Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಕ್ರಿಕೆಟ್: ಸಂಕಷ್ಟದಲ್ಲಿ ಕರ್ನಾಟಕ

ರಣಜಿ ಕ್ರಿಕೆಟ್: ಸಂಕಷ್ಟದಲ್ಲಿ ಕರ್ನಾಟಕ

ರಣಜಿ ಟ್ರೋಫಿ

ವಾರ್ತಾಭಾರತಿವಾರ್ತಾಭಾರತಿ7 Jan 2019 11:27 PM IST
share
ರಣಜಿ ಕ್ರಿಕೆಟ್: ಸಂಕಷ್ಟದಲ್ಲಿ ಕರ್ನಾಟಕ

►ಬರೋಡಾಗೆ ಪ್ರ.ಇನಿಂಗ್ಸ್ ಮುನ್ನಡೆ

►ಮೊದಲ ದಿನ 22 ವಿಕೆಟ್ ಪತನ

ವಡೋದರಾ, ಜ.7: ಕ್ವಾರ್ಟರ್‌ಫೈನಲ್ ಪ್ರವೇಶ ನಿರ್ಣಯಿಸುವ ಪ್ರಮುಖ ಪಂದ್ಯದಲ್ಲಿ ಕರ್ನಾಟಕ ಹಿನ್ನಡೆ ಅನುಭವಿಸಿದೆ. ಬರೋಡಾ ವಿರುದ್ಧ ಸೋಮವಾರ ಆರಂಭಗೊಂಡ ರಣಜಿ ಟೂರ್ನಿಯ ‘ಎ’ ಗುಂಪಿನ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಕರ್ನಾಟಕ 112 ರನ್ ಗಳಿಸಿ ಸರ್ವಪತನ ಕಂಡಿದೆ. ಬರೋಡಾ 223 ರನ್ ಗಳಿಸಿ ಆಲೌಟ್ ಆಗಿದೆ. ತನ್ನ ಎರಡನೇ ಇನಿಂಗ್ಸ್ ಆರಂಭಿಸಿದ ಕರ್ನಾಟಕ 13 ರನ್‌ಗೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿದೆ.

ಇಲ್ಲಿಯ ಮೋತಿಬಾಗ್ ಕ್ರೀಡಾಂಗಣದಲ್ಲಿ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕರ್ನಾಟಕ ಪ್ರಥಮ ಇನಿಂಗ್ಸ್‌ನ ಆರಂಭದಲ್ಲೇ ಆಘಾತಕ್ಕ್ಕೆ ಒಳಗಾಯಿತು. ಆರ್.ಸಮರ್ಥ್(8), ನಿಶ್ಚಲ್(0), ಕೆ.ಸಿದ್ಧಾರ್ಥ್(4) ಹಾಗೂ ಕರುಣ್ ನಾಯರ್(12) ತಂಡದ ಖಾತೆಗೆ 31 ರನ್ ಸೇರುವಷ್ಟರಲ್ಲಿ ಪೆವಿಲಿಯನ್ ಸೇರಿದ್ದರು. ಈ ಹಂತದಲ್ಲಿ ನಾಯಕ ಮನೀಷ್ ಪಾಂಡೆ(43) ತಂಡವನ್ನು ಆಧರಿಸುವ ಪ್ರಯತ್ನ ಮಾಡಿದರು. ವಿಕೆಟ್ ಕೀಪರ್ ದಾಂಡಿಗ ಶರತ್(30) ನಾಯಕನಿಗೆ ಅಲ್ಪ ಸಾಥ್ ನೀಡಿದರು. ಇವರಿಬ್ಬರನ್ನು ಹೊರತುಪಡಿಸಿ ತಂಡದ ಇತರ ಆಟಗಾರರು ಸಂಪೂರ್ಣ ವಿಫಲರಾದರು. ತಂಡದ ನಾಲ್ವರು ಆಟಗಾರರು ಸೊನ್ನೆ ಸುತ್ತಿದ್ದು ತಂಡಕ್ಕೆ ದುಬಾರಿಯಾಯಿತು. ಅಂತಿಮವಾಗಿ ಪ್ರವಾಸಿಗರು 112 ರನ್‌ಗೆ ಗಂಟುಮೂಟೆ ಕಟ್ಟಿದರು.

ಬರೋಡಾ ಪರ ಲುಕ್ಮಾನ್ ಮೆರಿವಾಲಾ ಹಾಗೂ ಭಾರ್ಗವ್ ಭಟ್ ತಲಾ 3 ವಿಕೆಟ್ ಪಡೆದು ಯಶಸ್ವಿ ಬೌಲರ್‌ಗಳೆನಿಸಿದರು.

ಕರ್ನಾಟಕದ ಅಲ್ಪ ಮೊತ್ತಕ್ಕೆ ಪ್ರತಿಯಾಗಿ ತನ್ನ ಪ್ರಥಮ ಇನಿಂಗ್ಸ್ ಆರಂಭಿಸಿದ ಬರೋಡಾಗೆ ವಿಷ್ಣು ಸೋಲಂಕಿ(69), ದೀಪಕ್ ಹೂಡಾ(51) ಹಾಗೂ ಯೂಸುಫ್ ಪಠಾಣ್(ಅಜೇಯ 36) ಉತ್ತಮ ಮೊತ್ತ ಜಮೆ ಮಾಡಲು ನೆರವಾದರು. ಬರೋಡಾ ಅಂತಿಮವಾಗಿ 223 ರನ್ ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು.ಕರ್ನಾಟಕದ ಪರ ಶುಭಾಂಗ್ ಹೆಗ್ಡೆ ಹಾಗೂ ಶ್ರೇಯಸ್ ಗೋಪಾಲ್ ತಲಾ 4 ವಿಕೆಟ್ ಪಡೆದರು.

ಬಳಿಕ ಎರಡನೇ ಇನಿಂಗ್ಸ್ ಆರಂಭಿಸಿರುವ ಕರ್ನಾಟಕ 13 ರನ್ ಗೆ 2 ವಿಕೆಟ್ ಕಳೆದುಕೊಂಡಿದೆ. ಕೆ.ಸಿದ್ಧಾರ್ಥ್(11) ಹಾಗೂ ಕರುಣ್ ನಾಯರ್(2) ಕ್ರೀಸ್ ಕಾಯ್ದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X