Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತರನ್ನು ಓಲೈಸಲು ‘ಖಿಚಡಿ’ ಕಾರ್ಯಕ್ರಮ ...

ದಲಿತರನ್ನು ಓಲೈಸಲು ‘ಖಿಚಡಿ’ ಕಾರ್ಯಕ್ರಮ ಆಯೋಜಿಸಿದ ಬಿಜೆಪಿ

ಪಕ್ಷದ ದಲಿತ ನಾಯಕನಿಂದಲೇ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ6 Jan 2019 11:08 PM IST
share
ದಲಿತರನ್ನು ಓಲೈಸಲು ‘ಖಿಚಡಿ’ ಕಾರ್ಯಕ್ರಮ  ಆಯೋಜಿಸಿದ ಬಿಜೆಪಿ

ಹೊಸದಿಲ್ಲಿ, ಜ.6: ದಲಿತರನ್ನು ಓಲೈಸುವ ಉದ್ದೇಶದಿಂದ ಬಿಜೆಪಿ ರವಿವಾರ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ‘ಖಿಚಡಿ’ ಕಾರ್ಯಕ್ರಮದ ಬಗ್ಗೆ ಬಿಜೆಪಿಯ ದಲಿತ ಮುಖ ಎಂದೇ ಹೆಸರಾಗಿರುವ ಉದಿತ್ ರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

   ಇಂತಹ ಕಾರ್ಯಕ್ರಮಗಳಿಂದ ಯಾವುದೇ ಚುನಾವಣಾ ಲಾಭವನ್ನು ನಿರೀಕ್ಷಿಸಲಾಗದು . ದಲಿತರೊಂದಿಗೆ ಸಹಭೋಜನ, ಖಿಚಡಿ ಅಥವಾ ಔತಣ ಕೂಟ ಇತ್ಯಾದಿ ಕಾರ್ಯಕ್ರಮಗಳು ಸಾಮಾಜಿಕ ಸಾಮರಸ್ಯಕ್ಕೆ ಪೂರಕವಾಗಿವೆ. ಆದರೆ ಇದು ಚುನಾವಣೆಯಲ್ಲಿ ಲಾಭವಾಗಿ ಬದಲಾಗದು ಎಂದು ವಾಯುವ್ಯ ದಿಲ್ಲಿ ಕ್ಷೇತ್ರದ ಸಂಸದ್ ಸದಸ್ಯ ಉದಿತ್ ರಾಜ್ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ದಲಿತರನ್ನು ಓಲೈಸುವ ಕ್ರಮವಾಗಿ ಬಿಜೆಪಿ ‘ಭೀಮ್ ಮಹಾಸಮಾಗಮ’ ಅಥವಾ ಖಿಚಡಿ ಎಂಬ ಕಾರ್ಯಕ್ರಮವನ್ನು ರವಿವಾರ ಹಮ್ಮಿಕೊಂಡಿತ್ತು. 3 ಲಕ್ಷ ದಲಿತ ಕುಟುಂಬಗಳಿಂದ ಸಂಗ್ರಹಿಸಿದ ಅಕ್ಕಿ ಮತ್ತು ಬೇಳೆಯಿಂದ ತಯಾರಿಸಿದ ಖಿಚಡಿಯನ್ನು ಉಣಬಡಿಸುವ ಭೋಜನ ಕೂಟ ಇದಾಗಿದೆ . ಇಂತಹ ಕಾರ್ಯಕ್ರಮಗಳಿಂದ ದಲಿತ ಸಮುದಾಯದವರು ತಮ್ಮ ಹಳೆಯ ನೋವನ್ನು ಮತ್ತೆ ಸ್ಮರಿಸಿಕೊಳ್ಳುವಂತಾಗುತ್ತದೆ ಮತ್ತು ತಮ್ಮನ್ನು ಮತ್ತಷ್ಟು ದೂರ ಮಾಡಲಾಗುತ್ತಿದೆ ಎಂಬ ಭಾವನೆ ಅವರಲ್ಲಿ ಮೂಡುತ್ತದೆ. ಸಮುದಾಯದ ಸುಶಿಕ್ಷಿತ ಮತ್ತು ಜಾಗೃತ ಜನತೆ ಈ ಕಾರ್ಯಕ್ರಮಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರೂ ಇಂತಹ ಪ್ರಯತ್ನದಲ್ಲಿ ವಿಫಲರಾಗಿದ್ದರು ಎಂದು ಉದಿತ್ ರಾಜ್ ಹೇಳಿದ್ದಾರೆ. ಇದೀಗ ದಲಿತ ಸಮುದಾಯ ಅಧಿಕಾರ, ಆಡಳಿತ, ಉದ್ಯೋಗದಲ್ಲಿ ತಮ್ಮ ಪಾಲನ್ನು ಬಯಸುತ್ತಿದೆ. ಸರಕಾರಿ ಉದ್ಯೋಗದ ಪ್ರಮಾಣ ಕಡಿಮೆಯಾಗುತ್ತಿರುವುದು ಸಮುದಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಖಾಸಗೀಕರಣ ಮತ್ತು ಸರಕಾರಿ ಉದ್ಯೋಗಗಳನ್ನು ಹೊರಗುತ್ತಿಗೆ ನೀಡುವ ಪ್ರಕ್ರಿಯೆ ತಮ್ಮನ್ನು ಮೂಲೆಗೊತ್ತುವ ಕ್ರಮವಾಗಿದೆ ಎಂದು ದಲಿತ ಸಮುದಾಯ ಭಾವಿಸುತ್ತಿದೆ ಎಂದು ಎಸ್ಸಿ/ಎಸ್ಟಿ ಸಂಘಟನೆಗಳ ಅಖಿಲ ಭಾರತ ಒಕ್ಕೂಟದ ಅಧ್ಯಕ್ಷರಾಗಿರುವ ಉದಿತ್ ರಾಜ್ ಹೇಳಿದ್ದಾರೆ. ಪ್ರಮುಖ ದಲಿತ ಹಕ್ಕುಗಳ ಹೋರಾಟಗಾರ ಎನಿಸಿಕೊಂಡಿರುವ ಉದಿತ್ ರಾಜ್ ತಮ್ಮನ್ನು ಪಕ್ಷ ಸಮರ್ಪಕವಾಗಿ ಬಳಸಿಕೊಂಡಿಲ್ಲ ಎಂಬ ನೋವನ್ನು ಹೊರಗೆಡವಿದ್ದಾರೆ. 2014ಕ್ಕೂ ಮೊದಲು ತಾನು ಆರೆಸ್ಸೆಸ್ ಮತ್ತು ಬಿಜೆಪಿಯನ್ನು ಟೀಕಿಸುತ್ತಿದ್ದೆ. ಆದರೆ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ತನ್ನನ್ನು ಸರಿಯಾಗಿ ಬಳಸಿಕೊಂಡಿಲ್ಲ. ದಲಿತ ಸಮುದಾಯದವರ ಸಮಸ್ಯೆಗಳನ್ನು ಆಲಿಸಿ, ಪಕ್ಷ ಮತ್ತು ದಲಿತ ಸಮುದಾಯದ ನಡುವಿನ ಕೊಂಡಿಯನ್ನು ಬಲಪಡಿಸುವ ಕಾರ್ಯವನ್ನು ತನಗೆ ವಹಿಸಿಲ್ಲ ಎಂಬ ಬೇಸರವಿದೆ ಎಂದು ರಾಜ್ ಹೇಳಿದ್ದಾರೆ.

ಆದರೆ ರಾಜ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ದಿಲ್ಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ, ಖಿಚಡಿ ಕಾರ್ಯಕ್ರಮ ಸಾಮಾಜಿಕ ಸಾಮರಸ್ಯದ ಉದ್ದೇಶದಿಂದ ಆಯೋಜಿಸಲಾಗಿದೆ. ಇದು ವೋಟ್ ಬ್ಯಾಂಕ್ ರಾಜಕೀಯದ ಕಾರ್ಯಕ್ರಮವಲ್ಲ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X