Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಮಾನದಲ್ಲಿ ಹೃದಯಾಘಾತ: ಪ್ರಥಮ ಚಿಕಿತ್ಸೆ...

ವಿಮಾನದಲ್ಲಿ ಹೃದಯಾಘಾತ: ಪ್ರಥಮ ಚಿಕಿತ್ಸೆ ನೀಡಿ ಮಹಿಳೆಯ ಪ್ರಾಣ ಉಳಿಸಿದ ಮಂಗಳೂರಿನ ವೈದ್ಯ

ಡಾ. ಖಾಸಿಮ್ ಕರ್ತವ್ಯಪ್ರಜ್ಞೆಗೆ ವ್ಯಾಪಕ ಪ್ರಶಂಸೆ

ರಶೀದ್ ವಿಟ್ಲರಶೀದ್ ವಿಟ್ಲ3 Jan 2019 9:52 PM IST
share
ವಿಮಾನದಲ್ಲಿ ಹೃದಯಾಘಾತ: ಪ್ರಥಮ ಚಿಕಿತ್ಸೆ ನೀಡಿ ಮಹಿಳೆಯ ಪ್ರಾಣ ಉಳಿಸಿದ ಮಂಗಳೂರಿನ ವೈದ್ಯ

ಜಿದ್ದಾದಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಹೃದಯಾಘಾತಕ್ಕೊಳಗಾದ ಮಹಿಳೆಯೊಬ್ಬರನ್ನು ಉಪ್ಪಳ ಮೂಲದ, ಮಂಗಳೂರಿನ ನಿವಾಸಿಯಾಗಿರುವ ವೈದ್ಯರೊಬ್ಬರು ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಿರುವ ಬಗ್ಗೆ ವರದಿಯಾಗಿದೆ.

ಮೂಲತಃ ಉಪ್ಪಳದವರಾಗಿರುವ ಡಾ. ಎ.ಕೆ. ಖಾಸಿಮ್ ಮಂಗಳೂರಿನ ನಿವಾಸಿಯಾಗಿದ್ದಾರೆ. ಸೌದಿ ಅರೇಬಿಯಾದ ಮಕ್ಕಾದಲ್ಲಿರುವ ಏಷಿಯನ್ ಪಾಲಿ ಕ್ಲಿನಿಕ್ ಆಸ್ಪತ್ರೆಯ ಜನರಲ್ ಫಿಸಿಷನ್ ಹಾಗೂ ಇನ್ಸೂರೆನ್ಸ್ ವಿಭಾಗದ ಮುಖ್ಯಸ್ಥರಾಗಿರುವ ಅವರು, ಇತ್ತೀಚೆಗೆ ರಜೆ ನಿಮಿತ್ತ ವಿಮಾನ ಮೂಲಕ ಜಿದ್ದಾದಿಂದ ಮಂಗಳೂರಿಗೆ ಮುಂಬೈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ಸೌದಿ ಕಾಲಮಾನ ರಾತ್ರಿ 1 ಗಂಟೆಗೆ ಜೆಟ್ ಏರ್ ವೇಸ್ ವಿಮಾನ ಜಿದ್ದಾದಿಂದ ಮುಂಬೈಗೆ ಹೊರಟಿತ್ತು. ಮಧ್ಯರಾತ್ರಿ ಎರಡೂವರೆ ಗಂಟೆಗೆ ವಿಮಾನದಲ್ಲಿ ಮುಂಬೈ ಮೂಲದ 55ರ ಹರೆಯದ ಫಾತಿಮಾ ಎಂಬವರಿಗೆ ಹೃದಯಾಘಾತವಾಗಿತ್ತು. “ವಿಮಾನ ಪ್ರಯಾಣಿಕರಲ್ಲಿ ಯಾರಾದರೂ ವೈದ್ಯರಿದ್ದಾರೆಯೇ ?” ಸಿಬ್ಬಂದಿ ಪ್ರಶ್ನಿಸಿದ್ದು,  ಡಾ. ಖಾಸಿಮ್ ತಕ್ಷಣ ಕಾರ್ಯ ಪ್ರವೃತ್ತರಾದರು.

ವಿಮಾನ ಸಿಬ್ಬಂದಿಗೆ ತನ್ನ ವೈದ್ಯಕೀಯ ಲೈಸನ್ಸನ್ನು ಅವರು ನೀಡಿದ್ದು, ಅದರ ವಿವರ ದಾಖಲಿಸಿದ ಬಳಿಕ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆಗೆ ಖಾಸಿಮ್ ರಿಗೆ ಅನುವು ಮಾಡಿಕೊಟ್ಟರು. ಡಾ.ಖಾಸಿಮ್ ಅವರು ಮಹಿಳೆಯನ್ನು ಪರೀಕ್ಷಿಸುವಾಗ ಹೃದಯಾಘಾತವಾಗಿ ಉಸಿರು ನಿಂತಿತ್ತು. ಖಾಸಿಮ್ ತಕ್ಷಣ ಎದೆಬಡಿತ ಪರೀಕ್ಷಿಸಿದರು. ಸತತ ಎರಡು ನಿಮಿಷಗಳ ಪ್ರಯತ್ನದ ಬಳಿಕ ನಾಡಿ ಮಿಡಿತಗೊಂಡಿತು. ನಿಶ್ಶಬ್ಧಗೊಂಡಿದ್ದ ಹೃದಯ ಸ್ತಂಭಿಸಿತು.

ಮಹಿಳೆಯನ್ನು ವಿಮಾನದ ಎದುರು ಭಾಗದಲ್ಲಿ ಬಿಸಿನೆಸ್ ಕ್ಲಾಸ್ ಸೀಟ್ ಮಧ್ಯೆ ಇರುವ ಐಲ್ (ನಡೆದಾಡುವ ಮಧ್ಯ ಭಾಗ) ನಲ್ಲಿ ಮಲಗಿಸಲಾಯಿತು. ವಿಮಾನದಲ್ಲಿದ್ದ ಮೆಡಿಕಲ್ ಕಿಟ್ ನಲ್ಲಿದ್ದ Adrenaline, Atropine ಚುಚ್ಚುಮದ್ದನ್ನು ಮಹಿಳೆಗೆ ನೀಡಲಾಯಿತು. ವಿಮಾನದ ಪೈಲಟ್ ಬೇರೆಡೆ ಎಮರ್ಜೆನ್ಸಿ ಲ್ಯಾಂಡ್ ಮಾಡಬೇಕೇ ಎಂದು ಕೇಳಿದಾಗ ಬೇಡವೆಂದು ಧೈರ್ಯ ತುಂಬಿದರು ಡಾ. ಖಾಸಿಮ್. ಶ್ವಾಸ ನಿಂತಿದ್ದ ಮುಂಬೈ ಮೂಲದ ಮಹಿಳೆ ಫಾತಿಮಾ ವಿಮಾನದಲ್ಲೇ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದರು.

ವಿಮಾನ ಮುಂಬೈ ತಲುಪುವ ತನಕ ಡಾ. ಖಾಸಿಮ್ ಮಲಗದೇ ಮಹಿಳೆಯ ಶುಶ್ರೂಷೆ ಮಾಡುತ್ತಿದ್ದರು. ಮುಂಬೈಯಲ್ಲಿ ಲ್ಯಾಂಡ್ ಆದ ತಕ್ಷಣ ಮಹಿಳೆಯನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಆಪತ್ಬಾಂಧವರಾದ ಮಂಗಳೂರಿನ ವೈದ್ಯ ಡಾ.ಖಾಸಿಮ್ ಅವರ ನಿಸ್ವಾರ್ಥ ಸೇವೆಗೆ ವಿಮಾನದಲ್ಲಿದ್ದ ಪ್ರಯಾಣಿಕರು ಪ್ರಶಂಸೆ ವ್ಯಕ್ತಪಡಿಸಿದರು. ಈ ಬಗ್ಗೆ ಡಾ.ಖಾಸಿಮ್ ಅವರು ತಮ್ಮ ಫೇಸ್ಬುಕ್ (AK Kasim) ಪುಟದಲ್ಲಿ ಪೋಸ್ಟ್ ಮಾಡಿದ್ದಾರೆ. ಇವರು ಮಂಗಳೂರು ಎಂ. ಫ್ರೆಂಡ್ಸ್ ಸಾಮಾಜಿಕ ಸಂಸ್ಥೆಯ ಅನಿವಾಸಿ ಸದಸ್ಯ.

share
ರಶೀದ್ ವಿಟ್ಲ
ರಶೀದ್ ವಿಟ್ಲ
Next Story
X