Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ರೈಲ್ವೆ ನಿಲ್ದಾಣದಲ್ಲಿ ‘ಫ್ರೆಶ್...

ಉಡುಪಿ ರೈಲ್ವೆ ನಿಲ್ದಾಣದಲ್ಲಿ ‘ಫ್ರೆಶ್ ಅಪ್’ ವಿಶ್ರಾಂತಿ ಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Jan 2019 10:50 PM IST
share
ಉಡುಪಿ ರೈಲ್ವೆ ನಿಲ್ದಾಣದಲ್ಲಿ ‘ಫ್ರೆಶ್ ಅಪ್’ ವಿಶ್ರಾಂತಿ ಕೇಂದ್ರ ಉದ್ಘಾಟನೆ

ಉಡುಪಿ, ಜ.4: ರೈಲು ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚೈನ್ನೈ ಮೂಲದ ಫ್ರೆಶ್ ಮೈಂಡ್ಸ್ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಕೊಂಕಣ ರೈಲ್ವೆ ಹಾಗೂ ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊ ರೇಶನ್(ಐಆರ್‌ಸಿಟಿಸಿ)ನ ಸಹಭಾಗಿತ್ವದೊಂದಿಗೆ ಇಂದ್ರಾಳಿಯ ರೈಲ್ವೆ ನಿಲ್ದಾಣ ದಲ್ಲಿ ಆರಂಭಿಸಿರುವ ‘ಫ್ರೆಶ್ ಅಪ್’ ವಿಶ್ರಾಂತಿ ಕೇಂದ್ರದ ಉದ್ಘಾಟನೆ ಶುಕ್ರವಾರ ನಡೆಯಿತು.

ಕೇಂದ್ರವನ್ನು ಉದ್ಘಾಟಿಸಿದ ಕಾರವಾರ ಕೊಂಕಣ ರೈಲ್ವೆ ಪ್ರಾದೇಶಿಕ ರೈಲ್ವೆ ಮೆನೇಜರ್ ಮುಹಮ್ಮದ್ ಆಸೀಮ್ ಸುಲೈಮಾನ್ ಮಾತನಾಡಿ, ಫ್ರೆಶ್ ಅಪ್ ಕೊಂಕಣ ರೈಲ್ವೆ ಪ್ರಯಾಣಿಕರಿಗೆ ಐಷಾರಾಮಿ ವಾಸ್ತವ್ಯದೊಂದಿಗೆ ಸುಸಜ್ಜಿತವಾದ ವಿಶ್ರಾಂತಿ ಕೊಠಡಿಗಳನ್ನು ಒದಗಿಸುತ್ತಿದೆ. ರೈಲ್ವೆ ಪ್ರಯಾಣಿಕರು ವೆಬ್‌ಸೈಟ್ ಮೂಲಕ ಕೊಠಡಿಯನ್ನು ಕಾಯ್ದಿರಿಸಬಹುದಾಗಿದೆ ಎಂದು ತಿಳಿಸಿದರು.

24 ಗಂಟೆಗಳ ಕಾಲ ಸೇವೆ ನೀಡುವ ಈ ಕೇಂದ್ರವು ರಾತ್ರಿ ವೇಳೆ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಹೆಚ್ಚು ಅನುಕೂಲಕರವಾಗುತ್ತದೆ. ಈ ಸೇವೆಯು ಗಂಟೆಯ ಆಧಾರದಲ್ಲಿರುವುದರಿಂದ ಪ್ರಯಾಣಿಕರಿಗೆ ತುಂಬಾ ಸಹಕಾರಿ ಯಾಗಲಿದೆ. ಕನಿಷ್ಠ ಒಂದು ಗಂಟೆಗೆ 149ರೂ. ಶುಲ್ಕ ವಿಧಿಸಲಾಗುತ್ತದೆ. ಇಲ್ಲಿ ನಾಲ್ಕು ಸಿಂಗಲ್ ಬೆಡ್ ಹಾಗೂ ಎರಡು ಡಬಲ್ ಬೆಡ್‌ರೂಮ್‌ಗಳಿವೆ. ಹೆಚ್ಚು ಸುರಕ್ಷಿತವಾಗಿರಿಸುವ ನಿಟ್ಟಿನಲ್ಲಿ ಇಲ್ಲಿ ಐದು ಸಿಸಿ ಕ್ಯಾಮೆರಾಗಳನ್ನು ಅಳವಡಿಸ ಲಾಗಿದೆ ಎಂದರು.

ಮುಂಬೈ ಐಆರ್‌ಸಿಟಿಸಿಯ ಹೆಚ್ಚುವರಿ ಮಹಾಪ್ರಬಂಧಕ ರಾಜೇಶ್ ರಾಣ ಮಾತನಾಡಿ, ಕೊಂಕಣ ರೈಲ್ವೆಯ ಪ್ರಥಮ ಕೇಂದ್ರ ಇದಾಗಿದ್ದು, ಮುಂದೆ ಮಡ ಗಾಂವ್ ಹಾಗೂ ತಿವಿಮ್ ರೈಲ್ವೆ ನಿಲ್ದಾಣದಲ್ಲೂ ಈ ಕೇಂದ್ರವನ್ನು ಆರಂಭಿಸ ಲಾಗುವುದು. ಈ ಎರಡು ಕೇಂದ್ರಗಳಿಗೆ ಈಗಾಗಲೇ ಟೆಂಡರ್ ಕರೆಯಲಾ ಗಿದ್ದು, ಫೆಬ್ರವರಿ ತಿಂಗಳಲ್ಲಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದರು.

ಫ್ರೆಶ್ ಅಪ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿನಿಲ್ ರೆಡ್ಡಿ ಮಾತ ನಾಡಿ, ಪ್ರಸ್ತುತ ಫ್ರೆಶ್ ಅಪ್ ಕೇಂದ್ರವು ಹೈದರಾಬಾದಿನ ಕಚಿಗುಡ ರೈಲ್ವೆ ನಿಲ್ದಾಣ ಹಾಗೂ ಧಾರ್ಮಿಕ ಕ್ಷೇತ್ರಗಳಾದ ತಿರುಪತಿ, ತಿರುವಣ್ಣಮಲೈ, ಗುರುವಾಯೂರು ಮತ್ತು ಹೈದರಾಬಾದ್(ಗಚಿಬೌಳಿ) ಮೆಟ್ರೋ ಸಿಟಿಯಲ್ಲಿ ಕಾರ್ಯಾಚರಿಸುತ್ತಿದೆ. ಉಡುಪಿಯಲ್ಲಿ ಆರಂಭವಾಗಿರುವ ಕೇಂದ್ರ ಆರನೆಯದ್ದಾಗಿದೆ. ಶೀಘ್ರದಲ್ಲೇ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಮತ್ತು ಇನ್ನಷ್ಟು ರೈಲ್ವೆ ನಿಲ್ದಾಣಗಳಲ್ಲಿ ಕೇಂದ್ರ ವನ್ನು ಆರಂಭಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಕೊಂಕಣ ರೈಲ್ವೆ ಪ್ರಾದೇಶಿಕ ಟ್ರಾಫಿಕ್ ಮೆನೇಜರ್ ವಿನಯ್ ಕುಮಾರ್, ಸಾರ್ವಜನಿಕ ಸಂಪರ್ಕ ಮೆನೇಜರ್ ಕೆ.ಸುಧಾ ಕೃಷ್ಣಮೂರ್ತಿ, ಬಿಂದು ರಾಮವತ್, ಸುಧೀಶ್ ರೆಡ್ಡಿ, ಕುನಾಲ್ ವಾಕಡೆ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X