Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವರ್ಷಗಳ ಕಾಲ ಸರಕಾರ ಬಂದ್‌ಗೂ ಸಿದ್ಧ ಎಂದ...

ವರ್ಷಗಳ ಕಾಲ ಸರಕಾರ ಬಂದ್‌ಗೂ ಸಿದ್ಧ ಎಂದ ಟ್ರಂಪ್ !

ವಾರ್ತಾಭಾರತಿವಾರ್ತಾಭಾರತಿ5 Jan 2019 10:09 PM IST
share
ವರ್ಷಗಳ ಕಾಲ ಸರಕಾರ ಬಂದ್‌ಗೂ ಸಿದ್ಧ ಎಂದ ಟ್ರಂಪ್ !

ವಾಶಿಂಗ್ಟನ್, ಜ. 5: ಮೆಕ್ಸಿಕೊ ಗಡಿ ಗೋಡೆಗೆ ಸಂಸತ್ತು ಕಾಂಗ್ರೆಸ್ ಹಣ ನೀಡದಿದ್ದರೆ ಈಗಾಗಲೇ ಎರಡು ವಾರಗಳಿಂದ ಚಾಲ್ತಿಯಲ್ಲಿರುವ ಸರಕಾರಿ ಸ್ಥಗಿತವನ್ನು ವರ್ಷಗಳ ಕಾಲ ಮುಂದುವರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ‘ಬೆದರಿಸಿದ್ದಾರೆ’.

ಇದೇ ವಿಷಯದಲ್ಲಿ ಶ್ವೇತಭವನದಲ್ಲಿ ಕಾಂಗ್ರೆಸ್ ನಾಯಕರ ಜೊತೆ ನಡೆದ ಸಭೆ ಯಾವುದೇ ನಿರ್ಧಾರಕ್ಕೆ ಬರದೆ ಮುಕ್ತಾಯಗೊಂಡ ಬಳಿಕ ಟ್ರಂಪ್ ಈ ಹೇಳಿಕೆ ನೀಡಿದರು. ಮೆಕ್ಸಿಕೊ ಗಡಿ ಗೋಡೆಯನ್ನು ಕಟ್ಟಲು ತಾನು ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಎದುರಿಸಬಹುದಾಗಿದೆ ಎಂದು ಅವರು ಹೇಳಿದರು.

ಅಕ್ರಮ ವಲಸಿಗರು ಅಮೆರಿಕ ಪ್ರವೇಶಿಸದಂತೆ ತಡೆಯಲು ಗಡಿ ಗೋಡೆ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಶ್ವೇತಭವನದಲ್ಲಿ ಬಿಕ್ಕಟ್ಟನ್ನು ಹೋಗಲಾಡಿಸುವುದಕ್ಕೆ ಸಂಬಂಧಿಸಿ ನಡೆದ ಮಾತುಕತೆಯ ವೇಳೆ, ಸರಕಾರಿ ಯಂತ್ರದ ಸ್ಥಾಗಿತ್ಯವನ್ನು ವರ್ಷಗಳ ಕಾಲ ಮುಂದುವರಿಸುವುದಾಗಿ ಟ್ರಂಪ್ ಬೆದರಿಸಿದರು ಎಂಬುದಾಗಿ ಮಾತುಕತೆಯ ಬಳಿಕ ಪ್ರತಿಪಕ್ಷ ಡೆಮಾಕ್ರಟಿಕ್ ಸಂಸದರು ಸುದ್ದಿಗಾರರಿಗೆ ತಿಳಿಸಿದರು.

ಬಳಿಕ, ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಟ್ರಂಪ್, ‘‘ಹೌದು, ನಾನು ಹಾಗೆಯೇ ಹೇಳಿದೆ’’ ಎಂದರು.

ಮಾತುಕತೆ ಮುಂದುವರಿಸುತ್ತೇವೆ: ಡೆಮಾಕ್ರಟಿಕ್ ನಾಯಕರು

‘‘ಸರಕಾರ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ನಾವು ಅಧ್ಯಕ್ಷರಿಗೆ ತಿಳಿಸಿದೆವು. ಅದನ್ನು ಅವರು ವಿರೋಧಿಸಿದರು. ನಾನು ಸರಕಾರವನ್ನು ಸುದೀರ್ಘ ಅವಧಿಯವರೆಗೆ, ಅಂದರೆ ತಿಂಗಳುಗಳು ಅಥವಾ ವರ್ಷಗಳ ಕಾಲವೂ ಬಂದ್ ಮಾಡುತ್ತೇನೆ ಎಂದು ಅವರು ಹೇಳಿದರು’’ ಎಂದು ಸೆನೆಟ್ ಅಲ್ಪಮತ ನಾಯಕ ಚಕ್ ಶೂಮರ್ ಶ್ವೇತಭವನದಲ್ಲಿ ಟ್ರಂಪ್‌ರನ್ನು ಭೇಟಿಯಾದ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

‘‘ನಾವು ಹಲವು ವಿಷಯಗಳ ಬಗ್ಗೆ ಚರ್ಚಿಸಿದೆವು. ಅವುಗಳು ವಿವಾದಾಸ್ಪದ ವಿಷಯಗಳೇ ಆಗಿದ್ದವು. ಈ ಬಗ್ಗೆ ಚರ್ಚಿಸುವುದನ್ನು ನಾವು ಮುಂದುವರಿಸುತ್ತೇವೆ. ಆದರೆ, ಅವರು ಸರಕಾರವನ್ನು ತೆರೆಯದಿದ್ದರೆ ಎಷ್ಟು ಪ್ರಗತಿಯನ್ನು ಸಾಧಿಸಲಾಗುವುದು ಎಂದು ಹೇಳುವುದು ಕಷ್ಟ’’ ಎಂದು ಶೂಮರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X