Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಸದ ನಳಿನ್ ಕುಮಾರ್ ಕಟೀಲ್ ಮೋದಿ...

ಸಂಸದ ನಳಿನ್ ಕುಮಾರ್ ಕಟೀಲ್ ಮೋದಿ ಭಕ್ತಿಯಿಂದ ಹೊರ ಬರಬೇಕು: ಅಮೀನ್ ಮಟ್ಟು

ವಿಜಯಾ ಬ್ಯಾಂಕ್ ವಿಲೀನ ಖಂಡಿಸಿ ಸಮಾನ ಮನಸ್ಕರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Jan 2019 8:13 PM IST
share
ಸಂಸದ ನಳಿನ್ ಕುಮಾರ್ ಕಟೀಲ್ ಮೋದಿ ಭಕ್ತಿಯಿಂದ ಹೊರ ಬರಬೇಕು: ಅಮೀನ್ ಮಟ್ಟು

ಮಂಗಳೂರು, ಜ.3: ದ.ಕ.ಜಿಲ್ಲೆಯಲ್ಲಿ ಸ್ಥಾಪನೆಗೊಂಡ ವಿಜಯಾ ಬ್ಯಾಂಕನ್ನು ‘ಬ್ಯಾಂಕ್ ಆಫ್ ಬರೋಡಾ’ದ ಜೊತೆ ಕೇಂದ್ರ ಸರಕಾರ ವಿಲೀನಗೊಳಿಸಿರುವುದನ್ನು ಖಂಡಿಸಿ ‘ಸಮಾನ ಮನಸ್ಕರು’ ಸೇರಿ ಗುರುವಾರ ದ.ಕ. ಜಿಲ್ಲಾಧಿಕಾರಿಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ, ಚಿಂತಕ ದಿನೇಶ್ ಅಮೀನ್ ಮಟ್ಟು ದ.ಕ.ಜಿಲ್ಲೆಯಲ್ಲಿ 5 ಬ್ಯಾಂಕ್‌ಗಳು ಜನ್ಮತಾಳಿವೆ. ಇವ್ಯಾವುದೂ ಕೂಡಾ ನಷ್ಟದಲ್ಲಿಲ್ಲ. ದಿವಾಳಿಯೂ ಆಗಿಲ್ಲ. ಪ್ರಾಮಾಣಿಕತೆ ಮತ್ತು ವೃತ್ತಿಪರತೆಯಿಂದ ಈ ನೆಲದ ಮಣ್ಣಿನ ಗುಣವನ್ನು ಎತ್ತಿ ತೋರಿಸಿವೆ. ಮುಲ್ಕಿ ಸುಂದರ ರಾಮ ಶೆಟ್ಟಿ, ಎ.ಬಿ.ಶೆಟ್ಟಿ, ಕೆ.ಕೆ.ಶೆಟ್ಟಿಯಂತಹ ಹಿರಿಯ ಚೇತನರ ನೇತೃತ್ವದಲ್ಲಿ ರೈತರು ಕಟ್ಟಿ ಬೆಳೆಸಿದ ಈ ಬ್ಯಾಂಕನ್ನು ನಷ್ಟದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‌ನೊಂದಿಗೆ ವಿಲೀನಗೊಳಿಸಿದ್ದರೂ ಕೂಡಾ ಜಿಲ್ಲೆಯ ಜನರ ಧ್ವನಿಯಾಗಬೇಕಿದ್ದ ಸಂಸದರು ಸಂಸತ್ತಿನಲ್ಲಿ ಧ್ವನಿ ಎತ್ತದಿರುವ ಮೂಲಕ ಹಿರಿಯ ಚೇತನರಿಗೆ ಅವಮಾನ ಮಾಡಿದ್ದಾರೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್ ಮೋದಿ ಭಕ್ತಿಯಿಂದ ಹೊರ ಬರಬೇಕು ಮತ್ತು ಜಿಲ್ಲೆಯ ಜನತೆಯ ಪರ ನಿಲ್ಲಬೇಕು. ಬಡವರಿಗೆ ಬ್ಯಾಂಕ್‌ಗಳ ಬಾಗಿಲುಗಳನ್ನು ಮಾಜಿ ಪ್ರಧಾನಿ ಇಂದಿರಾಗಾಂಧಿ ತೆರೆದಿದ್ದರೆ, ಹಾಲಿ ಪ್ರಧಾನಿ ನರೇಂದ್ರ ಮೋದಿ ಬಡವರಿಗೆ ಬ್ಯಾಂಕ್‌ಗಳ ಬಾಗಿಲುಗಳನ್ನು ಮುಚ್ಚಿಸಿದ್ದಾರೆ. ಸಾಲಮೇಳದ ಮೂಲಕ ಬಡವರಿಗೆ ಬ್ಯಾಂಕ್‌ಗಳನ್ನು ಹತ್ತಿರವಾಗಿಸಿದ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಕೂಡ ಈವರೆಗೆ ಈ ಬಗ್ಗೆ ಮಾತನಾಡದಿರುವುದು ವಿಪರ್ಯಾಸ ಎಂದು ದಿನೇಶ್ ಅಮೀನ್ ಮಟ್ಟು ನುಡಿದರು.

ಜಿಲ್ಲೆಯ ರಾಜಕೀಯ ನಾಯಕತ್ವವು ದಿವಾಳಿಯಾಗಿದೆ. ಜಿಲ್ಲೆ ಮೇಲೆ ಎಲ್ಲಾ ಕಡೆಯಿಂದಲೂ ದಾಳಿಯಾಗುತ್ತಿದೆ. ಜನಪ್ರತಿನಿಧಿಗಳು ಕುರುಡು ಕಣ್ಣಿನವರಾದರೆ ಅದರ ಫಲವನ್ನು ಅವರನ್ನು ಆರಿಸಿ ಕಳುಹಿಸಿದ ಮತದಾರರು ಅನುಭವಿಸಬೇಕಾಗುತ್ತದೆ ಎಂಬುದಕ್ಕೆ ದ.ಕ.ಜಿಲ್ಲೆ ಸಾಕ್ಷಿಯಾಗುತ್ತಿದೆ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಇಂತಹ ಕುರುಡು ಕಣ್ಣಿನ ಜನಪ್ರತಿನಿಧಿಗಳಿಗೆ ಮತದಾರರು ತಕ್ಕಪಾಠ ಕಲಿಸಲು ಮುಂದಾಗಬೇಕು ಎಂದು ದಿನೇಶ್ ಅಮೀನ್ ಮಟ್ಟು ಕರೆ ನೀಡಿದರು.

ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಾಮಾಜಿಕ ಹೋರಾಟಗಾರ ಎಂ.ಜಿ.ಹೆಗಡೆ ಮಾತನಾಡಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಮೋಹನ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎ.ಮುಹಮ್ಮದ್ ಹನೀಫ್, ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ, ಕಾರ್ಪೊರೇಟರ್ ದಯಾನಂದ ಶೆಟ್ಟಿ, ಜೆಡಿಎಸ್ ಮುಖಂಡರಾದ ಮುನೀರ್ ಮುಕ್ಕಚೇರಿ ಮತ್ತು ಲತೀಫ್ ವಳಚ್ಚಿಲ್, ಮಾಜಿ ತಾಪಂ ಸದಸ್ಯ ಎನ್.ಇ. ಮುಹಮ್ಮದ್, ಯುವ ಕಾಂಗ್ರೆಸ್ ಮುಖಂಡರಾದ ಲುಕ್‌ಮಾನ್ ಬಂಟ್ವಾಳ, ಸುಹೈಲ್ ಕಂದಕ್, ಶಬ್ಬೀರ್ ಸಿದ್ದಕಟ್ಟೆ, ಸಿಪಿಎಂ ಮುಖಂಡ ಯಾದವ ಶೆಟ್ಟಿ, ಸಮುದಾಯ ಸಂಘಟನೆಯ ವಾಸುದೇವ ಉಚ್ಚಿಲ್, ಉಳ್ಳಾಲ ನಗರಸಭಾ ಸದಸ್ಯ ಮುಹಮ್ಮದ್ ಮುಕ್ಕಚೇರಿ, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಯೋಗೀಶ್ ಶೆಟ್ಟಿ, ಮುಹಮ್ಮದ್ ಮುಸ್ತಫಾ, ಅಬೂಬಕರ್ ಬಾವಾ, ವಿಲ್ಲಿ ವಿಲ್ಸನ್, ಮಾಧುರಿ ಬೋಳಾರ್, ಮುಹಮ್ಮದ್ ಸಾಲಿ ಮರವೂರು, ಹಾಗೂ ವಿವಿಧ ಬ್ಯಾಂಕ್‌ಗಳ ಪ್ರತಿನಿಧಿಗಳಾದ ಬಿ.ಎಂ. ಮಾಧವ, ಪ್ರಕಾಶ್, ಪುರುಷೋತ್ತಮ, ಗಣೇಶ್ ಮತ್ತಿತರರು ಪಾಲ್ಗೊಂಡಿದ್ದರು.
ಡಿವೈಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X