕೊಳ್ಳುವ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಲಾಗಿದೆ ಎಂದು ನೂತನ ಮುಜರಾಯಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಪಿ.ಟಿ.ಪರಮೇಶ್ವರ್‌ ನಾಯ್ಕ್ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಸ್ಪೀಕರ್ ಕೆ.ಆರ್.ರಮೇಶ್‌ ಕುಮಾರ್, ಆರ್ಥಿಕವಾಗಿ ಸದೃಢವಾಗಿರುವ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಹಣದ ಒಂದಷ್ಟು ಭಾಗವನ್ನು ಇತರ ದೇವಾಲಯಗಳ ಅಭಿವೃದ್ಧಿಗೂ ಬಳಸಿಕೊಳ್ಳುವಂತೆ ಸಲಹೆ ನೀಡಿದ್ದನ್ನು ಸ್ಮರಿಸಿಕೊಂಡರು.

ತಿರುಪತಿ, ವಾರಣಾಸಿ, ಮಂತ್ರಾಲಯ ಸೇರಿದಂತೆ ಇನ್ನಿತರೆಡೆ ಇರುವ ಕರ್ನಾಟಕದ ಛತ್ರಗಳು, ಅತಿಥಿಗೃಹಗಳು ಅನುದಾನದ ಕೊರತೆ, ಸೂಕ್ತ ನಿರ್ವಹಣೆಯಿಲ್ಲದೆ ಭಕ್ತಾದಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಮ್ಮ ರಾಜ್ಯದ ಆಸ್ತಿಯ ಪ್ರಯೋಜನ ನಮ್ಮ ಜನರಿಗೆ ಸಿಗಬೇಕು ಎಂದು ಅವರು ಹೇಳಿದರು.

ಅತಿಥಿ ದೇವೋಭವ ಎನ್ನುತ್ತೀರಾ. ದೇವರ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಕಲ್ಪಿಸುವ ಸೌಲಭ್ಯಗಳು ಇದೇನಾ. ನಮ್ಮ ಮನೆಗಳನ್ನು ಇದೇ ರೀತಿ ಅವ್ಯವಸ್ಥೆಯಿಂದ ಇಟ್ಟುಕೊಳ್ಳುತ್ತೇವೆಯೇ? ಭಕ್ತರು ಮೈಸೂರು ಅರಮನೆಯ ಸಿಂಹಾಸವನ್ನು ಬಯಸುವುದಿಲ್ಲ. ನಮ್ಮ ಅತಿಥಿಗೃಹದಲ್ಲಿ ಸ್ವಚ್ಛತೆ, ಒಳ್ಳೆಯ ಹಾಸಿಗೆ, ಬೆಡ್‌ಶೀಟ್‌ಗಳನ್ನು ಬಯಸುತ್ತಾರೆ ಅಷ್ಟೇ. ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಸೂಚಿಸಿದರು.

ನಮ್ಮ ಇಲಾಖೆಯ ವ್ಯಾಪ್ತಿಯಲ್ಲಿ 34,558 ಅಧಿಸೂಚಿತ ಸಂಸ್ಥೆಗಳಿವೆ. ಅವುಗಳ ಅಭಿವೃದ್ಧಿ, ದುರಸ್ತಿ, ಜೀರ್ಣೋದ್ಧಾರ, ಪುನರ್‌ ನಿರ್ಮಾಣದ ಹೊಣೆಗಾರಿಕೆ ನಮ್ಮ ಮೇಲಿದೆ. ಶ್ರೀಮಂತ ದೇವಾಲಯಗಳಲ್ಲಿ ಸಂಗ್ರಹವಾಗುವ ಸ್ವಲ್ಪ ಪ್ರಮಾಣದ ಹಣವನ್ನು ಬೇರೆ ದೇವಾಲಯಗಳ ಅಭಿವೃದ್ಧಿಗೂ ಬಳಸಿಕೊಳ್ಳುವ ಸಂಬಂಧ ಕಾಯ್ದೆಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಪ್ರಯತ್ನಿಸುವಂತೆ ಪರಮೇಶ್ವರ್‌ ನಾಯ್ಕ್ ಸಲಹೆ ನೀಡಿದರು.

ನೂತನ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯ ಧಾರ್ಮಿಕ ಪರಿಷತ್‌ಗೆ ಸದಸ್ಯರನ್ನು ನೇಮಕ ಮಾಡದಿರುವುದನ್ನು ಗಮನಿಸಿದ ಪರಮೇಶ್ವರ್ ನಾಯ್ಕ್, ಈ ಸಂಬಂಧ ಕೂಡಲೆ ಕಡತವನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಧಾರ್ಮಿಕ ಪರಿಷತ್ ರಚನೆಯಾಗುವವರೆಗೆ ಕಾಲಹರಣ ಮಾಡದೆ, ಮುಜರಾಯಿ ಕಾಯ್ದೆಗೆ ತಿದ್ದುಪಡಿ ತರುವ ಸಂಬಂಧ ತಜ್ಞರ ಸಲಹೆಗಳನ್ನು ಪಡೆಯಿರಿ, ಆನಂತರ, ಧಾರ್ಮಿಕ ಪರಿಷತ್ ಸಭೆಯಲ್ಲೂ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳೋಣ ಎಂದರು.

ಸಭೆಯಲ್ಲಿ ಮುಜರಾಯಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X