Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿ ರಂಗಾಯಣಕ್ಕೆ ಮೈಮ್ ರಮೇಶ್

ಕರಾವಳಿ ರಂಗಾಯಣಕ್ಕೆ ಮೈಮ್ ರಮೇಶ್

ವಾರ್ತಾಭಾರತಿವಾರ್ತಾಭಾರತಿ8 Jan 2019 10:06 PM IST
share
ಕರಾವಳಿ ರಂಗಾಯಣಕ್ಕೆ ಮೈಮ್ ರಮೇಶ್

ಮಂಗಳೂರು, ಜ.8: ಉಡುಪಿಯಲ್ಲಿ ಸ್ಥಾಪಿಸಲು ಉದ್ದೇಶಿಸಿದ ಕರಾವಳಿ ರಂಗಾಯಣ ನಿರ್ದೇಶಕರಾಗಿ ಮೈಸೂರು ರಂಗಾಯಣ ರೆಪರ್ಟರಿಯ ಹಿರಿಯ ಕಲಾವಿದ, ರಂಗ ನಿರ್ದೇಶಕ ಮೈಮ್ ರಮೇಶ್ ಹೆಸರು ಮಂಚೂಣಿಯಲ್ಲಿದೆ.

ತಡವಾಗಿಯಾದರೂ ಕರಾವಳಿಯ ರಂಗಾಯಣವನ್ನು ಉಡುಪಿಯಲ್ಲಿ ಸ್ಥಾಪಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ನಿರ್ದೇಶಕನ ಸ್ಥಾನಕ್ಕೆ ಮೂರು ಮಂದಿ ರಂಗಕರ್ಮಿಗಳ ಪಟ್ಟಿ ಸಿದ್ಧವಾಗಿದೆ. ಬಿ.ವಿ.ಕಾರಂತರು 1989ರಲ್ಲಿ ಮೈಸೂರಿನಲ್ಲಿ ರಂಗಾಯಣ ಸ್ಥಾಪಿಸಿದಾಗ ಆರಂಭದಲ್ಲಿಯೇ ರಂಗಾಯಣದ ನಾಲ್ಕು ರೆಪರ್ಟರಿಗಳನ್ನು ಸ್ಥಾಪಿಸುವ ಉದ್ದೇಶ ಹೊಂದಿದ್ದರು. ಅವುಗಳೆಂದರೆ, ಮೈಸೂರು ರಂಗಾಯಣ, ಕರಾವಳಿ ರಂಗಾಯಣ, ಮಲೆನಾಡು ರಂಗಾಯಣ, ಮತ್ತು ಹೈದರಾಬಾದ್-ಕರ್ನಾಟಕ ರಂಗಾಯಣ. ಅವುಗಳನ್ನು ಸ್ಥಾಪಿಸುವ ಮೂಲಕ ಪ್ರಾದೇಶಿಕ ಭಾಷೆ ಮತ್ತು ಸಂಸ್ಕೃತಿಯ ಸೊಗಡನ್ನು ಜೀವಂತವಾಗಿಡುವ ಪ್ರಯತ್ನ ಇದಾಗಿದೆ. ಶಿವಮೊಗ್ಗ, ಧಾರವಾಡ, ಮತ್ತು ಕಲಬುರಗಿ ರಂಗಾಯಣ ಕೇಂದ್ರಗಳು ಈಗಾಗಲೇ ಕಾರ್ಯಾರಂಭ ಮಾಡಿವೆ. ಕರಾವಳಿಯ ರಂಗಾಯಣವನ್ನು ಉಡುಪಿಯಲ್ಲಿ ಸ್ಥಾಪಿಸಿಲು ರಂಗಾಯಣ ಸಂಬಂಧಿಸಿದ ರಂಗಸಮಾಜ ನಿರ್ಧರಿಸಿದೆ.

ಬಿ.ವಿ.ಕಾರಂತರ ಹುಟ್ಟೂರು ಬಂಟ್ವಾಳದ ಮಂಚಿ ಅಥವಾ ಮಂಗಳೂರಿನಲ್ಲಿ ಕರಾವಳಿ ರಂಗಾಯಣ ಸ್ಥಾಪಿಸುವ ಇರಾದೆ ಸರಕಾರದಾಗಿತ್ತು. ಈ ನಿಟ್ಟಿನಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರು ಕಳೆದ ವರ್ಷ ಪಿಲಕುಳ ಮತ್ತು ಕುಕ್ಕಾಜೆ-ಮಂಚಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು.
ದ.ಕ. ಜಿಲ್ಲೆಯ ರಂಗಾಸಕ್ತರಿಂದ ಹೆಚ್ಚಿನ ಒತ್ತಾಯ ಇಲ್ಲದಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊಂದಿದ್ದ ಸಚಿವೆ ಜಯಮಾಲ ಕರಾವಳಿ ರಂಗಾಯಣಕ್ಕೆ ಉಡುಪಿಯನ್ನು ಆಯ್ಕೆ ಮಾಡಿದ್ದರು. ಆದರೆ ನಿರ್ದೇಶಕನ ಸ್ಥಾನಕ್ಕೆ ಮೂಲತಃ ಮಂಗಳೂರಿನವರಾದ ಮೈಮ್ ರಮೇಶ್ ಹೆಸರು ಮಂಚೂಣಿಯಲ್ಲಿದೆ. ಇವರೊಂದಿಗೆ ಸುರೇಶ್ ಆನಗಳ್ಳಿ ಮತ್ತು ವಾಲ್ಟರ್ ಹೆಸರುಗಳೂ ಇವೆ.

ಸುಮಾರು 48 ವರ್ಷಗಳಿಂದ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಮೈಮ್ ರಮೇಶ್ 1989ರಿಂದ ಮೈಸೂರು ರಂಗಾಯಣದಲ್ಲಿ ಕಲಾವಿದ ನಿರ್ದೇಶಕರಾಗಿದ್ದಾರೆ.

‘ಥ್ಯಾಂಕ್ಯೂ ಮಿಸ್ಟರ್ ಗ್ಲಾಡ್’, ‘ಧರ್ಮಾಪುರಿಯ ಶ್ವೇತವೃತ್ತ’, ‘ಡಾಲ್‌ಹೌಸ್’, ‘ಸೀತಾಮಾಧವನ ಸಲ್ಲಾಪ’, ‘ತ್ರಿ ಪೆನ್ನಿ ಓಪೇರಾ’, ‘ಕತ್ತಲೆದಾರಿದೊರೆ’ ಇವರಿಗೆ ಹೆಸರು ತಂದು ಕೊಟ್ಟ ನಾಟಕಗಳು. ಮಂಗಳೂರಿನಲ್ಲಿ ‘ಅಭಿವ್ಯಕ್ತಿ’, ಅರಸೀಕೆರೆಯಲ್ಲಿ ‘ಅಭಿನಯ’ ಎಂಬ ರಂಗತಂಡವನ್ನು ಹುಟ್ಟುಹಾಕಿದರು. ಮೈಸೂರಿನಲ್ಲಿ ಪ್ರಾರಂಭಿಸಿದ ಜಿಪಿಐಆರ್ ರಂಗ ಸಂಸ್ಥೆಯಿಂದ ಸಾಕಷ್ಟು ಯುವಪ್ರತಿಭೆಗಳು ಇಂದು ಸಿನಿಮಾ, ಕಿರುತೆರೆಯಲ್ಲಿ ಹೆಸರು ಮಾಡುತ್ತಿವೆ.
ಯಕ್ಷಗಾನ ಕಲಾವಿದನಾಗಿ ತಮ್ಮ 12ನೇ ವಯಸ್ಸಿನಿಂದಲೇ ಬಣ್ಣ ಹಚ್ಚಲು ಶುರು ಮಾಡಿದ ಮೈಮ್ ರಮೇಶ್ ತುಳು ರಂಗಭೂಮಿ ಜತೆಗೆ ಆಧುನಿಕ ರಂಗಭೂಮಿಯಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಅಪರೂಪದ ಕಲಾವಿದರು. ರಂಗಕರ್ಮಿ ಪ್ರಸನ್ನ ಅವರು ಬೆಂಗಳೂರಿನಲ್ಲಿ ಆರಂಭಿಸಿದ ‘ಸಮುದಾಯ’ದಲ್ಲೂ ಮೈಮ್ ರಮೇಶ್ ಗುರುತಿಸಿಕೊಂಡಿದ್ದಾರೆ.

ಇಲ್ಲಿಯವರೆಗೂ 60ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶನ ಮಾಡಿದ್ದಾರೆ. ರಂಗಾಯಣದ ಬಹುತೇಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಶೇಕ್ಸ್ ಪಿಯರ್ ರಚನೆಯ ಜೂಲಿಯಸ್ ಸೀಸರ್, ಮ್ಯಾಕ್‌ಬೆತ್, ಓಥೆಲೋ, ಕಿಂಗ್‌ಲಿಯರ್ ಹಾಗೂ ಹ್ಯಾಮ್ಲೆಟ್ ನಾಟಕಗಳಲ್ಲಿ ಅಭಿನಯಿಸಿದ ಹೆಗ್ಗಳಿಕೆ ಇವರದು. 2016ರಲ್ಲಿ ಚಂದನ ಪ್ರಶಸ್ತಿ ಪಡೆದಿದ್ದರು. ದಕ್ಷಿಣ ಭಾರತದ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದ ‘ಚೆನ್ನೈ ಕಲೈಸೆಲ್ವಂ’ ಪ್ರಶಸ್ತಿಯೂ ರಮೇಶ್ ಅವರಿಗೆ ಒಲಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X