Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಸ್ಲಾಂ ಜಗತ್ತಿಗೆ ಶಾಂತಿ ಸಂದೇಶ ಸಾರಿದ...

ಇಸ್ಲಾಂ ಜಗತ್ತಿಗೆ ಶಾಂತಿ ಸಂದೇಶ ಸಾರಿದ ಧರ್ಮ: ಲಕ್ಷ್ಮೀ ಶಂಕರಾಚಾರ್ಯ ಶ್ರೀ

ವಾರ್ತಾಭಾರತಿವಾರ್ತಾಭಾರತಿ4 Jan 2019 10:47 PM IST
share
ಇಸ್ಲಾಂ ಜಗತ್ತಿಗೆ ಶಾಂತಿ ಸಂದೇಶ ಸಾರಿದ ಧರ್ಮ: ಲಕ್ಷ್ಮೀ ಶಂಕರಾಚಾರ್ಯ ಶ್ರೀ

ಮಂಗಳೂರು, ಜ.4: ಇಸ್ಲಾಂ ಜಗತ್ತಿಗೆ ಶಾಂತಿ, ಮಾನವೀಯತೆ ವ್ಯವಹಾರಿಕ ಅಹಿಂಸೆಯ ಸಂದೇಶವನ್ನು ಜಗತ್ತಿಗೆ ಸಾರಿದ ಧರ್ಮವಾಗಿದೆ ಎಂದು ಉತ್ತರಪ್ರದೇಶದ ಕಾನ್‌ಪುರದ ಚಿಂತಕ, ವಾಗ್ಮಿ ಲಕ್ಷ್ಮೀ ಶಂಕರಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ನಗರದ ಪುರಭವನದಲ್ಲಿ ಹೈಲ್ಯಾಂಡ್ ಇಸ್ಲಾಮಿಕ್ ಫೋರಮ್(ಎಚ್‌ಐಎಫ್)ನಿಂದ ಮುಹಮ್ಮದ್ ಪೈಗಂಬರ್ ಸಂದೇಶ ಕಾರ್ಯಕ್ರಮದಲ್ಲಿ ‘ಜಿಹಾದ್ ಮತ್ತು ಇಸ್ಲಾಮ್’ ವಿಷಯದಲ್ಲಿ ಉಪನ್ಯಾಸ ನೀಡಿದ ಸ್ವಾಮೀಜಿ, ಇಸ್ಲಾಂ ವ್ಯಕ್ತಿಯ ಕಾಯ, ವಾಚ, ಮನಸಾ ಹಿಂಸೆಗೆ ಬೆಂಬಲ ನೀಡುವ ಧರ್ಮವಲ್ಲ. ಆ ಕಾರಣದಿಂದ ಇಸ್ಲಾಂ ಎಂದರೆ ಶಾಂತಿಯ ಪ್ರತಿಪಾದನೆಯ ಧರ್ಮ ಎನ್ನುತ್ತೇವೆ. ಅನ್ಯಾಯ, ಅಧರ್ಮದ ವಿರುದ್ಧ ಪ್ರವಾದಿ ಮುಹಮ್ಮದ್‌ರು ಸಾರಿದ ಧರ್ಮ ಯುದ್ಧ ಜಿಹಾದ್. ಅದನ್ನು ಬೇರೆ ರೀತಿ ಅರ್ಥೈಸಿಕೊಳ್ಳುವುದು ಸರಿಯಲ್ಲ ಎಂದು ತಿಳಿಸಿದರು.

ಪೋಷಕರು ಮಕ್ಕಳಿಗೆ ಸಮಯ ಮೀಸಲಿಡಲಿ: ಆಧುನಿಕ ಯುಗದಲ್ಲಿ ಪೋಷಕರು ಮತ್ತು ಮಕ್ಕಳ ನಡುವೆ ಅನ್ಯೋನ್ಯ ಸಂಬಂಧ ಹೆಚ್ಚಬೇಕು. ಪೋಷಕರು ತಮ್ಮ ಒತ್ತಡದ ಬದುಕಿನ ನಡುವೆ ಮಕ್ಕಳಿಗಾಗಿ ಸಮಯವನ್ನು ಮೀಸಲಿಡಬೇಕು ಎಂದು ಇಸ್ಲಾಮಿಕ್ ರಿಸರ್ಚ್ ಸೆಂಟರ್‌ನ ಅಧ್ಯಕ್ಷ ಅಡ್ವೋಕೇಟ್ ಫೈಝ್ ಸೈಯದ್ ಸಲಹೆ ನೀಡಿದರು.

‘ಆಧುನಿಕ ಯುಗದಲ್ಲಿ ಪೋಷಕರ ಪಾತ್ರ’ ವಿಷಯದಲ್ಲಿ ಉಪನ್ಯಾಸ ನೀಡಿ ಅವರು, ಕಳೆದ 10 ವರ್ಷಗಳಲ್ಲಿ ಜಗತ್ತು ತುಂಬಾ ವೇಗವಾಗಿ ಬದಲಾಗುತ್ತಿದೆ. ಆಧುನಿಕ ಯುಗದಲ್ಲಿ ಕಾಲಮಾನಕ್ಕೆ ತಕ್ಕಂತೆ ಜನರು ಬದಲಾಗುತ್ತಿದ್ದಾರೆ. ಇದು ಒಳ್ಳೆಯ ವಿಷಯವಾದರೂ ಪೋಷಕರು ಮಕ್ಕಳ ಪಾಲನೆಯಿಂದ ಹೊರಗುಳಿಯುವಂತಿಲ್ಲ. ಒತ್ತಡದ ಜೀವನದಲ್ಲಿ ಮಕ್ಕಳ ಇಷ್ಟದ ವಿಷಯಗಳ ಬಗ್ಗೆ ಚರ್ಚಿಸಿ ಎಂದು ಹೇಳಿದರು.

ತಂದೆ-ತಾಯಿ ಇಬ್ಬರೂ ಉದ್ಯೋಗಸ್ಥರಿರುತ್ತಾರೆ. ಕಚೇರಿಗಳ ಸಮಸ್ಯೆಗಳನ್ನು ಮನೆವರೆಗೂ ತರುತ್ತಾರೆ. ಸದಾ ಮೊಬೈಲ್‌ಗಳಲ್ಲಿಯೇ ಪೋಷಕರು ಮುಳುಗಿರುತ್ತಾರೆ. ಹೀಗಾದಲ್ಲಿ ಮಕ್ಕಳು ತಮ್ಮ ಪೋಷಕರಿಂದ ಪ್ರೀತಿ, ವಿಶ್ವಾಸವನ್ನು ಪಡೆಯುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಇತ್ತೀಚೆಗೆ ಕ್ರೀಡಾ ಜಗತ್ತು ಹೆಚ್ಚು ಸುದ್ದಿಯಲ್ಲಿದೆ. ಶಾಲಾ ಕ್ರೀಡಾಕೂಟದಲ್ಲಿ ಬೇರೆ ಮಕ್ಕಳು ಪ್ರಶಸ್ತಿ, ಮೆಡಲ್ ಗಳನ್ನು ತಂದರೆ ತಮ್ಮ ಮಕ್ಕಳು ಪ್ರಶಸ್ತಿ ತರುತ್ತಿಲ್ಲ ಎನ್ನುವ ಪೋಷಕರು ಮಕ್ಕಳಿಗೆಂದು ಎಷ್ಟು ಸಮಯ ನೀಡುತ್ತಿದ್ದಾರೆ. ಮಕ್ಕಳಿಗೆ ಶಿಕ್ಷಣದಲ್ಲಿ ಎಷ್ಟರ ಪ್ರಮಾಣದಲ್ಲಿ ಸಹಕರಿಸುತ್ತಾರೆ ಎನ್ನುವುದನ್ನು ಪೋಷಕರು ತಮ್ಮನ್ನೇ ಪ್ರಶ್ನಿಸಿಕೊಳ್ಳಬೇಕಾದ ಸಂದರ್ಭ ಎದುರಾಗಿದೆ ಎಂದು ಮಾರ್ಮಿಕವಾಗಿ ನುಡಿದರು.

ಪೋಷಕರನ್ನು ಅನುಸರಿಸಿ ಮಕ್ಕಳೂ ಮೊಬೈಲ್ ಗಳನ್ನು ಬಳಸುತ್ತಿದ್ದಾರೆ. ಪರಿಣಾಮ ಸ್ಮಾರ್ಟ್ ಫೋನ್‌ಗಳ ಬಳಕೆಯಿಂದ ಸೃಜನಶೀಲತೆ ಕಳೆದು ಕೊಳ್ಳುತ್ತಿದ್ದಾರೆ. ಮೊಬೈಲ್, ಗ್ಯಾಜೆಟ್, ಅಂತರ್ಜಾಲಕ್ಕೆ ಬಲಿಯಾಗಿ ಗೀಳನ್ನು ಅಂಟಿಸಿಕೊಳ್ಳುತ್ತಿದ್ದಾರೆ. ಇದು ಮಕ್ಕಳ ಭವಿಷ್ಯದಲ್ಲಿ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೈಲ್ಯಾಂಡ್ ಇಸ್ಲಾಮಿಕ್ ಫೋರಮ್ ಅಧ್ಯಕ್ಷ ನಾಜಿಮ್ ಎಸ್.ಎಸ್. ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಾರಂಭದ ಸಂಚಾಲಕ, ಹೈಲ್ಯಾಂಡ್ ಇಸ್ಲಾಮಿಕ್ ಫೋರಮ್‌ನ ಸಾಜಿದ್ ಎ.ಕೆ. ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ಬಾಷಿತ್ ಕಿರಾಅತ್ ಪಠಿಸಿದರು. ಮೊಕ್ಸಿತ್ ಸ್ವಾಗತಿಸಿದರು. ಬಿಲಾಲ್ ರೈಫ್ ಕಾರ್ಯಕ್ರಮ ನಿರೂಪಿಸಿದರು. ಮಿಶಾಲ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X