Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಹಿತಿ ತಂತ್ರಜ್ಞಾನ: ಸಲಹೆ ನೀಡಲು ತಜ್ಞರ...

ಮಾಹಿತಿ ತಂತ್ರಜ್ಞಾನ: ಸಲಹೆ ನೀಡಲು ತಜ್ಞರ ಸಮಿತಿ ಅಗತ್ಯವಿದೆ; ಡಾ.ಚಂದ್ರಶೇಖರ ಕಂಬಾರ

ಧಾರವಾಡದಲ್ಲಿ 84ನೇ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ4 Jan 2019 8:24 PM IST
share
ಮಾಹಿತಿ ತಂತ್ರಜ್ಞಾನ: ಸಲಹೆ ನೀಡಲು ತಜ್ಞರ ಸಮಿತಿ ಅಗತ್ಯವಿದೆ; ಡಾ.ಚಂದ್ರಶೇಖರ ಕಂಬಾರ

ಧಾರವಾಡ, ಜ.4: ಮಾಹಿತಿ ತಂತ್ರಜ್ಞಾನದ ವಿವಿಧ ಅಂಗಗಳಲ್ಲಿ ಕಾಲಕ್ಕೆ ತಕ್ಕಂತೆ ಆಗುತ್ತಿರುವ ಬದಲಾವಣೆಗಳಿಗೆ ಅನುಗುಣವಾಗಿ ರಾಜ್ಯ ಸರಕಾರಕ್ಕೆ ಸಲಹೆ ನೀಡುವ ಸಲುವಾಗಿ ಒಂದು ತಜ್ಞರ ಸಮಿತಿ ಮಾಡಬೇಕಾದ ಅಗತ್ಯವಿದೆ ಎಂದು ಸಾಹಿತ್ಯ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಕಂಬಾರ ತಿಳಿಸಿದ್ದಾರೆ.

ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷೀಯ ಮಾತುಗಳನ್ನಾಡಿದ ಅವರು, ಮಾಹಿತಿ ತಂತ್ರಜ್ಞಾನದ ಕುರಿತು ಸಲಹೆ ನೀಡುವ ಸಮಿತಿಗಳಲ್ಲಿ ಎಲ್ಲ ರೀತಿಯ ತಂತ್ರಜ್ಞರು, ತಜ್ಞರು ಹಾಗೂ ಅಧಿಕಾರಿ ವರ್ಗದವರು ಭಾಗಿಯಾಗಬೇಕು ಎಂದು ಹೇಳಿದರು.

ಒಂದು ಭಾಷೆಯು ಅಳಿವು ಹಾಗೂ ಉಳಿವು ಅದರ ಬಳಕೆ ಮೇಲೆ ನಿಂತಿರುತ್ತದೆ. ನಮ್ಮ ಸಮಾಜ ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಬದಲಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಕಂಪ್ಯೂಟರ್ ಮಯವಾಗಿಬಿಟ್ಟಿದೆ. ನಾವು ಕಂಪ್ಯೂಟರ್ ಕಾಲದಲ್ಲಿ, ಇಂಗ್ಲೀಷ್‍ನಷ್ಟು ಸರಳವಾಗಿ ಕನ್ನಡವನ್ನು ಬಳಕೆ ಮಾಡದಿದ್ದರೆ ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯ ಸರಕಾರ ತನ್ನ ಅನುದಾನದಲ್ಲಿ ರೂಪಗೊಳ್ಳುತ್ತಿರುವ ತಂತ್ರಾಂಶಗಳ ಪರವಾನಿಗೆ ಯಾವ ರೀತಿ ಇರಬೇಕು ಎಂಬ ಸ್ಪಷ್ಟವಾದ ನಿಲುವು ಹೊಂದಿರಬೇಕು. ಕನ್ನಡದ ಶಿಷ್ಟತೆಯ ವಿಚಾರವನ್ನು ಯಾರು ನೋಡಿಕೊಳ್ಳಬೇಕು ಎಂದ ಅವರು, ಇ-ಗವರ್ನರ್ಸ್ ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅದನ್ನು ನಿಯಂತ್ರಣ ಮಾಡಲಿದೆಯಾ ಎಂದು ಪ್ರಶ್ನಿಸಿದರು.

ಕೋಶಗಳ ರಚನೆ: ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಯಾವುದೇ ಇಂಗ್ಲೀಷ್ ಪಠ್ಯವಾಗಲಿ ಆಯಾ ವರ್ಷಕ್ಕೆ ಪಠ್ಯವನ್ನು ಕನ್ನಡಕ್ಕೆ ಅನುವಾದ ಮಾಡಬೇಕು. ಅದಕ್ಕಾಗಿ ಕನ್ನಡ ವಿವಿ ಮುಂದೆ ಬರಬೇಕು ಹಾಗೂ ಪ್ರಕಟಿಸಬೇಕು. ಇದು ಶಿಕ್ಷಕ ಮತ್ತು ವಿದ್ಯಾರ್ಥಿಗಳಿಬ್ಬರಿಗೂ ನೆರವಾಗುತ್ತದೆ. ವಿಜ್ಞಾನ ವಿಷಯದಲ್ಲಿ ಹೊಸ ಸಂಶೋಧನೆಗಳು, ಚಿಂತನೆಗಳು ಸತತವಾಗಿ ನಡೆಯುತ್ತಿರಬೇಕದರೆ ಓದಿ ತಿಳಿದ ಶಿಕ್ಷಕ ಮತ್ತು ವಿದ್ಯಾರ್ಥಿಗಳು ಸ್ವತಂತ್ರ, ಸೃಜನಶೀಲ ಸಂಶೋಧನೆಗಳನ್ನು ಮಾಡಲು ಅನುಕೂಲವಾಗುವಂತೆ ಕೋಶಗಳು ರಚನೆಯಾಗಬೇಕು ಎಂದು ಆಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X