Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಾತ್ಮ ಗಾಂಧಿಯನ್ನು ನೆನೆಯುವ...

ಮಹಾತ್ಮ ಗಾಂಧಿಯನ್ನು ನೆನೆಯುವ ಕಾರ್ಯಕ್ರಮಗಳು ನಡೆಯಬೇಕು: ಎಸ್.ಎಂ.ಕೃಷ್ಣ

ವಾರ್ತಾಭಾರತಿವಾರ್ತಾಭಾರತಿ5 Jan 2019 7:04 PM IST
share
ಮಹಾತ್ಮ ಗಾಂಧಿಯನ್ನು ನೆನೆಯುವ ಕಾರ್ಯಕ್ರಮಗಳು ನಡೆಯಬೇಕು: ಎಸ್.ಎಂ.ಕೃಷ್ಣ

ಬೆಂಗಳೂರು, ಜ.5: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ನೆನಯುವ ಕಾರ್ಯಕ್ರಮಗಳು ಎಲ್ಲೆಡೆ ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿದರು.

ಶನಿವಾರ ನಗರದ ಕುಮಾರಕೃಪಾದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಿದ್ದ ಗಾಂಧಿ-150, ಕಲಾ ಪ್ರದರ್ಶನ ಮತ್ತು ಚಿತ್ರಕಲಾ ಸನ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿರುವ ಚಿತ್ರಸಂತೆ ರವಿವಾರ(ಜ.6) ಜರುಗಲಿದೆ. ಈ ಸಂತೆಯಲ್ಲಿ ಗಾಂಧಿ ಕಲಾಭಿಮಾನ ಅನಾವರಣಗೊಳ್ಳಲಿದೆ ಎಂದು ತಿಳಿಸಿದರು.

ಬಾಲ್ಯದಲ್ಲೇ ಮಹಾತ್ಮ ಗಾಂಧಿ ಅವರನ್ನು ನೋಡುವ ವಿಶೇಷ ಭಾಗ್ಯ ದೊರೆಯಿತು. ಒಮ್ಮೆ 1935ರಲ್ಲಿ ಅವರು ತಮ್ಮ ಊರಿನ, ಸಾರ್ವಜನಿಕ ಶಾಲೆಗೆ ಭೇಟಿ ನೀಡಿದ್ದರು. ಅಲ್ಲಿ ಶಿಕ್ಷಣ ಪಡೆಯುತ್ತಿದ್ದ, ದಲಿತ ವಿದ್ಯಾರ್ಥಿಗಳಿಬ್ಬರನ್ನು ಗುರುತಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದರು ಎಂದು ಅವರು ನೆನದರು. 1946ರಲ್ಲಿ ದೆಹಲಿಯಲ್ಲಿ ಮಹಾತ್ಮ ಗಾಂಧಿ ಅವರ ಉಪದೇಶ ಕೇಳಿದ್ದೇನೆ ಎಂದ ಅವರು, ಗಾಂಧಿ ಅವರು ಕಲಾಭಿಮಾನಿ. ಹೀಗಾಗಿ, ಚಿತ್ರಕಲೆಯು ಪ್ರಪಂಚದಾದ್ಯಂತ ಬೆಳೆಯಬೇಕು. ಜೊತೆಗೆ, ಪ್ರಶಸ್ತಿ ಪುರಸ್ಕೃತರು ಚಿತ್ರಕಲೆಗೆ ವಿಶೇಷ ಕೊಡುಗೆ ನೀಡಿದ್ದಾರೆಂದು ಕೃಷ್ಣ ಮೆಚ್ಚುಗೆ ವ್ಯಕ್ತಪಡಿಸಿದರು.

ನಟ ರಮೇಶ್ ಅರವಿಂದ್ ಮಾತನಾಡಿ, ಮಹಾತ್ಮ ಗಾಂಧಿಯವರ ವಿಚಾರಧಾರೆ ಇಂದಿನ ಯುವ ಪೀಳಿಗೆಗೆ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಹೊಸ ಮತ್ತು ಸಾಮಾಜಿಕ ಜಾಲತಾಣ ಮಾಧ್ಯಮಗಳನ್ನು ಬಳಸಿಕೊಂಡು, ಆಧುನಿಕವಾಗಿ ಅವರ ವಿಚಾರಗಳನ್ನು ತಲುಪಿಸಬೇಕು ಎಂದು ಸಲಹೆ ಮಾಡಿದರು.

ನೊಬೆಲ್ ಪ್ರಶಸ್ತಿ: ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್. ಶಂಕರ್ ಮಾತನಾಡಿ, ಮಹಾತ್ಮ ಗಾಂಧಿ ಅವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕಿತ್ತು. ಆದರೆ, ಯಾವುದೋ ಕಾರಣಗಳಿಗೆ ತಪ್ಪಿಹೋಗಿದೆ. ಗಾಂಧಿ ಅವರು ಮರಣ ಹೊಂದಿದ ದಿನದಂದು, ವಿಶ್ವಸಂಸ್ಥೆ ಸೇರಿದಂತೆ ಅನೇಕ ರಾಷ್ಟ್ರಗಳು ಭಾವನಾತ್ಮಕವಾಗಿ ಅವರಿಗೆ ಗೌರವ ನೀಡಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಸ್ತುತ ಸಾಲಿನ ಎಚ್.ಕೆ.ಕೇಜರಿವಾಲ್ ಪ್ರಶಸ್ತಿ-ಹಿರಿಯ ಚಿತ್ರಕಲಾವಿದ ಜೆ.ಎಂ.ಎಸ್.ಮಣಿ, ಡಿ.ದೇವರಾಜ ಅರಸು ಪ್ರಶಸ್ತಿ-ಜೆಸು ರಾವಲ್ ಹಾಗೂ ಎಂ.ಆರ್ಯ ಮೂರ್ತಿ ಪ್ರಶಸ್ತಿ ಅನ್ನು ನೀಲಾ ಪಂಚ್ ಅವರಿಗೆ ಪ್ರದಾನ ಮಾಡಲಾಯಿತು. ಚಿತ್ರಕಲಾ ಪರಿಷತ್ತಿನ ಉಪಾಧ್ಯಕ್ಷ ಹರೀಶ್ ಜೆ.ಪದ್ಮನಾಭ, ಪ್ರಧಾನ ಕಾರ್ಯದರ್ಶಿ ಪ್ರೊ.ಎಂ.ಜೆ.ಕಮಲಾಕ್ಷಿ ಸೇರಿದಂತೆ ಪ್ರಮುಖರಿದ್ದರು.

ಐಟಿ ದಾಳಿಯ ನೇತೃತ್ವ ವಹಿಸಿದ್ದೆ

ಕನ್ನಡ ಚಿತ್ರರಂಗದ ನಟ-ನಿರ್ಮಾಪಕರ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಹಲವು ವರ್ಷಗಳ ಹಿಂದೆ ನಾನು ಆರ್ಥಿಕ ಇಲಾಖೆಯ ಸಹಾಯಕ ಸಚಿವನಾಗಿದ್ದೆ. ಆ ಸಂದರ್ಭದಲ್ಲಿ ಇಂತಹ ದಾಳಿಗಳ ನೇತೃತ್ವ ವಹಿಸಿದ್ದೆ ಎಂದು ನೆನದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X