Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 15 ದಿನಗಳ ಬಳಿಕ ಸಮುದ್ರಕ್ಕೆ ಇಳಿದ ಮಲ್ಪೆ...

15 ದಿನಗಳ ಬಳಿಕ ಸಮುದ್ರಕ್ಕೆ ಇಳಿದ ಮಲ್ಪೆ ಬೋಟುಗಳು: ಮೀನುಗಾರರಿಂದಲೇ ನಾಪತ್ತೆಯಾಗಿರುವ ಬೋಟಿಗಾಗಿ ಶೋಧ

ವಾರ್ತಾಭಾರತಿವಾರ್ತಾಭಾರತಿ7 Jan 2019 9:57 PM IST
share
15 ದಿನಗಳ ಬಳಿಕ ಸಮುದ್ರಕ್ಕೆ ಇಳಿದ ಮಲ್ಪೆ ಬೋಟುಗಳು: ಮೀನುಗಾರರಿಂದಲೇ ನಾಪತ್ತೆಯಾಗಿರುವ ಬೋಟಿಗಾಗಿ ಶೋಧ

ಉಡುಪಿ, ಡಿ.7: ಬೋಟು ಸಹಿತ ಏಳು ಮಂದಿ ಮೀನುಗಾರರು ನಾಪತ್ತೆ ಯಾಗಿರುವ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಮೀನುಗಾರಿಕೆ ಸ್ಥಗಿತಗೊಳಿಸಿ ಮಲ್ಪೆ ಬಂದರಿನಲ್ಲಿ ಲಂಗರು ಹಾಕಿದ್ದ ಆಳಸಮುದ್ರ ಮೀನುಗಾರಿಕಾ ಬೋಟುಗಳ ಪೈಕಿ ಕೆಲವು ಬೋಟುಗಳು ಇಂದು ರಾತ್ರಿಯಿಂದ ಸಮುದ್ರಕ್ಕೆ ಇಳಿದಿದ್ದು, ನಾಪತ್ತೆಯಾಗಿರುವ ಬೋಟು ಹಾಗೂ ಮೀನುಗಾರರನ್ನು ಹುಡುಕುವ ಕೆಲಸ ಮಾಡಲಿವೆ.

ಡಿ.15ರಿಂದ ಏಳು ಮಂದಿ ಮೀನುಗಾರರ ಸಹಿತ ಸುವರ್ಣ ತ್ರಿಭುಜ ಬೋಟು ಸಂಪರ್ಕಕ್ಕೆ ಸಿಗದೆ ಕಣ್ಮರೆಯಾಗಿರುವ ಹಿನ್ನೆಲೆಯಲ್ಲಿ ಡಿ.23ರಿಂದ ಮಲ್ಪೆಗೆ ಆಗಮಿಸಿದ್ದ ಬೋಟುಗಳು ಮರಳಿ ಮೀನುಗಾರಿಕೆಗೆ ತೆರಳದೆ ಬಂದರಿ ನಲ್ಲೇ ಲಂಗರು ಹಾಕಿದ್ದವು. ಹೀಗೆ ಸುಮಾರು 1100 ಆಳಸಮುದ್ರ ಮೀನುಗಾರಿಕಾ ಬೋಟುಗಳು ಹಾಗೂ 400 ಪರ್ಸಿನ್ ಬೋಟುಗಳು ಕಳೆದ 15 ದಿನಗಳಿಂದ ಮಲ್ಪೆ ಬಂದರಿನಲ್ಲೇ ಉಳಿದುಕೊಂಡಿದ್ದವು.

ಜ.6ರ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟದ ಬಳಿಕ ಸಂಜೆ ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜ.7ರಿಂದ ಬೋಟುಗಳು ಆಳಸಮುದ್ರ ಮೀನುಗಾರಿಕೆಗೆ ತೆರಳುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಅದರಂತೆ ಇಂದು ರಾತ್ರಿಯಿಂದ ಡಿಸೇಲ್, ಮಂಜುಗಡ್ಡೆ ತುಂಬಿಸಿ ಸಜ್ಜಾಗಿರುವ ಸುಮಾರು 300-400 ಆಳ ಸಮುದ್ರ ಮೀನುಗಾರಿಕಾ ಬೋಟುಗಳು ಮೀನುಗಾರಿಕೆಗೆ ಹೊರಟಿವೆ ಎಂದು ತಿಳಿದು ಬಂದಿದೆ.

ಈ ಎಲ್ಲ ಬೋಟುಗಳು ಸುವರ್ಣ ತ್ರಿಭುಜ ಬೋಟು ನಾಪತ್ತೆಯಾಗಿರುವ ಮಹಾರಾಷ್ಟ್ರ ರಾಜ್ಯದ ನಿಗದಿತ ಸ್ಥಳದ ಕಡೆಗೆ ಹೊರಡಲಿದ್ದು, ಮೊದಲ ಎರಡು ದಿನಗಳ ಕಾಲ ನಾಪತ್ತೆಯಾಗಿರುವ ಬೋಟು ಹಾಗೂ ಮೀನುಗಾರರಿಗಾಗಿ ಹುಡುಕಾಟ ನಡೆಸಲಿವೆ. ನಂತರ ಅಲ್ಲಿಂದ ಈ ಬೋಟುಗಳು ಮೀನುಗಾರಿಕೆ ಯನ್ನು ಮುಂದುವರಿಸಲಿದೆ. ಅದೇ ರೀತಿ ಪ್ರತಿದಿನ ಹೊರಡುವ 300-400 ರಷ್ಟು ಬೋಟುಗಳು ನಾಪತ್ತೆಯಾಗಿರುವ ಬೋಟನ್ನು ಹುಡುಕುವ ಕೆಲಸ ಮಾಡ ಲಿದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ತಿಳಿಸಿ ದ್ದಾರೆ.

ಈ ಬೋಟಿನವರಿಗೆ ನಾಪತ್ತೆಯಾಗಿರುವ ಬೋಟು ಹಾಗೂ ಮೀನುಗಾರರ ಬಗ್ಗೆ ಯಾವುದೇ ಸುಳಿವು ಸಿಕ್ಕಿದರೆ ವಯರ್‌ಲೆಸ್ ಮೂಲಕ ನಮಗೆ ಮಾಹಿತಿ ರವಾನಿಸಲಿದ್ದಾರೆ. ಹೀಗೆ ನಾಪತ್ತೆಯಾದ ನಮ್ಮವರಿಗಾಗಿ ನಿರಂತರ ಹುಡುಕುವ ಕೆಲಸ ಮಾಡಲಾಗುವುದು. ಹುಡುಕಾಟ ನಡೆಸುವ ಬೋಟುಗಳು ಸಮುದ್ರ ದಲ್ಲಿ ಸೂಕ್ತ ವಾತಾವರಣ ಇದ್ದರೆ ಮಾತ್ರ ಮೀನುಗಾರಿಕೆಯನ್ನು ನಡೆಸಲಿವೆ ಎಂದು ಅವರು ಹೇಳಿದರು.

25 ಮಂದಿಯ ಪ್ರತ್ಯೇಕ ಸಮಿತಿ ರಚನೆ

ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯೊಂದಿಗೆ ಸಂಪರ್ಕ ಸಾಧಿಸುವುದಕ್ಕಾಗಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ನೇತೃತ್ವದಲ್ಲಿ 25 ಮಂದಿಯ ಪ್ರತ್ಯೇಕ ಸಮಿತಿಯನ್ನು ರಚಿಸಲಾಗಿದೆ.

ಈ ಸಮಿತಿಯಲ್ಲಿ ತಾಂಡೇಲರ ಸಂಘ, ಆಳಸಮುದ್ರ ಮೀನುಗಾರರ ಸಂಘ, ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ಮೀನು ಗಾರ ಮುಖಂಡರುಗಳನ್ನು ಸೇರಿಸಿಕೊಳ್ಳಲಾಗಿದೆ. ಈ ಕಮಿಟಿಯು ನಾಪತ್ತೆ ಯಾಗಿರುವ ಬೋಟು ಹಾಗೂ ಮೀನುಗಾರರ ಪತ್ತೆಗಾಗಿ ಸರಕಾರ ಹಾಗೂ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಲಿದೆ. ಅಲ್ಲದೆ ಈ ಕುರಿತು ಮಾಹಿತಿ ಹಂಚಿಕೊಳ್ಳುವುದು ಮಾತ್ರವಲ್ಲದೆ ಈ ಸಂಬಂಧ ಪ್ರತಿಯೊಂದು ನಿರ್ಧಾರವನ್ನು ಈ ಸಮಿತಿ ತೆಗೆದುಕೊಳ್ಳಲಿದೆ ಎಂದು ಸತೀಶ್ ಕುಂದರ್ ತಿಳಿಸಿದ್ದಾರೆ.

ಮೀನುಗಾರರಿಂದ  ಪ್ರಧಾನಿ ಭೇಟಿ

ನಾಪತ್ತೆಯಾಗಿರುವ ಮೀನುಗಾರರ ಪತ್ತೆ ಸೇರಿದಂತೆ ಒಟ್ಟು ಐದು ಬೇಡಿಕೆ ಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಮೀನುಗಾರರ ಸಂಘದ ನೇತೃತ್ವದ ನಿಯೋಗ ಜ.8ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದೆ.

ಡಿಸೇಲ್ ತೆರಿಗೆ ವಿನಾಯಿತಿ, ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಆಧುನಿಕ ತಂತ್ರಜ್ಞಾನ ಬಳಕೆ, ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ, ಜಿಎಸ್‌ಟಿ ಮುಕ್ತ ಮೀನುಗಾರಿಕೆ, ರಿಯಾಯಿತಿ ದರದಲ್ಲಿ ನಾಡದೋಣಿಗೆ ಸೀಮೆಎಣ್ಣೆ ವಿತರಣೆ ಎಂಬ ಐದು ಬೇಡಿಕೆಗಳನ್ನು ನಿಯೋಗವು ಪ್ರಧಾನಿಗೆ ಸಲ್ಲಿಸಲಿದೆ.

ಈ ನಿಯೋಗದಲ್ಲಿ ಮಲ್ಪೆ ಮೀನುಗಾರ ಮುಖಂಡರಾದ ಸತೀಶ್ ಕುಂದರ್, ಯಶ್ಪಾಲ್ ಸುವರ್ಣ, ದಯಾನಂದ ಸುವರ್ಣ, ರಮೇಶ್ ಸುವರ್ಣ, ಕರುಣಾಕರ ಸಾಲ್ಯಾನ್, ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಕರಾವಳಿ ಜಿಲ್ಲೆಗಳ ಸಂಸದರು ಭಾಗವಹಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X