Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಪರೂಪದ ಕಲಾಮೇಳ ಶಾಶ್ವತವಾಗಿರಲಿ:...

ಅಪರೂಪದ ಕಲಾಮೇಳ ಶಾಶ್ವತವಾಗಿರಲಿ: ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ

ವಾರ್ತಾಭಾರತಿವಾರ್ತಾಭಾರತಿ6 Jan 2019 10:40 PM IST
share

ಬೆಂಗಳೂರು, ಜ.6: ಚಿತ್ರಕಲೆಯನ್ನು ಉತ್ತೇಜಿಸುವ ಚಿತ್ರಸಂತೆಯೂ ಅಪರೂಪದ ಕಲಾಮೇಳವಾಗಿದ್ದು, ಇಂತಹ ಸಂತೆಗಳು ಶಾಶ್ವತವಾಗಿರಬೇಕು ಎಂದು ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ ತಿಳಿಸಿದರು.

ರವಿವಾರ ನಗರದ ಚಿತ್ರಕಲಾ ಪರಿಷತ್ತು ಆಯೋಜಿಸಿದ್ದು, 16ನೇ ಚಿತ್ರ ಸಂತೆ ಉದ್ಘಾಟಿಸಿ ಮಾತನಾಡಿದ ಅವರು, ನಾನು ಇದೇ ಮೊದಲ ಬಾರಿ ಚಿತ್ರಸಂತೆಗೆ ಬರುತ್ತಿದ್ದೇನೆ. ಒಂದಕ್ಕಿಂತ ಒಂದು ಆಕರ್ಷಕವಾದ ಚಿತ್ರಕಲೆಗಳು ಇಲ್ಲಿವೆ. ಕಲಾಕೃತಿಗಳನ್ನು ನೋಡಿದರೆ ಸಂತೋಷವಾಗುತ್ತದೆ ಎಂದರು.

ಕಲಾವಿದರಿಗೆ ಉತ್ತೇಜನ ನೀಡುವ ಇಂತಹ ಚಿತ್ರಸಂತೆಗಳು ನಡೆಯಬೇಕು. ಇದಕ್ಕೆ ಎಲ್ಲ ರೀತಿಯ ಸಹಕಾರ ಬಿಬಿಎಂಪಿ ನೀಡಲಿದೆ ಎಂದ ಅವರು, ಚಿತ್ರ ಸಂಸ್ಕೃತಿ ಪ್ರತಿ ತಾಲ್ಲೂಕು ವ್ಯಾಪ್ತಿಯಲ್ಲೂ ನಡೆಯಬೇಕು ಎಂದು ಹೇಳಿದರು.

ಸಂಸದ ಪಿ.ಸಿ.ಮೋಹನ್ ಮಾತನಾಡಿ, ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಈ ಚಿತ್ರಸಂತೆ ಇಡೀ ದೇಶದಲ್ಲೇ ಮನೆ ಮಾತಾಗಿದೆ. ಎಲ್ಲೆಡೆ ಚಿತ್ರಸಂತೆಯ ಬಗ್ಗೆ ಮಾತನಾಡುತ್ತಾರೆ ಎಂದು ನುಡಿದರು.

ಕಲಾವಿದ ಎಂ.ಎಚ್.ಕೃಷ್ಣಯ್ಯ ಮಾತನಾಡಿ, ಪ್ರತಿವರ್ಷ ಚಿತ್ರಸಂತೆ ಒಂದು ವಿಷಯದ ಮೇಲೆ ನಡೆಯಲಿದೆ. ಈ ವರ್ಷ ಗಾಂಧೀಜಿ ವಿಚಾರಧಾರೆ ಮೇಲೆ ಈ ಚಿತ್ರಸಂತೆ ನಡೆದಿರುವುದು ಸಂತಸ ತಂದಿದೆ ಎಂದು ಹೇಳಿದರು.

ಕಿರಿಯರ ಸೃಜನಶೀಲಾ ಮನಸ್ಸುಗಳು ಚಿತ್ರಸಂತೆಯ ಮೂಲಕ ಜಗತ್ತಿಗೆ ಪರಿಚಯವಾಗುತ್ತಿದೆ. ಕಿರಿಯರು ತಾವು ನೋಡಿದ, ಅನುಭವಿಸಿ, ಕೇಳಿದ್ದನ್ನು ತಮ್ಮ ಸೃಜನಶೀಲತೆಯ ಮೂಲಕ ಅನಾವರಣಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿತ್ರಕಲಾ ಪರಿಷತ್ತು ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ಗಾಂಧೀಜಿ ಅವರ 150ನೇ ಜಯಂತಿ ಅಂಗವಾಗಿ ಈ ಚಿತ್ರಸಂತೆಯನ್ನು ಮಹಾತ್ಮಗಾಂಧಿ ಅವರಿಗೆ ಸಮರ್ಪಿಸಲಾಗಿದೆ. ಗಾಂಧೀಜಿ ಅವರು ಈ ಹಿಂದೆ ಬೆಂಗಳೂರಿಗೆ ಬಂದಾಗ 9 ದಿನಗಳ ಕಾಲ ಕುಮಾರಕೃಪಾ ಅತಿಥಿ ಗೃಹದಲ್ಲಿ ತಂಗಿದ್ದರು. ಆಗ ಅವರು ಇಲ್ಲೇ ವಾಯುವಿಹಾರ ನಡೆಸಿ ಚಿತ್ರಕಲಾ ಪರಿಷತ್ತು ಆವರಣದಲ್ಲಿರುವ ಬಂಡೆ ಮೇಲೆ ಧ್ಯಾನ ಮಾಡಿದ್ದರು ಎಂಬ ಮಾಹಿತಿ ಇದೆ. ಅದರಂತೆ ಅಲ್ಲಿ ಗಾಂಧೀಜಿ ಅವರ ಪ್ರತಿಕೃತಿಯನ್ನು ರೂಪಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಕಿರಣ್‌ಕುಮಾರ್, ಸಚಿವ ಜಿ.ಟಿ.ದೇವೇಗೌಡ, ಮಾಜಿ ಸಚಿವೆ ರಾಣಿ ಸತ್ತೀಶ್ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಪ್ರೊ.ಎಂ.ಜಿ. ಕಮಲಾಕ್ಷಿ, ಉಪಾಧ್ಯಕ್ಷರಾದ ಹರೀಶ್ ಜೆ. ಪದ್ಮನಾಭ, ಟಿ. ಪ್ರಭಾಕರ್ ಸೇರಿದಂತೆ ಪ್ರಮುಖರಿದ್ದರು.

‘ಸಂತಸ ತಂದಿದೆ ’

ಕಲಾವಿದರ ಕಲಾಕೃತಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ತಲುಪಿಸುವ ಪೂರಕವಾಗಿ ಚಿತ್ರಸಂತೆ ಕಾರ್ಯ ನಿರ್ವಹಿಸುತ್ತಿದೆ. ಈ ಮೂಲಕ ಕಲಾವಿದರ ಕಲೆಗೆ ವ್ಯಾಪಕ ಪ್ರಚಾರ ಹಾಗೂ ಮಾರುಕಟ್ಟೆ ಒದಗಿಸುತ್ತಿರುವುದು ಸಂತಸದ ವಿಚಾರ

-ಜಿ.ಟಿ.ದೇವೇಗೌಡ, ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X