ಹಂಸಕಾವ್ಯ ರಾಷ್ಟ್ರೀಯ ಕಾವ್ಯ ಪುರಸ್ಕಾರಕ್ಕೆ ಜ್ಯೋತಿ ಗುರುಪ್ರಸಾದ್ ಆಯ್ಕೆ

ಮಂಗಳೂರು, ಜ.3: ಮಂಗಳೂರಿನ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ಟ್ರಸ್ಟ್ನಿಂದ ಅತ್ಯುತ್ತಮ ಕವನ ಸಂಕಲನಕ್ಕೆ ಕೊಡಮಾಡುವ 2018ನೇ ಸಾಲಿನ ಹಂಸಕಾವ್ಯ ರಾಷ್ಟ್ರೀಯ ಕಾವ್ಯ ಪುರಸ್ಕಾರಕ್ಕೆ ಕಾರ್ಕಳದ ಜ್ಯೋತಿ ಗುರುಪ್ರಸಾದ್ ಅವರ ‘ವರನಂದಿ ಪ್ರತಿಮೆ’ ಕವನ ಸಂಕಲನ ಆಯ್ಕೆಯಾಗಿದೆ.
ಹಂಸಕಾವ್ಯ ಪುರಸ್ಕಾರವು 10 ಸಾವಿರ ರೂ. ನಗದು, ಪದಕ, ಫಲಕ, ಸನ್ಮಾನ ಪತ್ರ, ಉನ್ನತ ಮಟ್ಟದ ಸನ್ಮಾನಗಳನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 2ರಂದು ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





