Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರೊ.ಭಗವಾನ್ ವಿರುದ್ದ ದಾಖಲಾಗಿರುವ...

ಪ್ರೊ.ಭಗವಾನ್ ವಿರುದ್ದ ದಾಖಲಾಗಿರುವ ಪ್ರಕರಣಗಳನ್ನು ವಜಾಗೊಳಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ5 Jan 2019 11:32 PM IST
share
ಪ್ರೊ.ಭಗವಾನ್ ವಿರುದ್ದ ದಾಖಲಾಗಿರುವ ಪ್ರಕರಣಗಳನ್ನು ವಜಾಗೊಳಿಸಲು ಒತ್ತಾಯ

ಮೈಸೂರು,ಜ.5: ಸಾಹಿತಿ, ಪ್ರಗತಿಪರ ಚಿಂತಕ ಪ್ರೊ.ಭಗವಾನ್ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆಗೊಳಪಡಿಸಿರುವುದನ್ನು ತೀವ್ರವಾಗಿ ಖಂಡಿಸಿ ಕರ್ನಾಟಕ ಪ್ರಗತಿಪರ ಚಿಂತಕರ ವೇದಿಕೆ, ದಲಿತ ವೆಲ್ ಫೇರ್ ಟ್ರಸ್ಟ್, ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕೂಡಲೇ ವಜಾಗೊಳಿಸಬೇಕೆಂದು ಒತ್ತಾಯಿಸಿದವು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ದಲಿತ ವೆಲ್‍ಫೇರ್ ಟ್ರಸ್ಟ್ ಗೌರವಾಧ್ಯಕ್ಷ ಶಾಂತರಾಜು ಮಾತನಾಡಿ, ಭಗವಾನ್ ಅವರ ವಿರುದ್ಧ ದೃಶ್ಯ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಯುತ್ತಿದೆ. ಅವರೊಬ್ಬ ಮಾನಸಿಕ ಅಸಮತೋಲನ ಹೊಂದಿರುವ ಹಿಂದೂ ವಿರೋಧಿಯೆಂದು ಬಿಂಭಿಸಲಾಗುತ್ತಿದೆ. ಇದು ಸರಿಯಲ್ಲ, ತಮಗೂ ಅಭಿವ್ಯಕ್ತ ಸ್ವಾತಂತ್ರ್ಯವಿದ್ದು ಸಂವಿಧಾನದಡಿಯಲ್ಲಿ ತಮ್ಮ ಹಕ್ಕುಗಳನ್ನು ಚಲಾಯಿಸಲು ಅವಕಾಶ ನೀಡಿ ಎಂದು ನುಡಿದರು.

ಭಗವಾನ್ ಅವರ ವಿರುದ್ಧ ಪ್ರತಿಭಟಿಸುತ್ತಿರುವವರು, ಮೊದಲು ಅವರು ಬರೆದಿರುವ “ರಾಮಮಂದಿರ ಏಕೆ ಬೇಡ” ಎಂಬ ಪುಸ್ತಕವನ್ನು ಅಧ್ಯಯನ ಮಾಡಲಿ ನಂತರ ಅಲ್ಲಿರುವ ವಿಚಾರದ ಕುರಿತು ಪ್ರತಿಭಟಿಸಲಿ. ಅದು ಬಿಟ್ಟು, ಸುಮ್ಮನೆ ಅವರ ವಿರುದ್ದ ಪ್ರತಿಭಟನೆ ನಡೆಸುವುದು ಸರಿಯಲ್ಲ. ಇವರು ಇದೇ ರೀತಿ ಮುಂದುವರೆಸಿದರೆ ಅಹಿಂದ ವರ್ಗದವರು ಇವರ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಎಚ್ಚರಿಸಿದರು.

ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳು ಭಗವಾನ್ ಇದೇ ರೀತಿ ಹೇಳಿಕೆ ನೀಡಿದರೆ ಅವರಿಗೆ ಕಷ್ಟಕರವಾಗುತ್ತದೆ ಎಂಬ ಹೇಳಿಕೆ ನೀಡಿದ್ದಾರೆ. ಇದರ ಅರ್ಥ ಏನು ಎಂದು ಪ್ರಶ್ನಿಸಿದ ಅವರು, ಇವರ ಹೇಳಿಕೆ ಗಮನಿಸಿದರೆ ಅವರನ್ನು ಕೊಲೆ ಮಾಡುವ ಪ್ರಯತ್ನ ಆಗುತ್ತಿದೆಯೆನೋ ಎಂಬ ಅನುಮಾನ ಮೂಡುತ್ತಿದೆ. ರಾಮ, ರಾಮರಸ ಕುಡಿಯುತ್ತಿದ್ದ ಎಂಬ ಉಲ್ಲೇಖವನ್ನು ನೀವೇ ಮಾಡುತ್ತೀರಿ. ಅದರರ್ಥ ಅವನು ಮಧ್ಯ ಸೇವಿಸುತ್ತಿದ್ದ ಎಂದು ತಾನೆ ಎಂದು ಪ್ರಶ್ನಿಸಿದರು.

ವಾಕ್ ಸ್ವಾತಂತ್ರ್ಯ, ವಿಮರ್ಶೆ ಸಂವಿಧಾನ ಬದ್ದ ಹಕ್ಕು ಅದನ್ನು ಭಗವಾನ್ ಮಾಡಿದ್ದಾರೆ. ಮೊದಲು ಪುಸ್ತಕವನ್ನು ಓದಿ ನಂತರ ಉತ್ತರ ಕೊಡಿ ಎಂದು ಹೇಳಿದರು.

ಪ್ರಗತಿಪರ ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ಮಾತನಾಡಿ, ತಮಗೂ ಮಾತನಾಡುವ, ಬರೆಯುವ, ವಿಮರ್ಶಿಸುವ, ಸಂಶೋಧಿಸುವ, ಚರ್ಚಿಸುವ ಸ್ವಾತಂತ್ರವಿದ್ದು ಅದನ್ನು ಹತ್ತಿಕ್ಕುವ ಯತ್ನ ನಡೆಯುತ್ತಿದೆ. ನಾವ್ಯಾರೂ ಹಿಂದೂ ಧರ್ಮ ವಿರೋಧಿಗಳಲ್ಲ. ಹಿಂದೂ ಧರ್ಮವನ್ನು ಯಾರೂ ಗುತ್ತಿಗೆ ಪಡೆದಿಲ್ಲ. ಗುತ್ತಿಗೆ ಪಡೆದವರಂತೆ ಹೋರಾಡುವವರ ವಿರುದ್ಧ ತಾವು ಪ್ರತಿ ಹೋರಾಟ ನಡೆಸಬೇಕಾಗುವುದು ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ನಂಜುಂಡಸ್ವಾಮಿ, ಬೋರಪ್ಪ ಶೆಟ್ಟಿ, ಚಿಕ್ಕಂದಾನಿ, ರವೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X