Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರೀಯ ಜೀವನದಲ್ಲಿ ಸಾಮರಸ್ಯ ಅಗತ್ಯ-...

ರಾಷ್ಟ್ರೀಯ ಜೀವನದಲ್ಲಿ ಸಾಮರಸ್ಯ ಅಗತ್ಯ- ಪೇಜಾವರ ಶ್ರೀ

ರಜತ ಸಂಭ್ರಮದ ಆಳ್ವಾಸ್ ವಿರಾಸತ್‍ಗೆ ವೈಭವದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ4 Jan 2019 9:23 PM IST
share
ರಾಷ್ಟ್ರೀಯ ಜೀವನದಲ್ಲಿ ಸಾಮರಸ್ಯ ಅಗತ್ಯ- ಪೇಜಾವರ ಶ್ರೀ

ಮೂಡುಬಿದಿರೆ, ಜ.4: ಸಂಗೀತ ಭಾವೈಕ್ಯತೆಯನ್ನು ಬೆಳೆಸುವ ಕಲೆಯಾಗಿದ್ದು, ಭಾರತೀಯ ಸಂಗೀತ ಅಭಿವೃದ್ಧಿಯ ಪ್ರತೀಕವಿದ್ದಂತೆ, ಜೀವನ ಮತ್ತು ಸಂಗೀತದ ನಡುವೆ ಹೊಂದಾಣಿಕೆ ಇಲ್ಲದಿದ್ದರೆ ಗೊಂದಲ-ಕೋಲಾಹಲ ಉಂಟಾಗುತ್ತದೆ. ಸಾಮರಸ್ಯವಿದ್ದರೆ ಮಾತ್ರ ರಾಷ್ಟ್ರೀಯ ಜೀವನವೂ ಸಂಗೀತವಾಗುತ್ತದೆ, ಹಾಗಾಗಿ ರಾಷ್ಟ್ರೀಯ ಜೀವನದಲ್ಲಿ ಸಾಮರಸ್ಯ ಅತ್ಯಗತ್ಯವೆಂದು ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.

ಪುತ್ತಿಗೆ ವಿವೇಕಾನಂದನಗರದ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ವೇದಿಕೆಯಲ್ಲಿ ಶುಕ್ರವಾರ ಪ್ರಾರಂಭವಾದ 25ನೇ ವರ್ಷದ ಆಳ್ವಾಸ್ ವಿರಾಸತ್-2019 ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಯೋಗ ತತ್ವಜ್ಞಾನ, ಆಧ್ಯಾತ್ಮವೆಂಬುದು ಪೂರ್ವದಿಂದ ಪಶ್ಚಿಮಕ್ಕೆ ಹರಿದು ಹೋಗಿದೆ ಆದರೆ ಪಶ್ಚಿಮದಿಂದ ಪೂರ್ವಕ್ಕೆ ವಿಕೃತಿ ಮಾತ್ರ ಹರಿದು ಬಂದಿದೆ ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎನ್. ವಿನಯ ಹೆಗ್ಡೆ ಮಾತನಾಡಿ ಆಳ್ವಾಸ್ ವಿರಾಸತ್ ದಿನದಿಂದ ದಿನಕ್ಕೆ ಬೆಳೆಯುತ್ತಿದೆ, ನಾಡಿನೆಲ್ಲೆಡೆ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಮನ್ನಣೆಯಿದೆ ಕಲೆ-ಕ್ರೀಡೆ- ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ದೀಪನಗೊಳಿಸುವ ಏಕೈಕ ಆದರ್ಶ ಸಂಸ್ಥೆಯೆಂದರೆ ಅದು ಆಳ್ವಾಸ್ ಎಂದು ಶ್ಲಾಘಿಸಿದರು.

ಗಾಯಕ ಹರಿಹರನ್‍ಗೆ ಆಳ್ವಾಸ್ ವಿರಾಸತ್-2019 ಪ್ರಶಸ್ತಿ

ರಜತ ಸಂಭ್ರಮದ ಆಳ್ವಾಸ್ ವಿರಾಸತ್ 2019ರ ಪ್ರಶಸ್ತಿಯನ್ನು ಸುಪ್ರಸಿದ್ಧ ಗಾಯಕ ಪದ್ಮಶ್ರೀ ಹರಿಹರನ್‍ಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ಸಂಗೀತ ಎನ್ನುವುದು ನೋವು ನಿವಾರಕ ಔಷಧಿಯಿದ್ದಂತೆ. ಮನುಷ್ಯನ ಮಾನಸಿಕ ಸುಸ್ಥಿತಿಯನ್ನು ಕಾಯ್ದುಕೊಳ್ಳುವಲ್ಲಿ ಸಂಗೀತದ ಪಾತ್ರ ಮಹತ್ತರವಾದದ್ದು. ಆಧ್ಯಾತ್ಮದ ಹಾದಿಯೇ ಸಂಗೀತ ಎಂದು ಅವರು ತಿಳಿಸಿದರು.

ಆಳ್ವಾಸ್ ವಿರಾಸತ್ ರೂವಾರಿ ಡಾ. ಎಂ ಮೋಹನ್ ಆಳ್ವ ಸ್ವಾಗತಿಸಿ, ಪ್ರಸಕ್ತ ಕಾಲದಲ್ಲಿ ವಿದ್ಯೆಯನ್ನು ಕಲೆಯ ಜೊತೆಗೆ ಬೆಸೆಯುವ ಅನಿವಾರ್ಯತೆಯಿದೆ. ಸರ್ಕಾರಿ ಮಾತ್ರವಲ್ಲ ಖಾಸಗಿ ಸಂಸ್ಥೆಯವರಿಗೂ ಕಲೆಯನ್ನುಳಿಸಿ ಬೆಳೆಸುವ ಗುಣ ಮೂಡಿ ಬರಬೇಕು. ಕೇವಲ ಸರ್ಕಾರದ ಕಡೆಗೆ ಮುಖ ಮಾಡಿ ಕುಳಿತರೆ ಏನೂ ಪ್ರಯೋಜನವಿರದು ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ವಿರಾಸತ್ ರಜತಸಂಭ್ರಮದ ಅಂಗವಾಗಿ ಅಂಚೆ ಇಲಾಖೆಯು ಹೊರತಂದ ವಿಶೇಷ ಅಂಚೆ ಲಕೋಟೆಯನ್ನು ಹರಿಹರನ್ ಅನಾವರಣಗೊಳಿಸಿದರು.

ಖ್ಯಾತ ಗಾಯಕ ಹರಿಹರನ್, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್, ಕೆ. ಅಮರನಾಥ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್, ಮಂಗಳೂರು ಕೆನರಾ ಬ್ಯಾಂಕ್‍ನ ಮಹಾಪ್ರಬಂಧಕರಾದ ಎಂ.ಲಕ್ಷ್ಮೀ ನಾರಾಯಣನ್, ಹಾರ್ದಿಕ್ ಕುಮಾರ್, ಉದ್ಯಮಿಗಳಾದ ಶಶಿಧರ್ ಶೆಟ್ಟಿ, ರವೀಂದ್ರ ಆಳ್ವ, ಕೆ. ಶ್ರೀಪತಿ ಭಟ್, ಸುರೇಶ್ ಭಂಡಾರಿ, ಸುರೇಶ್ ಶೆಟ್ಟಿ ಗುರ್ಮೆ, ದೇವಿ ಪ್ರಸಾದ್ ಶೆಟ್ಟಿ, ಮುಸ್ತಾಫ್ ಎಸ್., ಉದಯ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಜಯಶ್ರೀ ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೀಪಾ ರತ್ನಾಕರ್ ಕಾರ್ಯಕ್ರಮ ನಿರೂಪಿಸಿದರು. 

ಉದ್ಘಾಟನಾ ಸಮಾರಂಭದ ಮೊದಲು ಆಳ್ವಾಸ್ ಸಾಂಸ್ಕೃತಿಕ ತಂಡದ ವಿದ್ಯಾರ್ಥಿ ಕಲಾವಿದರು ಹಾಗೂ ವಾದ್ಯ ವೃಂದದ ಕಲಾವಿದರು ಮೆರವಣಿಗೆ ಮೂಲಕ ಗಣ್ಯರನ್ನು ವೇದಿಕೆಗೆ ಬರ ಮಾಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X