Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನವಹಕ್ಕುಗಳ ಉಲ್ಲಂಘನೆಯ ಆರೋಪಹೊತ್ತ...

ಮಾನವಹಕ್ಕುಗಳ ಉಲ್ಲಂಘನೆಯ ಆರೋಪಹೊತ್ತ ಪೊಲೀಸ್ ಅಧಿಕಾರಿಗೆ ಛತ್ತೀಸ್‌ಗಡ ಕಾಂಗ್ರೆಸ್ ಸರಕಾರದಲ್ಲಿ ಪ್ರಮುಖ ಹುದ್ದೆ!

ವಾರ್ತಾಭಾರತಿವಾರ್ತಾಭಾರತಿ3 Jan 2019 8:08 PM IST
share
ಮಾನವಹಕ್ಕುಗಳ ಉಲ್ಲಂಘನೆಯ ಆರೋಪಹೊತ್ತ ಪೊಲೀಸ್ ಅಧಿಕಾರಿಗೆ ಛತ್ತೀಸ್‌ಗಡ ಕಾಂಗ್ರೆಸ್ ಸರಕಾರದಲ್ಲಿ ಪ್ರಮುಖ ಹುದ್ದೆ!

ಹೊಸದಿಲ್ಲಿ,ಜ.3: ಛತ್ತೀಸ್‌ಗಡದ ನೂತನ ಕಾಂಗ್ರೆಸ್ ಸರಕಾರವು ಬಸ್ತಾರ್‌ನ ಮಾಜಿ ಐಜಿಪಿ ಎಸ್‌ಆರ್‌ಪಿ ಕಲ್ಲೂರಿ ಅವರನ್ನು ಆರ್ಥಿಕ ಅಪರಾಧಗಳ ಘಟಕ ಮತ್ತು ಭ್ರಷ್ಟಾಚಾರ ನಿಗ್ರಹ ಘಟಕದ ಮುಖ್ಯಸ್ಥರನ್ನಾಗಿ ನೇಮಕಗೊಳಿಸಿದೆ.

ಕಲ್ಲೂರಿ ರಾಜ್ಯದಲ್ಲಿ ಅತ್ಯಂತ ವಿವಾದಿತ ಅಧಿಕಾರಿಯಾಗಿದ್ದಾರೆ. 2011ರ ಕಾರ್ಯಾಚರಣೆಗಳ ಸಂದರ್ಭದಲ್ಲಿ ಆದಿವಾಸಿಗಳ ಮನೆಗಳ ದಹನದಲ್ಲಿ ಕಲ್ಲೂರಿ ಭಾಗಿಯಾಗಿದ್ದನ್ನು ನೋಡಿದ್ದ ಇಬ್ಬರು ಸಾಕ್ಷಿಗಳನ್ನು ನವೆಂಬರ್‌ನಲ್ಲಿ ಸೋರಿಕೆಯಾಗಿದ್ದ ಆಂತರಿಕ ಸಿಬಿಐ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ‘ಮೇಲಿನಿಂದ ಸೂಚನೆಗಳು ’ ಬಂದ ಬಳಿಕ ಅಂತಿಮ ಆರೋಪಟ್ಟಿಯಿಂದ ಇಬ್ಬರು ಸಾಕ್ಷಿಗಳ ಹೆಸರುಗಳನ್ನು ತೆಗೆದುಹಾಕಲಾಗಿತ್ತು ಎಂದು ಸುದ್ದಿ ಜಾಲತಾಣ ‘ದಿ ವೈರ್’ ವರದಿ ಮಾಡಿತ್ತು. ಕಲ್ಲೂರಿ ಆಗ ದಾಂತೆವಾಡಾದಲ್ಲಿ ಸೀನಿಯರ್ ಎಸ್‌ಪಿ ಆಗಿದ್ದರು. ಅವರ ಅಧಿಕಾರಾವಧಿಯು ಅತ್ಯಾಚಾರ ಘಟನೆಗಳಿಗೂ ಸಾಕ್ಷಿಯಾಗಿತ್ತು.

2017,ಫೆಬ್ರವರಿಯಲ್ಲಿ ಬಸ್ತಾರ್‌ನ ಲೇಖಕಿ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿ ಬೇಲಾ ಭಾಟಿಯಾರ ಮೇಲೆ ಗುಂಪೊಂದು ದಾಳಿ ನಡೆಸಿದ ಬಳಿಕ ಐಜಿಪಿಯಾಗಿದ್ದ ಕಲ್ಲೂರಿಯವರನ್ನು ಬಸ್ತಾರ್‌ನಿಂದ ಹೊರಗೆ ವರ್ಗಾವಣೆ ಮಾಡಲಾಗಿತ್ತು.

ಕಲ್ಲೂರಿಯವರನ್ನು ಪೊಲೀಸ್ ಕೇಂದ್ರ ಕಚೇರಿಯಲ್ಲಿ ತರಬೇತಿ ಇಲಾಖೆಗೆ ವರ್ಗಾವಣೆಗೊಳಿಸಲಾಗಿತ್ತು. ಮಾನವ ಹಕ್ಕು ಹೋರಾಟಗಾರರ ಮೇಲೆ ರಸ್ತೆಗಳಲ್ಲಿ ವಾಹನಗಳನ್ನು ಹರಿಸಬೇಕು ಎಂದು ಪೊಲೀಸ್ ಅಧಿಕಾರಿಯೋರ್ವ ಆಣಿಮುತ್ತುಗಳನ್ನು ಉದುರಿಸಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಅಶಿಸ್ತಿಗಾಗಿ ಕಲ್ಲೂರಿಯವರಿಗೆ ನೋಟಿಸ್‌ಗಳನ್ನು ಹೊರಡಿಸಲಾಗಿತ್ತು ಎಂದು ಸುದ್ದಿ ಜಾಲತಾಣವೊಂದು ತನ್ನ ವರದಿಯಲ್ಲಿ ಹೇಳಿದೆ.

 ಮಾನವ ಹಕ್ಕುಗಳ ಉಲ್ಲಂಘನೆಗಳ ಆರೋಪದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಈ ಹಿಂದೆ ಕಲ್ಲೂರಿಯವರಿಗೆ ನೋಟಿಸ್‌ಗಳನ್ನು ಹೊರಡಿಸಿತ್ತು,ಆದರೆ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಅವುಗಳನ್ನು ತಪ್ಪಿಸಿಕೊಂಡಿದ್ದರು. ಈ ಹಿಂದೆ ಬಸ್ತಾರ್‌ನಲ್ಲಿ ಪತ್ರಕರ್ತರು ಮತ್ತು ಮಾನವ ಹಕ್ಕು ಹೋರಾಟಗಾರರಿಗೆ ಬೆದರಿಕೆಗಳನ್ನು ಒಡ್ಡಿದ ಆರೋಪಗಳು ಅವರ ಮೇಲಿದ್ದವು ಎಂದೂ ವರದಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X