Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ನೂರು ವರ್ಷದ ಸಾಧನೆಗೆ...

'ನೂರು ವರ್ಷದ ಸಾಧನೆಗೆ ತೃಪ್ತಿಪಟ್ಟುಕೊಳ್ಳದೆ ಸ್ಥಾಪಕರ ಕನಸನ್ನು ನನಸಾಗಿಲು ಪಣ ತೊಡಬೇಕು'

ಅಂಜುಮನ್ ಶತಮಾನೋತ್ಸವ ಸಮಾರಂಭದಲ್ಲಿ ಮೌಲಾನ ವಸ್ತಾನ್ವಿ

ವಾರ್ತಾಭಾರತಿವಾರ್ತಾಭಾರತಿ5 Jan 2019 8:52 PM IST
share
ನೂರು ವರ್ಷದ ಸಾಧನೆಗೆ ತೃಪ್ತಿಪಟ್ಟುಕೊಳ್ಳದೆ ಸ್ಥಾಪಕರ ಕನಸನ್ನು ನನಸಾಗಿಲು ಪಣ ತೊಡಬೇಕು

ಭಟ್ಕಳ, ಜ. 5: ಅಂಜುಮನ್ ಸಂಸ್ಥೆಯ ನೂರು ವರ್ಷಗಳ ಸಾಧನೆ ತೃಪ್ತಿ ತಂದರೂ ಇಷ್ಟಕ್ಕೆ ಸುಮ್ಮನೆ ಕೂಡದೇ ಸಂಸ್ಥಾಪಕರು ಕಂಡ ಕನಸುಗಳನ್ನು ನನಸಾಗಿವಲ್ಲಿ ಸಂಸ್ಥೆಯ ಮುಖಂಡರು ಪಣ ತೊಡಬೇಕು ಎಂದು ಜಾಮಿಯಾ ಇಸ್ಲಾಮಿಯಾ ಇಶಾತುಲ್ ಉಲೂಮ್ ಅಧ್ಯಕ್ಷ ಹಝರತ್ ಮೌಲಾನ ಗುಲಾಂ ಮುಹಮ್ಮದ್ ವಸ್ತಾನ್ವಿ ಕರೆ ನೀಡಿದರು.

ಅವರು ಇಲ್ಲಿನ ಅಂಜುಮನಾಬಾದ್ ಕ್ಯಾಂಪಸ್ ನಲ್ಲಿ ಏರ್ಪಡಿಸಿದ್ದ ಅಂಜುಮನ್ ಶತಮಾನೋತ್ಸವ ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು.

ಸಮುದಾಯಗಳ ಅಭಿವೃದ್ಧಿಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖವಾಗಿದ್ದು ಅಂಜುಮನ್ ಸಂಸ್ಥೆ ಇಲ್ಲಿನ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ್ಷ ಹಾಗೂ ಪರೋಕ್ಷವಾಗಿ ಕಾರಣವಾಗಿದೆ. ಕೇವಲ ಪದವಿ ಕಾಲೇಜುಗಳಿಗೆ ಸೀಮಿತವಾಗದೆ ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯ ಗುರಿಯೊಂದಿಗೆ ಸಂಸ್ಥೆಯ ಮುಂದಡಿ ಇಡಬೇಕೆಂದು ಅವರು ಕರೆ ನೀಡಿದರು. ಸಮಾಜದ ಆರ್ಥಿಕತೆಯನ್ನು ಗಟ್ಟಿಗೊಳಿಸುವಲ್ಲಿ ಅಂಜುಮನ್ ಮಹತ್ತರ ಪಾತ್ರವಹಿಸಿದೆ ಎಂದ ಅವರು, ಅಂಜುಮನ್ ಶಿಕ್ಷಣ ಸಂಸ್ಥೆಗಳಿಂದ ಪಾರಂಗತ ಸಾವಿರಾರು ಮಂದಿ ದೇಶವಿದೇಶದಲ್ಲಿ ತಮ್ಮ ಬದುಕನ್ನು ರೂಪಿಸಿಕೊಂಡಿದ್ದಾರೆ ಎಂದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ, ನೂರು ವರ್ಷಗಳ ಹಿಂದೆ ಮುಸ್ಲಿಮ್ ಅಲ್ಪಸಂಖ್ಯಾತರಲ್ಲಿ ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಬೇಕು ಎಂಬ ಕಲ್ಪನೆ ಮೂಡಿದ್ದೇ ಒಂದು ಪವಾಡದಂತಿದ್ದು ಇಂದಿನ ದಿನಗಳಲ್ಲಿ ಅದು ಹೆಮ್ಮರವಾಗಿ ಬೆಳೆದು ನಿಂತಿದೆ. ಶಿಕ್ಷಣ ಬಗ್ಗೆ ಯೋಚಿಸುವುದೇ ಒಂದು ವಿಷಯವಾಗಿತ್ತು, ಮಹಿಳೆಯರ ಶಿಕ್ಷಣದ ಬಗ್ಗೆಯೂ ಅವರು ಅಂದು ಚಿಂತಿಸಿದ್ದು ನಿಜಕ್ಕೂ ಅವರನ್ನು ನಾವು ಸ್ಮರಿಸಲೇಬೇಕು. ಉತ್ತರ ಕನ್ನಡ ಜಿಲ್ಲೆಯಲ್ಲೇ ಅತ್ಯಧಿಕ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ ಕೀರ್ತಿ ಅಂಜುಮನ್ ಸಂಸ್ಥೆಗೆ ಸಲ್ಲುತ್ತದೆ ಎಂದರು.

ಎಚ್.ಆರ್.ಡಿ ಇಲಾಖೆಯ ವರದಿಯಂತೆ ಮುಸ್ಲಿಮರಲ್ಲಿ ಶಿಕ್ಷಣದ ರೇಖೆಯ ಅತಿಕಡಿಮೆಯಾಗಿದ್ದು ಇತ್ತೀಚೆಗೆ ಅದು ಬದಲಾವಣೆಯಾಗುತ್ತಿದೆ. ಕಳೆದ ಇಪ್ಪತ್ತು ವರ್ಷಗಳಲ್ಲಿ ಬಹಳಷ್ಟು ಅಭಿವೃದ್ಧಿಯಾಗಿದೆ. ಇನ್ನು ಬಹಳಷ್ಟು ಅಭಿಯಾಗಬೇಕಿದೆ. ತಮ್ಮ ಮಕ್ಕಳ ಶಿಕ್ಷಣದ ಕಡೆಗೆ ಗಮನ ಹರಿಸುವುದು ಪ್ರತಿಯೊಬ್ಬ ಪಾಲಕರ ಕರ್ತವ್ಯವಾಗಿದ್ದು ಮಹಿಳಾ ಶಿಕ್ಷಣಕ್ಕೂ ಆಧ್ಯತೆ ನೀಡಬೇಕು ಎಂದರು.

ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಮಾತನಾಡಿ, ವಿದ್ಯಾರ್ಥಿ ಸಮುದಾಯ ಬಲಿಷ್ಠವಾದಾಗ ದೇಶ ಬಲಿಷ್ಠವಾಗೊಳ್ಳುತ್ತದೆ. ಯುವಜನತೆ ದೇಶದ ಸಂಪತ್ತಾಗಿದ್ದು ಉತ್ತಮ ವಿದ್ಯಾರ್ಥಿಗಳ ನಿರ್ಮಾಣ ಶಿಕ್ಷಣ ಸಂಸ್ಥಗಳಿಂದಾಗಬೇಕು. ಅಂಜುಮನ್ ಸಂಸ್ಥೆ ಕಳೆದ ನೂರು ವರ್ಷಗಳಲ್ಲಿ ಮೌಲ್ಯಯುತ, ಮಾನವೀಯ ಶಿಕ್ಷಣಕ್ಕ ಒತ್ತು ನೀಡಿದ್ದು ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಭಟ್ಕಳಕ್ಕೂ ದ.ಕ. ಜಿಲ್ಲೆಗೆ ಭಾವನಾತ್ಮಕ ಸಂಬಂಧವಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಡವಾಳ ಹೂಡುವುದರ ಮೂಲಕ ಆರ್ಥಿಕ ಸದೃಢತೆಗೆ ಕಾರಣವಾಗಿದ್ದಾರೆ ಎಂದ ಅವರು ಭಟ್ಕಳದ ಒಳಚರಂಡಿ ವ್ಯವಸ್ಥೆ ಸಮಸ್ಯೆ ನನ್ನ ಗಮನಕ್ಕೆ ಬಂದಿದ್ದು ಈಗಾಗಲೆ ನನ್ನ ಇಲಾಖೆಯಿಂದ 110 ಕೋಟಿ ರೂ. ಮಂಜೂರಿಯಾಗಿದ್ದು ಮುಂದಿನ ದಿನಗಳಲ್ಲಿ ಅನುದಾನವೂ ಬಿಡುಗಡೆಯಾಗಲಿದೆ ಎಂದರು.

ಮಾಜಿ ಶಿಕ್ಷಣ ಸಚಿವ ತನ್ವೀರ್ ಸೇಟ್, ಶಾಸಕ ಸುನಿಲ್ ನಾಯ್ಕ್ ಈ ಸಂದರ್ಭದಲ್ಲಿ ಮಾತನಾಡಿದರು. ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಜುಕಾಕೋ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಇಸ್ಮಾಯಿಲ್ ಸಂಸ್ಥೆಯ ಬೆಳವಣೆಗೆ ಕುರಿತು ವಿವರಿಸಿದರು.

ಶತಮಾನೋತ್ಸವ ಸಮಾರಂಭದ ಸಂಚಾಲಕ ಎಂ.ಜೆ.ಅಬ್ದುಲ್ ರಖೀಬ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಮರ್ಕಝಿ ಖಲೀಫಾ ಜಮಾಅತುಲು ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನ ಕ್ವಾಜಾ ಮುಹಿದ್ದೀನ್ ಅಕ್ರಮಿ ನದ್ವಿ ಉಪನ್ಯಾಸ ನೀಡಿದರು. ಅಂಜುಮನ್ ಪಿ.ಯು.ಕಾಲೇಜ್ ಉಪನ್ಯಾಸಕ ಅಬ್ದುಲ್ ರವೂಫ್ ಸವಣೂರು ಅತಿಥಿಗಳನ್ನು ಪರಿಚಯಿಸಿದರು.

ವೇದಿಕೆಯಲ್ಲಿ  ಸಂಸ್ಥೆಯ ಮಾಜಿ ಅಧ್ಯಕ್ಷ ಡಿ.ಎಚ್.ಶಬ್ಬರ್ ಸಾಹೇಬ್, ಮರ್ಕಝಿ ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝೀ ಮೌಲಾನ ಇಕ್ಬಾಲ್ ಮುಲ್ಲಾ ನದ್ವಿ, ತಂಝೀಮ್ ಅಧ್ಯಕ್ಷ ಮುಝಮ್ಮಿಲ್ ಖಾಝೀಯಾ, ಝಾಹಿದ್ ರುಕ್ನುದ್ದೀನ್, ಮೊಹಸಿನ್ ಶಾಬಂದ್ರಿ, ಇಸ್ಹಾಖ್ ಶಾಬಂದ್ರಿ, ಮಾಜಿ ಶಾಸಕ ಜೆ.ಡಿ.ನಾಯ್ಕ, ಸೈಯ್ಯದ್ ಅಬ್ದುಲ್ ರಹೀಮ್ ಬಾತಿನ್, ಎಸ್.ಎಂ.ಸೈಯ್ಯದ್ ಅಬ್ದುಲ್ ಅಝೀಮ್ ಅಂಬಾರಿ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷ ಸೇವೆ ಸಲ್ಲಿಸಿದ 70 ಮಂದಿ ಶಿಕ್ಷಕರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X