Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಋತುಚಕ್ರ ಮೈಲಿಗೆ ಎನ್ನುವವರಲ್ಲಿ...

ಋತುಚಕ್ರ ಮೈಲಿಗೆ ಎನ್ನುವವರಲ್ಲಿ ಅಶುದ್ಧತೆ ಅಡಗಿದೆ: ವಿಮರ್ಶಕಿ ಡಾ.ಎಂ.ಎಸ್.ಆಶಾದೇವಿ

ವಾರ್ತಾಭಾರತಿವಾರ್ತಾಭಾರತಿ3 Jan 2019 10:47 PM IST
share
ಋತುಚಕ್ರ ಮೈಲಿಗೆ ಎನ್ನುವವರಲ್ಲಿ ಅಶುದ್ಧತೆ ಅಡಗಿದೆ: ವಿಮರ್ಶಕಿ ಡಾ.ಎಂ.ಎಸ್.ಆಶಾದೇವಿ

ಬೆಂಗಳೂರು, ಜ.3: ಜನನ ಕ್ರಿಯೆಗೆ ಬಹುಮುಖ್ಯವಾದ ಋತುಚಕ್ರವನ್ನು ಮೈಲಿಗೆ ಎನ್ನುವ ಮನಸ್ಸುಗಳಲ್ಲಿ ಅಶುದ್ಧತೆ ಅಡಗಿದೆ ಎಂದು ವಿಮರ್ಶಕಿ ಡಾ.ಎಂ.ಎಸ್. ಆಶಾದೇವಿ ಹೇಳಿದರು.

ಗುರುವಾರ ನಗರದ ಗಾಂಧಿ ಭವನದಲ್ಲಿ ಸಾಧನ ಮಹಿಳಾ ಸಂಘಟನೆ ವತಿಯಿಂದ ಏರ್ಪಡಿಸಿದ್ದ, ನೆಲತಾಯಿ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಋತುಚಕ್ರ ಕ್ರಿಯೆಯಿಂದಲೇ ಪ್ರಕೃತಿ ಸೃಷ್ಟಿಯಾಗಿದ್ದು, ದೇಹ ಸೂತಕ ಪದ್ಧತಿಯನ್ನು ಹೆಣ್ಣು ಮಕ್ಕಳು ತಮ್ಮ ಮನಸ್ಸಿನಿಂದ ಕಿತ್ತೊಗೆಯಬೇಕು. ದೇಹ ಸೂತಕದ ಮೂಲಕ ವ್ಯವಸ್ಥೆ ಹೆಣ್ಣನ್ನು ಅಳೆಯುವುದು ಸರಿಯಲ್ಲ. ದೇಹ ಶುದ್ಧಿ ಹಾಗೂ ಶೀಲದ ಕಲ್ಪನೆ ಮೂಲಕ ಸಮಾಜ ಹೆಣ್ಣು ಮಕ್ಕಳನ್ನು ಬಂಧಿಸುತ್ತಿದೆ ಎಂದರು.

ಹೆಣ್ಣು ಎಂದರೆ ಸ್ತನ ಮತ್ತು ಯೋನಿ ಹೊಂದಿರುವ ಒಂದು ಜೀವವಲ್ಲ. ಅವಳಿಗೊಂದು ಅಸ್ಮಿತೆ, ಘನತೆ, ಚಹರೆ ಹಾಗೂ ಆತ್ಮಗೌರವವಿದೆ. ಕಾಲಚಕ್ರ ಬದಲಾದರೂ ಹೆಣ್ಣಿನ ಸ್ಥಿತಿಗತಿಗಳು ಹಾಗೇ ಇವೆ. ಸ್ವಚ್ಛ ಭಾರತದ ಬದಲಿಗೆ ಭಾರತದಲ್ಲಿರುವ ಮನುಷ್ಯರ ಮನಸ್ಸು ಮತ್ತು ಬುದ್ಧಿ ಸ್ವಚ್ಛವಾಗಬೇಕಿದೆ. ಹೆಣ್ಣು ಎಂದರೆ ದೇಹ ಎಂಬ ದೃಷ್ಟಿಕೋನ ಬದಲಾಗಬೇಕಿದೆ. ಆಕೆಯ ದೇಹ ನಿಂದನೆಗೆ ಮುಂದಾಗುವ ವ್ಯವಸ್ಥೆ ಅವಳ ಆಂತರ್ಯದ ಧ್ವನಿಗೆ ಅವಕಾಶ ನೀಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸೀಜಾಗೃತಿ ಸಂಘಟನೆಯ ಕರ್ನಾಟಕ ವಿಭಾಗದ ಕಾರ್ಯದರ್ಶಿ ಗೀತಾ ಮೆನನ್ ಮಾತನಾಡಿ, ಋತುಚಕ್ರ ಕ್ರಿಯೆ ವೈಜ್ಞಾನಿಕವಾದುದು. ಪುರುಷರ ದೇಹದಲ್ಲೂ ಅನೇಕ ವೈಜ್ಞಾನಿಕ ಬದಲಾವಣೆ ಕ್ರಿಯೆಗಳು ನಡೆಯುತ್ತಿರುತ್ತವೆ. ಆದರೆ ಹೆಣ್ಣು ಮಕ್ಕಳಲ್ಲಿ ಆಗುವ ಋತುಚಕ್ರ ಕ್ರಿಯೆಯನ್ನು ಮೈಲಿಗೆ ಎಂದು ಶಬರಿಮಲೆ ದೇವಾಲಯಕ್ಕೆ ಪ್ರವೇಶಾತಿ ನೀಡದಿರುವುದು ಸರಿಯಲ್ಲ ಎಂದರು.

ಕರ್ನಾಟಕ ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ಜೆ.ಕೆ.ಪ್ರೇಮಾ, ರಂಗಭೂಮಿ ಕಲಾವಿದೆ ಆರ್.ಮಂಗಳ ಲಿಲ್ಲಿ, ಸ್ಲಂ ಮಹಿಳಾ ಸಂಘಟನೆಯ ಜಾನ್ಸಿರಾಣಿ, ಗಾರ್ಮೆಂಟ್ ಮತ್ತು ಟೆಕ್ಸ್‌ಟೈಲ್ ಕಾರ್ಮಿಕರ ಸಂಘಟನೆಯ ರಾಜೇಶ್ವರಿ, ಸ್ವರಾಜ್ ಸಂಘಟನೆಯ ಜಯಲಕ್ಷ್ಮಿ ಅವರಿಗೆ ನೆಲತಾಯಿ ಪುರಸ್ಕಾರ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X