Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರದ ವಿರುದ್ಧ ಆಕ್ರೋಶ: 20...

ಕೇಂದ್ರ ಸರಕಾರದ ವಿರುದ್ಧ ಆಕ್ರೋಶ: 20 ಕೋಟಿ ಕಾರ್ಮಿಕರ ಬಂದ್ ಇದು..

ವಾರ್ತಾಭಾರತಿವಾರ್ತಾಭಾರತಿ7 Jan 2019 9:44 PM IST
share
ಕೇಂದ್ರ ಸರಕಾರದ ವಿರುದ್ಧ ಆಕ್ರೋಶ: 20 ಕೋಟಿ ಕಾರ್ಮಿಕರ ಬಂದ್ ಇದು..

ಹೊಸದಿಲ್ಲಿ,ಜ.7: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳು ಮತ್ತು ಏಕಪಕ್ಷೀಯ ಕಾರ್ಮಿಕ ಸುಧಾರಣೆಗಳ ವಿರುದ್ಧ ದೇಶದ 20 ಕೋಟಿ ಕಾರ್ಮಿಕರು ಮಂಗಳವಾರದಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಬಂದ್ ಆಚರಿಸುವುದಾಗಿ ಕೇಂದ್ರ ವ್ಯಾಪಾರ ಒಕ್ಕೂಟ ತಿಳಿಸಿದೆ.

ಹತ್ತು ಕೇಂದ್ರ ವ್ಯಾಪಾರ ಒಕ್ಕೂಟಗಳು ಎರಡು ದಿನಗಳ ರಾಷ್ಟ್ರವ್ಯಾಪಿ ಬಂದ್‌ಗೆ ಕೈಜೋಡಿಸಿವೆ. 20 ಕೋಟಿ ಕಾರ್ಮಿಕರು ಈ ಬಂದ್‌ನಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಔಪಚಾರಿಕ ಮತ್ತು ಅನೌಪಚಾರಿಕ ವಲಯದ ಕಾರ್ಮಿಕರು ಇಷ್ಟೊಂದು ಬೃಹತ್ ಸಂಖ್ಯೆಯಲ್ಲಿ ಇದೇ ಮೊದಲ ಬಾರಿ ಬಂದ್ ಆಚರಿಸುತ್ತಿದ್ದಾರೆ ಎಂದು ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ತಿಳಿಸಿದ್ದಾರೆ.

ದೂರಸಂಪರ್ಕ, ಆರೋಗ್ಯ, ಶಿಕ್ಷಣ, ಕಲ್ಲಿದ್ದಲು, ಸ್ಟೀಲ್, ವಿದ್ಯುಚ್ಛಕ್ತಿ, ಬ್ಯಾಂಕಿಂಗ್, ವಿಮೆ ಮತ್ತು ಸಾರಿಗೆ ಹಾಗೂ ಇತರ ಕ್ಷೇತ್ರಗಳ ಕಾರ್ಮಿಕರು ಬಂದ್‌ಗೆ ಬೆಂಬಲ ನೀಡುವ ನಿರೀಕ್ಷೆಯಿದೆ ಎಂದು ಕೌರ್ ತಿಳಿಸಿದ್ದಾರೆ. ಕಾರ್ಮಿಕ ನೀತಿಯ ಬಗ್ಗೆ ನಾವು ಸಲಹೆಗಳನ್ನು ನೀಡಿದ್ದೆವು. ಆದರೆ ಚರ್ಚೆಯ ವೇಳೆ ವ್ಯಾಪಾರ ಒಕ್ಕೂಟಗಳ ಬೇಡಿಕೆಗಳನ್ನು ತಿರಸ್ಕರಿಸಲಾಯಿತು. ಸೆಪ್ಟಂಬರ್ 2, 2016ರಂದು ನಾವು ಪ್ರತಿಭಟನೆ ನಡೆಸಿದೆವು. 2017ರ ನವೆಂಬರ್ 9ರಿಂದ 11ರ ವರೆಗೆ ಮೂರು ದಿನಗಳ ಧರಣಿಯನ್ನೂ ನಡೆಸಿದೆವು. ಆದರೆ ಸರಕಾರ ನಮ್ಮ ಜೊತೆ ಮಾತುಕತೆ ನಡೆಸಲು ಮುಂದಾಗಲಿಲ್ಲ. ಬದಲಿಗೆ ಏಕಪಕ್ಷೀಯವಾಗಿ ಕಾರ್ಮಿಕ ಸುಧಾರಣೆಗಳನ್ನು ಪರಿಚಯಿಸಲು ಮುಂದಾಯಿತು ಎಂದು ಕೌರ್ ಆರೋಪಿಸಿದ್ದಾರೆ.

ಇಂಟಕ್, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್‌ಇಡಬ್ಲೂಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಮುಂತಾದ ಕೇಂದ್ರ ವ್ಯಾಪಾರ ಒಕ್ಕೂಟಗಳು ಬಂದ್‌ನಲ್ಲಿ ಭಾಗವಹಿಸಲಿವೆ. ಸಂಘ ಪರಿವಾರದ ಅಂಗಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ ಮಾತ್ರ ಬಂದ್‌ನಿಂದ ಹೊರಗುಳಿಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X