Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಜಿ ಪೊಲೀಸ್ ಅಧಿಕಾರಿಗಳ ವಿರುದ್ಧ...

ಮಾಜಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಲಭಿಸಿಲ್ಲ: ಸಿಬಿಐ

ಇಶ್ರತ್ ಜಹಾನ್ ಎನ್‌ಕೌಂಟರ್

ವಾರ್ತಾಭಾರತಿವಾರ್ತಾಭಾರತಿ6 Jan 2019 10:55 PM IST
share
ಮಾಜಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಲಭಿಸಿಲ್ಲ: ಸಿಬಿಐ

ಹೊಸದಿಲ್ಲಿ,ಜ.6: ಇಶ್ರತ್ ಜಹಾನ್ ಎನ್‌ಕೌಂಟರ್ ಪ್ರಕರಣದಲ್ಲಿ ಆರೋಪಿಗಳಾಗಿರುವ ಮಾಜಿ ಪೊಲೀಸ್ ಅಧಿಕಾರಿಗಳ ವಿರುದ್ಧ ಸಮಯಮಿತಿಯೊಳಗೆ ಕಾನೂನು ಕ್ರಮವನ್ನು ಜರುಗಿಸುವುದು ತನ್ನ ಕೈಯಲ್ಲಿಲ್ಲ ಎಂದು ಸಿಬಿಐ ಶನಿವಾರ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಸಂದರ್ಭ ವಿಶೇಷ ನ್ಯಾಯಾಧೀಶ ಜೆ.ಕೆ.ಪಾಂಡ್ಯ ಅವರಿಗೆ ತಿಳಿಸಿತು.

ಡಿ.ಜಿ.ವಂಝಾರಾ ಮತ್ತು ಎನ್.ಕೆ.ಅಮೀನ್ ಅವರು ಆರೋಪಿ ಮಾಜಿ ಪೊಲೀಸ್ ಅಧಿಕಾರಿಗಳಲ್ಲಿ ಸೇರಿದ್ದಾರೆ.

ವಿಶೇಷ ನ್ಯಾಯಾಲಯವು ಆದೇಶಿಸಿದ ಬಳಿಕವಷ್ಟೇ ನಿವೃತ್ತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರಗಿಸಲು ತಾನು ಹೇಗೆ ಸರಕಾರದ ಅನುಮತಿಯನ್ನು ಕೋರಿದ್ದೆ ಎಂಬ ಕುರಿತು ತನ್ನ ನಿಲುವನ್ನೂ ಸಿಬಿಐ ಪುನರುಚ್ಚರಿಸಿತು.

ಮಾಜಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರಗಿಸಲು ಗುಜರಾತ್ ಸರಕಾರದ ಅನುಮತಿಯನ್ನು ಕೋರುವ ಅಗತ್ಯವಿಲ್ಲ ಎನ್ನುವುದು ವಿಚಾರಣೆಯ ಆರಂಭದಿಂದಲೂ ಸಿಬಿಐನ ಸ್ಪಷ್ಟವಾದ ನಿಲುವಾಗಿತ್ತು. ಅನುಮತಿ ಪಡೆದುಕೊಳ್ಳುವಂತೆ ಈ ನ್ಯಾಯಾಲಯವು ಆದೇಶಿಸಿದ ಬಳಿಕವಷ್ಟೇ ಸಿಬಿಐ ಗುಜರಾತ್ ಸರಕಾರಕ್ಕೆ ಅರ್ಜಿಯನ್ನು ಸಲ್ಲಿಸಿತ್ತು ಎಂದು ಅದರ ಪರ ವಕೀಲ ಆರ್.ಸಿ.ಕೋಡೆಕರ್ ಅವರು ನ್ಯಾ.ಪಾಂಡ್ಯ ಅವರಿಗೆ ತಿಳಿಸಿದರು.

ಉತ್ತರಿಸಲು ಸರಕಾರವು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬ ನ್ಯಾಯಾಧೀಶರ ಪ್ರಶ್ನೆಗೆ ಅವರು,ಈ ವಿಷಯವನ್ನು ಉನ್ನತ ಮಟ್ಟದ ಅಧಿಕಾರಿಗಳು ನಿರ್ಧರಿಸಲಿರುವುದರಿಂದ ಸಿಬಿಐಗೆ ಆ ಬಗ್ಗೆ ತಿಳಿದಿಲ್ಲ ಎಂದು ಉತ್ತರಿಸಿದರು.

ಸಿಬಿಐ ಹೇಳಿಕೆಯ ವಿರುದ್ಧ ವಾದಿಸಿದ ವಂಝಾರಾ ಪರ ವಕೀಲರು ಪೊಲೀಸರು ಏಳು ಗುಜರಾತ್ ಪೊಲೀಸರ ವಿರುದ್ಧ 2013ರಲ್ಲಿ ಆರೋಪ ಪಟ್ಟಿ ಸಲ್ಲಿಸಿದ ಬಳಿಕ ಐದು ವರ್ಷಗಳು ಕಳೆದುಹೋಗಿವೆ. ಸಿಬಿಐ ಆರೋಪ ಪಟ್ಟಿಯನ್ನು ದಾಖಲಿಸುವ ಮೊದಲೇ ಅನುಮತಿಯನ್ನು ಪಡೆದುಕೊಳ್ಳಬೇಕಾಗಿತ್ತು, ಈಗ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಮಯದ ಮಿತಿ ಇದೆ. ಈಗಾಗಲೇ ಐದು ವರ್ಷಗಳು ಕಳೆದುಹೋಗಿವೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X