Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಮಹಾನಗರ ಪಾಲಿಕೆಯ ಒಂದು ಕಸದ...

ಬೆಂಗಳೂರು ಮಹಾನಗರ ಪಾಲಿಕೆಯ ಒಂದು ಕಸದ ಬುಟ್ಟಿಗೆ 2.8 ಲಕ್ಷ ಖರ್ಚು: ಆರೋಪ

ವಾರ್ತಾಭಾರತಿವಾರ್ತಾಭಾರತಿ3 Jan 2019 11:01 PM IST
share
ಬೆಂಗಳೂರು ಮಹಾನಗರ ಪಾಲಿಕೆಯ ಒಂದು ಕಸದ ಬುಟ್ಟಿಗೆ 2.8 ಲಕ್ಷ ಖರ್ಚು: ಆರೋಪ

ಬೆಂಗಳೂರು, ಜ.3: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಸದ ಬುಟ್ಟಿಗಾಗಿಯೇ 2.8 ಲಕ್ಷ ಖರ್ಚು ಮಾಡುವ ಮೂಲಕ ಸೈಂಟಿಫಿಕ್ ವೇಸ್ಟ್ ಕಲೆಕ್ಷನ್ ಬಿನ್ ಹೆಸರಲ್ಲಿ ಸಾರ್ವಜನಿಕರ ಹಣವನ್ನು ವ್ಯಯ ಮಾಡುತ್ತಿದೆ. ನಗರದ ವಿವಿಧೆಡೆ ಹಸಿ ಒಣ ಕಸಕ್ಕೆ ಬುಟ್ಟಿಗಳನ್ನು ಅಳವಡಿಸಲಾಗಿದ್ದು, ಇದರ ಒಟ್ಟು ಖರ್ಚು 5.79 ಲಕ್ಷ ರೂ. ಯಾಗಿದ್ದು, ಒಂದು ಕಸದ ಬುಟ್ಟಿಗೆ 2,89,500 ರೂ. ಗಳಂತೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ. ಒಟ್ಟು 200 ಕಡೆ 400 ಬಿನ್‌ಗೆ 11.58 ಕೋಟಿ ರೂಪಾಯಿ ಪೋಲು ಮಾಡಲಾಗಿದೆ ಎಂದು ಜೋಗುಪಾಳ್ಯ ವಾರ್ಡ್ ಸದಸ್ಯ ಗೌತಮ್ ಆರೋಪಿಸಿದ್ದಾರೆ.

ಡಸ್ಟ್ ಬಿನ್ ಯೋಜನೆ ಜಾರಿಗೆ ತರಲು 2016 ಡಿಸೆಂಬರ್ 22 ರಂದು ಟೆಂಡರ್ ಕರೆಯಲಾಗಿತ್ತು. ಆದರೆ ಯೋಜನೆ 2018 ಮಾರ್ಚ್‌ನಲ್ಲಿ ಜಾರಿ ಬಂದಿದೆ. ಯಾವುದೇ ಯೋಜನೆಗೆ ಕೈ ಹಾಕಬೇಕಾದರೆ ಎಲ್ಲೆಲ್ಲಿ ಡೆಸ್ಟ್ ಬಿನ್ ಹಾಕಬೇಕು ಎಂಬ ಮಾಹಿತಿ ಸಿದ್ಧಪಡಿಸಬೇಕು. ಆದರೆ ಆ ಇನ್ನೂರು ಪ್ರದೇಶಗಳನ್ನು ಮೊದಲೇ ಗುರುತಿಸಿಲ್ಲ. ಪ್ರಸ್ತುತ ನೂರು ಸ್ಥಳಗಳಲ್ಲಿ ಡೆಸ್ಟ್‌ಬಿನ್ ಅಳವಡಿಸಲಾಗಿದೆ.

ತಜ್ಞರ ಪ್ರಕಾರ ಆ ಡಸ್ಟ್ ಬಿನ್‌ಗಳ ಸಾಮರ್ಥ್ಯ ತಿಂಗಳಿಗೆ 2 ಮೆಟ್ರಿಕ್ ಟನ್ ಕಸ ಮಾತ್ರ. ಆ ಪ್ರಕಾರ 200 ಕಡೆ 5 ವರ್ಷದಲ್ಲಿ 24 ಸಾವಿರ ಮೆಟ್ರಿಕ್ ಟನ್ ಕಸ ಸಂಗ್ರಹವಾಗಲಿದೆ. ಪ್ರತಿ 1 ಮೆಟ್ರಿಕ್ ಟನ್‌ಗೆ 625 ರೂ. ನೀಡಿದರೆ 1.5 ಕೋಟಿ ರೂ. ಸಾಕಾಗುತ್ತದೆ. ಈ ಪ್ರಕಾರ 33 ಕೋಟಿಯಲ್ಲಿ ಉಳಿಕೆಯ 31.50 ಕೋಟಿ ರೂ. ಏನಾಯಿತು ಎಂಬುದು ಪ್ರಶ್ನೆಯಾಗಿದೆ.

ಕಸ ಎತ್ತಲು ಬಳಸುವ ವಾಹನ, ಯಂತ್ರಕ್ಕೆ 11.58 ಕೋಟಿ ರೂ. ಹಾಗೂ ಕಸ ಸಾಗಣೆ ಮಾಡಲು ಬಳಸುವ ಯಂತ್ರದ ಖರ್ಚು 4.48 ಕೋಟಿ ರೂ.ಆಗಿದ್ದು, ಈ ಪ್ರಕಾರ 200 ಕಡೆಗಳಲ್ಲಿ ಕಸ ತೆಗೆಯಲು 8 ವಾಹನ ಬಳಸುತ್ತಿದ್ದು, ಒಂದು ವಾಹನಕ್ಕೆ 56 ಲಕ್ಷ ರೂ. ಆಗುತ್ತದೆ. ಅಷ್ಟೇ ಅಲ್ಲದೆ ಕಸದ ಡಬ್ಬಗಳ ನಿರ್ವಹಣೆಗೆ 5.21 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಕೋಟಿ ಕೋಟಿ ರೂ. ಹಣ ನೀಡುವ ಬದಲು ಬಿಬಿಎಂಪಿಯೇ ಹೊಸ ವಾಹನಗಳನ್ನು ಖರೀದಿಸಬಹುದು. ಸಾರ್ವಜನಿಕರ ಹಣ ದುಂದು ವೆಚ್ಚಕ್ಕೆ ಪಾಲಿಕೆ ಕಡಿವಾಣ ಹಾಕಬೇಕಿದೆ.

ಝೋಂಟಾ ಕಂಪನಿ ಸೈಂಟಿಫಿಕ್ ವೇಸ್ಟ್ ಕಲೆಕ್ಷನ್ ಬಿನ್‌ನ ಗುತ್ತಿಗೆ ಪಡೆದಿದ್ದು, 55 ಕೋಟಿ ರೂ. ಯೋಜನೆಯಾಗಿದೆ. 200 ಸ್ಥಳಗಳಲ್ಲಿ ಡೆಸ್ಟ್ ಬಿನ್‌ಗಳನ್ನು ಅಳವಡಿಸಲಾಗಿದ್ದು, ಮೇಲ್ವಿಚಾರಣೆಗೆ 25.75 ಲಕ್ಷ ರೂ. ಖರ್ಚಾಗುತ್ತದೆ ಎಂದು ಕಂಪನಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X