ಮೇಲ್ಜಾತಿ ಬಡವರಿಗೆ ಮೀಸಲಾತಿ: ಕೇಂದ್ರ ಸರಕಾರದ ತೀರ್ಮಾನಕ್ಕೆ ದೇವೇಗೌಡ ಬೆಂಬಲ
![ಮೇಲ್ಜಾತಿ ಬಡವರಿಗೆ ಮೀಸಲಾತಿ: ಕೇಂದ್ರ ಸರಕಾರದ ತೀರ್ಮಾನಕ್ಕೆ ದೇವೇಗೌಡ ಬೆಂಬಲ ಮೇಲ್ಜಾತಿ ಬಡವರಿಗೆ ಮೀಸಲಾತಿ: ಕೇಂದ್ರ ಸರಕಾರದ ತೀರ್ಮಾನಕ್ಕೆ ದೇವೇಗೌಡ ಬೆಂಬಲ](https://www.varthabharati.in/sites/default/files/images/articles/2019/01/8/171844.jpg)
ಬೆಂಗಳೂರು, ಜ. 8: ಮೇಲ್ಜಾತಿ ಬಡವರಿಗೆ ಉದ್ಯೋಗ ಮತ್ತು ಉನ್ನತ ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರಕಾರದ ಮಹ ತ್ವಾಕಾಂಕ್ಷಿ ವಿಧೇಯಕವನ್ನು ಬೆಂಬಲಿಸುತ್ತೇವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ತಿಳಿಸಿದ್ದಾರೆ.
ಮಂಗಳವಾರ ಈ ಸಂಬಂಧ ಟ್ವೀಟ್ ಮಾಡಿರುವ ದೇವೇಗೌಡ, ಸಮಾಜದ ಎಲ್ಲ ವರ್ಗಗಳ ದುರ್ಬಲರ ಏಳಿಗೆಗೆ ಜೆಡಿಎಸ್ ಪಕ್ಷ ಬದ್ಧವಾಗಿದೆ. ನಾವು ಈ ವಿಧೇಯಕವನ್ನು ಬೆಂಬಲಿಸುತ್ತೇವೆ ಎಂದು ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
Next Story