Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ವಾಸ್ತವವಾದದ ಎಲ್ಲೆಗಳನ್ನು ಮೀರಿ ನಿಂತ...

‘ವಾಸ್ತವವಾದದ ಎಲ್ಲೆಗಳನ್ನು ಮೀರಿ ನಿಂತ ಕಾದಂಬರಿ’

ಮಲೆಗಳಲ್ಲಿ ಮದುಮಗಳು-50 ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ5 Jan 2019 10:12 PM IST
share
‘ವಾಸ್ತವವಾದದ ಎಲ್ಲೆಗಳನ್ನು ಮೀರಿ ನಿಂತ ಕಾದಂಬರಿ’

ಉಡುಪಿ, ಜ.5: ಮಲೆನಾಡನ್ನು ವ್ಯಾಪಕವಾದ ಕ್ಯಾನ್ವಾಸ್‌ನಲ್ಲಿ ಕಟ್ಟಿಕೊಡುವ, ಮಲೆನಾಡಿನ ಸಕಲ ಜೀವಚರಗಳಿಗೂ, ಮನುಷ್ಯನ ಎಲ್ಲಾ ಜಾತಿಗಳೊಂದಿಗೆ ಸಮಾನ ಸ್ಥಾನಮಾನ ನೀಡಿದ ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಕನ್ನಡದ ಅಪರೂಪದ ಹಾಗೂ ಅತೀ ವಿಶಿಷ್ಟವಾದ ಕಾದಂಬರಿಯಾಗಿದ್ದು, ಅದರ ವಸ್ತು ಇಂದಿನ ಸಂದರ್ಭದಲ್ಲಿ ಹೆಚ್ಚು ಪ್ರಸ್ತುತ ಎನಿಸಿಕೊಳ್ಳುತ್ತಿದೆ ಎಂದು ನಿವೃತ್ತ ಕುಲಪತಿ ಹಾಗೂ ಹಿರಿಯ ವಿದ್ವಾಂಸರಾದ ಡಾ.ಬಿ.ಎ.ವಿವೇಕ್ ರೈ ಅಭಿಪ್ರಾಯ ಪಟ್ಟಿದ್ದಾರೆ.

ಶಿವಮೊಗ್ಗದ ಲೋಹಿಯಾ ಜನ್ಮ ಶತಾಬ್ದಿ ಪ್ರತಿಷ್ಠಾನ ಹಾಗೂ ಉಡುಪಿಯ ರಥಬೀದಿ ಗೆಳೆಯರು ಇವರ ಜಂಟಿ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ಧ್ವನ್ಯಾಲೋಕ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು-50’ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

1967-68ರಲ್ಲಿ ಈ ಕಾದಂಬರಿ ಮೊದಲ ಬಾರಿ ಪ್ರಕಟಗೊಂಡಾಗ,ಅದಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕಿರಲಿಲ್ಲ. ಡಾ.ಅನಂತಮೂರ್ತಿ ಅವರ ‘ಸಂಸ್ಕಾರ’, ಡಾ.ಶಾಂತಿನಾಥ ದೇಸಾಯಿ ಅವರ ಕಾದಂಬರಿ, ಗಿರಿಯವರ ‘ಗತಿ-ಸ್ಥಿತಿ’ಯಂಥ ನವ್ಯ ಕಾದಂಬರಿಯ ನಡುವೆ ಇದು ಅಂದಿನ ವಿಮರ್ಶಕರಿಂದ ವಿಶೇಷ ಮನ್ನಣೆ ಪಡೆದಿರಲಿಲ್ಲ ಎಂದು ಡಾ.ರೈ ನೆನಪಿಸಿಕೊಂಡರು.

ಆದರೆ ಕನ್ನಡದ ಮಟ್ಟಿಗೆ ಇದೊಂದು ವಿಶಿಷ್ಟ ಕಾದಂಬರಿಯಾಗಿತ್ತು. ಇಲ್ಲಿನ ಎಲ್ಲಾ ಪಾತ್ರಗಳು ಮುಖ್ಯವಾಗಿದ್ದವು. ಯಾವುದೂ ಅಮುಖ್ಯವೆನಿಸಿರಲೇ ಇಲ್ಲ. ಮಲೆನಾಡಿನ 10-12 ಜಾತಿಗಳೊಂದಿಗೆ ಅಲ್ಲಿನ ನಾಯಿ, ಹಂದಿ, ಹುಲಿ, ಕ್ರಿಮಿಕೀಟಗಳು, ಮರಗಿಡಗಳು, ಪ್ರಕೃತಿ ಎಲ್ಲವೂ ಪಾತ್ರಗಳ ರೀತಿಯಲ್ಲಿ ಕಾಣಿಸಿಕೊಂಡವು. ಮಹಿಳೆಯರಿಗೂ ಅವರೆಲ್ಲಾ ಗುಣಾವಗುಣಗಳೊಂದಿಗೆ ಪ್ರದಾನ ಸ್ಥಾನ ಈ ಕಾದಂಬರಿಯಲ್ಲಿ ದೊರಕಿದೆ ಎಂದು ಅವರು ವಿಶ್ಲೇಷಿಸಿದರು.

ನಮ್ಮ ಸಮಾಜದ ಜಾತಿಗಳ ಶ್ರೇಣಿಕೃತ ವ್ಯವಸ್ಥೆಯನ್ನು ತೆರೆದು ತೋರಿಸುವ ಕಾದಂಬರಿ ಇದಾಗಿದೆ. ಜಾತಿಗಳ ಸಾಂಸ್ಕೃತಿಕ ಸ್ತರಗಳೂ ಇದರಲ್ಲಿ ಸ್ಪಷ್ಟವಾಗಿ ಕಾಣಿಸುತ್ತವೆ. ಜಾತಿಯನ್ನು ಇಟ್ಟುಕೊಂಡು ಜಾತಿ ಕರಗುತ್ತಾ ಬರುವ ಸೂಚನೆಯನ್ನು ಕಾದಂಬರಿ ನೀಡುತ್ತದೆ. ಇದರೊಂದಿಗೆ ಪ್ರತಿಷ್ಠಿತ ಜಾತಿಗಳು ಪ್ರತಿಷ್ಠೆಯನ್ನು ಕಳೆದುಕೊಳ್ಳುವುದರ ಚಿತ್ರಣವಿದೆ ಎಂದರು.

ಕಾದಂಬರಿಯಲ್ಲಿ ಕ್ರೈಸ್ತರ ಬಲಾತ್ಕಾರದ ಮತಾಂತರವನ್ನು ವಿರೋಧಿಸುವ ಕುವೆಂಪು, ಅವರು ಊರಿನಲ್ಲಿ ನಿರ್ಮಿಸುವ ಎಲ್ಲಾ ಜಾತಿಗಳಿಗೂ ಅವಕಾಶ ವಿರುವ ಶಾಲೆ ಹಾಗೂ ಆಸ್ಪತ್ರೆಗಳ ನಿರ್ಮಾಣದ ಪರವಾಗಿ ಮಾತನಾಡುತ್ತಾರೆ. ಅದೇ ರೀತಿ ಜ್ಯೋತಿಷಿಗಳ ಮೂಢನಂಬಿಕೆಯ ಪ್ರತಿಪಾದನೆಯನ್ನು ಕಟುವಾಗಿ ವಿರೋಧಿಸುತ್ತಾರೆ ಎಂದರು.

ಕಾದಂಬರಿಯಲ್ಲಿ ಕ್ರೈಸ್ತರ ಬಲಾತ್ಕಾರದ ಮತಾಂತರವನ್ನು ವಿರೋಧಿಸುವ ಕುವೆಂಪು, ಅವರು ಊರಿನಲ್ಲಿ ನಿರ್ಮಿಸುವ ಎಲ್ಲಾ ಜಾತಿಗಳಿಗೂ ಅವಕಾಶ ವಿರುವ ಶಾಲೆ ಹಾಗೂ ಆಸ್ಪತ್ರೆಗಳ ನಿರ್ಮಾಣದ ಪರವಾಗಿ ಮಾತನಾಡುತ್ತಾರೆ. ಅದೇ ರೀತಿ ಜ್ಯೋತಿಷಿಗಳ ಮೂಢನಂಬಿಕೆಯ ಪ್ರತಿಪಾದನೆಯನ್ನು ಕಟುವಾಗಿ ವಿರೋಧಿಸುತ್ತಾರೆ ಎಂದರು. ಕಾದಂಬರಿ ಕುರಿತು ಮಾತನಾಡಿದ ಉಡುಪಿಯ ಚಿಂತಕ ಹಾಗೂ ವಿಮರ್ಶಕ ಜಿ.ರಾಜಶೇಖರ್, ಮಲೆನಾಡಿನ ಹಳ್ಳಿಗಳ ಸಾಮಾಜಿಕ ಬಿಕ್ಕಟ್ಟು, ಕಟ್ಟುಕಟ್ಟಲೆ, ಮದುವೆ, ಅಡುಗೆ ಎಲ್ಲವೂ ಕಾದಂಬರಿಯಲ್ಲಿವೆ. ಮಲೆನಾಡಿನಲ್ಲಿ ಮನುಷ್ಯ ಮತ್ತು ನಿಸರ್ಗದ ನಡುವಿನ ಸಾಮರಸ್ಯ ಹಾಗೂ ಸಂಘರ್ಷದ ಚಿತ್ರಣವೂ ಕಾಣಿಸಿಕೊಳ್ಳುತ್ತದೆ. ಮಲೆನಾಡು ಇಲ್ಲಿ ರೂಪಕ, ಪ್ರತಿಮೆ, ಕನಸು ಎಲ್ಲಾ ಆಗಿದೆ ಎಂದರು.

ಅತಿಥಿಗಳನ್ನು ಸ್ವಾಗತಿಸಿದ ಶಿವಮೊಗ್ಗದ ಪ್ರತಿಷ್ಠಾನ ಅಧ್ಯಕ್ಷ ಹಾಗೂ ಚಿಂತಕ ಡಿ.ಎಸ್. ನಾಗಭೂಷಣ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಕುವೆಂಪು ಅವರ ಈ ಕಾದಂಬರಿಯನ್ನು ದೇವನೂರು ಮಹಾದೇವ ಅವರು ‘ಭಾರತದ ಮಟ್ಟಿಗೆ ಶತಮಾನದ ಕಾಂಬರಿ’ ಎಂದು ಕರೆದಿದ್ದಾರೆ ಎಂದರು.

ಇದು ವಾಸ್ತವವಾದದ ಎಲ್ಲೆಗಳನ್ನು ಮೀರಿನಿಂತ ಕಾದಂಬರಿ ಇದಾಗಿದ್ದು, ಇದು ಧರ್ಮಜಿಜ್ಞಾಸೆಯನ್ನು ನಡೆಸುತ್ತದೆ ಎಂದು ಹೇಳಿದ ಡಿಎಸ್‌ಎನ್, ಕಾದಂಬರಿ ಪ್ರಕಟಗೊಂಡು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರತಿಷ್ಠಾನ ಈಗಾಗಲೇ ಮೈಸೂರು ಮತ್ತು ಧಾರವಾಡಗಳಲ್ಲಿ ಕಾದಂಬರಿ ಕುರಿತಂತೆ ವಿಚಾರ ಸಂಕಿರಣ ನಡೆಸಿದ್ದು, ಇದು ಈ ಸರಣಿಯಲ್ಲಿ ಮೂರನೇಯದು ಎಂದರು.

ಪುತ್ತೂರಿನ ಚಿಂತಕ, ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಹಾಗೂ ಮಂಗಳೂರಿನ ಡಾ.ವಾಸುದೇವ ಬೆಳ್ಳೆ ಅವರು ತಮ್ಮ ವಿಚಾರಗಳನ್ನು ಮಂಡಿಸಿದರು. ರಥಬೀದಿ ಗೆಳೆಯರು ಸಂಘಟನೆಯ ಅಧ್ಯಕ್ಷ ಪ್ರೊ.ಮುರಳೀಧರ ಉಪಾಧ್ಯ ಹಿರಿಯಡಕ ವಂದಿಸಿದರೆ, ಪ್ರೊ.ಸುಬ್ರಹ್ಮಣ್ಯ ಜೋಶಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X