Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಣಿಯ ನೀಲನಕ್ಷೆಯಿಲ್ಲದೆ ಸಮಸ್ಯೆಯಾಗಿದೆ:...

ಗಣಿಯ ನೀಲನಕ್ಷೆಯಿಲ್ಲದೆ ಸಮಸ್ಯೆಯಾಗಿದೆ: ಸರಕಾರ

ಮೇಘಾಲಯ ಗಣಿ ದುರಂತ

ವಾರ್ತಾಭಾರತಿವಾರ್ತಾಭಾರತಿ4 Jan 2019 11:35 PM IST
share
ಗಣಿಯ ನೀಲನಕ್ಷೆಯಿಲ್ಲದೆ ಸಮಸ್ಯೆಯಾಗಿದೆ: ಸರಕಾರ

ಹೊಸದಿಲ್ಲಿ, ಜ.4: ಡಿಸೆಂಬರ್ 13ರಿಂದ ಮೇಘಾಲಯದ ಗಣಿಯಲ್ಲಿ ಸಿಲುಕಿಕೊಂಡಿರುವ 15 ಕಾರ್ಮಿಕರ ರಕ್ಷಣೆ ಕಾರ್ಯಾಚರಣೆಗೆ ಗಣಿಯ ನೀಲನಕ್ಷೆ ಇಲ್ಲದಿರುವುದು ಬಹುದೊಡ್ಡ ತೊಡಕಾಗಿದೆ ಎಂದು ಸರಕಾರದ ಪ್ರತಿನಿಧಿಯಾಗಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಮೇಘಾಲಯದ ಈಸ್ಟ್ ಜೈಂಟಿಯಾ ಹಿಲ್ಸ್ ಜಿಲ್ಲೆಯಲ್ಲಿರುವ 355 ಅಡಿ ಆಳದ ಈ ಗಣಿಯು ಗುಡ್ಡದ ಮೇಲಿದ್ದು ಮರಗಳಿಂದ ಆವೃತ್ತವಾಗಿದೆ. ಸಮೀಪದಲ್ಲಿರುವ ಲೀಟೆನ್ ನದಿಯಲ್ಲಿ ನೆರೆನೀರು ಉಕ್ಕಿ ಹರಿದ ಕಾರಣ ಗಣಿಯೊಳಗೆ ನೀರು ನುಗ್ಗಿದ್ದು ಅದರೊಳಗೆ 15 ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದಾರೆ. ಇಲ್ಲಿರುವುದು ರ್ಯಾಟ್‌ಹೋಲ್ ಮೈನ್(ಇಲಿ ರಂಧ್ರ ಗಣಿ). ರ್ಯಾಟ್‌ಹೋಲ್ ಮೈನ್ ಎಂದರೆ ಇಲಿಗಳು ಕೊರೆಯುವಂತಹ ಬಿಲಗಳಿಂದ ಮಾಡಿರುವ ಅಕ್ರಮ ಗಣಿ. ಹೆಚ್ಚಾಗಿ ಈಶಾನ್ಯ ಭಾರತದಲ್ಲಿ, ಅದರಲ್ಲೂ ವಿಶೇಷವಾಗಿ ಮೇಘಾಲಯದಲ್ಲಿ ಸ್ಥಳೀಯ ಕುಟುಂಬದವರು ಅಥವಾ ಒಂದು ಸಮುದಾಯದವರು ಸೇರಿಕೊಂಡು ನೆಲದಲ್ಲಿ ಇಲಿಗಳಂತೆ ರಂಧ್ರ ಕೊರೆದು ನೆಲದೊಳಗೆ ಸಿಗುವ ಸಂಪನ್ಮೂಲಗಳನ್ನು ಬುಟ್ಟಿ ಅಥವಾ ಚೀಲದಲ್ಲಿ ಸಂಗ್ರಹಿಸಿ ತಂದು ಮಾರುತ್ತಾರೆ.

ಇವು ಅತ್ಯಂತ ದೂರದ ಮಟ್ಟಕ್ಕೆ ತಲುಪುತ್ತದೆ. ಈ ಗಣಿಗಳಿಗೆ ಪರವಾನಿಗೆ ಪಡೆಯುವುದಿಲ್ಲ ಮತ್ತು ಯಾವುದೇ ನೀಲನಕ್ಷೆ ಇರುವುದಿಲ್ಲ. ಹೀಗೆ ಕೊರೆದ ಸುರಂಗಗಳು ಸಾಮಾನ್ಯವಾಗಿ ನಾಲ್ಕು ಅಡಿ ಎತ್ತರವಿರುತ್ತದೆ. ಸಮತಲವಾದ ಈ ಸುರಂಗದೊಳಗೆ ಒಮ್ಮೆಗೆ ಒಬ್ಬ ವ್ಯಕ್ತಿ ಮಾತ್ರ ಪ್ರವೇಶಿಸಲು ಸಾಧ್ಯವಾಗುವ ಕಾರಣ ಇವನ್ನು ಇಲಿರಂಧ್ರ ಗಣಿ ಎನ್ನಲಾಗುತ್ತದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(ಎನ್‌ಡಿಆರ್‌ಎಫ್)ದ ಹಲವು ಸದಸ್ಯರು ಗಣಿಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಣಿಯಲ್ಲಿ ನೀರು ತುಂಬಿಕೊಂಡಿರುವ ಕಾರಣ ಸೇನೆಯ ಬದಲು ನೌಕಾಪಡೆಯ ಸಿಬ್ಬಂದಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಸರಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಎನ್‌ಡಿಆರ್‌ಎಫ್‌ನ 72 ಸದಸ್ಯರಿದ್ದೂ ಯಾವುದೇ ಫಲವಿಲ್ಲ. ಸೇನಾಪಡೆಯ ನೆರವನ್ನು ಯಾಕೆ ಪಡೆಯುತ್ತಿಲ್ಲ. ನೀರೆತ್ತುವ ಪಂಪ್‌ಗಳನ್ನು ಥಾಯ್ಲಂಡಿನ ಗುಹೆಯಲ್ಲಿ ಇತ್ತೀಚೆಗೆ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಬಳಸಲಾಗಿದೆ ಎಂದು ಅರ್ಜಿದಾರರು ಹೇಳುತ್ತಿದ್ದಾರೆ. ಅಂತಹ ಪಂಪ್‌ಗಳನ್ನು ಇಲ್ಲಿ ಯಾಕೆ ಬಳಸುತ್ತಿಲ್ಲ ಎಂದು ಸುಪ್ರೀಂ ಪ್ರಶ್ನಿಸಿದೆ.

2018ರ ಜೂನ್‌ನಲ್ಲಿ ಥಾಯ್ಲಂಡಿನ ಗುಹೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ ಫುಟ್‌ಬಾಲ್ ತಂಡದ ಬಾಲಕರ ರಕ್ಷಣೆಗೆ ನಡೆದ ಕಾರ್ಯಾಚರಣೆಯಲ್ಲಿ ಕಿರ್ಲೋಸ್ಕರ್ ಸಂಸ್ಥೆ ಅಧಿಕ ಕ್ಷಮತೆಯ ನೀರೆತ್ತುವ ಪಂಪ್‌ಗಳನ್ನು ಕಳಿಸಿಕೊಟ್ಟಿದೆ. ಆ ಪಂಪ್‌ಗಳನ್ನು ಇಲ್ಲಿ ಯಾಕೆ ಬಳಸಬಾರದು ಎಂದು ಅರ್ಜಿ ದಾಖಲಿಸಿರುವ ಆದಿತ್ಯ ಎನ್. ಪ್ರಸಾದ್ ಪ್ರಶ್ನಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X