Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬುಮ್ರಾಗೆ ವಿಶ್ರಾಂತಿ, ಮುಹಮ್ಮದ್...

ಬುಮ್ರಾಗೆ ವಿಶ್ರಾಂತಿ, ಮುಹಮ್ಮದ್ ಸಿರಾಜ್‌ಗೆ ಅವಕಾಶ

ಆಸ್ಟ್ರೇಲಿಯ, ಕಿವೀಸ್ ವಿರುದ್ಧ ಸರಣಿ

ವಾರ್ತಾಭಾರತಿವಾರ್ತಾಭಾರತಿ8 Jan 2019 11:49 PM IST
share
ಬುಮ್ರಾಗೆ ವಿಶ್ರಾಂತಿ, ಮುಹಮ್ಮದ್ ಸಿರಾಜ್‌ಗೆ ಅವಕಾಶ

ಸಿಡ್ನಿ, ಜ.8: ಭರ್ಜರಿ ಫಾರ್ಮ್‌ನಲ್ಲಿರುವ ಭಾರತದ ವೇಗದ ಬೌಲರ್ ಜಸ್‌ಪ್ರಿತ್ ಬುಮ್ರಾರನ್ನು ಮುಂಬರುವ ಆಸ್ಟ್ರೇಲಿಯ ವಿರುದ್ಧ ಏಕದಿನ ಸರಣಿ ಹಾಗೂ ನ್ಯೂಝಿಲೆಂಡ್ ವಿರುದ್ಧ ಸೀಮಿತ ಓವರ್ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಈ ಎರಡು ಸರಣಿಯಲ್ಲಿ ಬುಮ್ರಾರಿಂದ ತೆರವಾದ ಸ್ಥಾನಕ್ಕೆ ಹೈದರಾಬಾದ್ ಯುವ ವೇಗಿ ಮುಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಮುಂದಿನ ತಿಂಗಳು ನ್ಯೂಝಿಲೆಂಡ್‌ನಲ್ಲಿ ನಡೆಯಲಿರುವ ಟಿ-20 ಸರಣಿಗೆ ಸಿದ್ಧ್ದಾರ್ಥ್ ಕೌಲ್ ಸ್ಥಾನ ಪಡೆದಿದ್ದಾರೆ.

ಬುಮ್ರಾ ಆಸೀಸ್ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಒಟ್ಟು 21 ವಿಕೆಟ್‌ಗಳನ್ನು ಪಡೆದು ಆಸ್ಟ್ರೇಲಿಯದ ಸ್ಪಿನ್ನರ್ ನಥಾನ್ ಲಿಯೊನ್‌ರೊಂದಿಗೆ ಸರಣಿಯ ಜಂಟಿ ಗರಿಷ್ಠ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಬೌಲರ್‌ನ ಕೆಲಸದ ಒತ್ತಡವನ್ನು ದೃಷ್ಟಿಯಲ್ಲಿಟ್ಟುಕೊಂಡು ಸ್ವದೇಶದಲ್ಲಿ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯುವ ಆಸ್ಟ್ರೇಲಿಯ ವಿರುದ್ಧ ಏಕದಿನ ಹಾಗೂ ಟಿ-20 ಸರಣಿಯ ಹಿನ್ನೆಲೆಯಲ್ಲಿ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಬುಮ್ರಾ ಆಸೀಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಒಟ್ಟು 157 ಓವರ್ ಬೌಲಿಂಗ್ ಮಾಡಿದ್ದರು. ಇನ್ನಷ್ಟೇ ಏಕದಿನಕ್ಕೆ ಕಾಲಿಡಬೇಕಾಗಿರುವ ಮುಹಮ್ಮದ್ ಸಿರಾಜ್ ಅವರು ಆಸ್ಟ್ರೇಲಿಯ ಹಾಗೂ ನ್ಯೂಝಿಲೆಂಡ್ ಪ್ರವಾಸ ಸರಣಿಗೆ ಆಯ್ಕೆಯಾಗಿದ್ದಾರೆ. ಕಿವೀಸ್ ವಿರುದ್ಧದ 3 ಪಂದ್ಯಗಳ ಟಿ-20 ಸರಣಿಗೆ ಪಂಜಾಬ್ ವೇಗಿ ಸಿದ್ಧಾರ್ಥ್ ಕೌಲ್‌ಗೆ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಕೌಲ್ ಈತನಕ 3 ಏಕದಿನ ಹಾಗೂ 2 ಟಿ-20 ಆಡಿದ್ದಾರೆ. ಈಗ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಪಂಜಾಬ್ ಪರ 5 ಪಂದ್ಯಗಳಲ್ಲಿ 22 ವಿಕೆಟ್ ಉರುಳಿಸಿದ್ದಾರೆ.

ಭಾರತ ಶನಿವಾರದಿಂದ ಆಸೀಸ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಆ ನಂತರ 5 ಪಂದ್ಯಗಳ ಏಕದಿನ ಹಾಗೂ 3 ಪಂದ್ಯಗಳ ಟಿ-20 ಸರಣಿಯನ್ನಾಡಲು ನ್ಯೂಝಿಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದೆ. ಕಿವೀಸ್ ವಿರುದ್ಧ ಸರಣಿಯು ಜ.23ಕ್ಕೆ ಆರಂಭವಾಗಲಿದೆ.

 ಆಸ್ಟ್ರೇಲಿಯ,ನ್ಯೂಝಿಲೆಂಡ್ ವಿರುದ್ಧ ಸರಣಿಗೆ ಏಕದಿನ ತಂಡ

► ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪ ನಾಯಕ),ಕೆಎಲ್ ರಾಹುಲ್, ಶಿಖರ್ ಧವನ್, ಅಂಬಟಿ ರಾಯುಡು, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಎಂಎಸ್ ಧೋನಿ(ವಿಕೆಟ್‌ಕೀಪರ್)ಹಾರ್ದಿಕ್ ಪಾಂಡ್ಯ, ಕುಲ್‌ದೀಪ್ ಯಾದವ್, ಯಜುವೇಂದ್ರ ಚಹಾಲ್,ರವೀಂದ್ರ ಜಡೇಜ, ಭುವನೇಶ್ವರ ಕುಮಾರ್, ಮುಹಮ್ಮದ್ ಸಿರಾಜ್, ಖಲೀಲ್ ಅಹ್ಮದ್, ಮುಹಮ್ಮದ್ ಶಮಿ.

► ಟಿ-20 ತಂಡ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪ ನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಎಂ.ಎಸ್. ಧೋನಿ(ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಕುಲ್‌ದೀಪ್ ಯಾದವ್, ಯಜುವೇಂದ್ರ ಚಹಾಲ್, ಭುವನೇಶ್ವರ ಕುಮಾರ್, ಮುಹಮ್ಮದ್ ಸಿರಾಜ್, ಖಲೀಲ್ ಅಹ್ಮದ್, ಸಿದ್ಧಾರ್ಥ್ ಕೌಲ್.

ಸಿರಾಜ್ ಸಾಧನೆ

 2018ರ ಮಾರ್ಚ್‌ನಲ್ಲಿ ಶ್ರೀಲಂಕಾದಲ್ಲಿ ಟಿ-20 ಪಂದ್ಯಕ್ಕೆ ಕಾಲಿಟ್ಟಿರುವ ಸಿರಾಜ್ ಜುಲೈನಿಂದ ಭಾರತ ‘ಎ’ ತಂಡದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. 8 ಪಂದ್ಯಗಳಲ್ಲಿ ಒಟ್ಟು 47 ವಿಕೆಟ್ ಉರುಳಿಸಿದ್ದಾರೆ. ವೆಸ್ಟ್‌ಇಂಡೀಸ್ ‘ಎ’ ವಿರುದ್ಧ ಟಾಂಟನ್‌ನಲ್ಲಿ 132ಕ್ಕೆ 8 ವಿಕೆಟ್ ಪಡೆದಿದ್ದರು. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ನಡೆದ ದ.ಆಫ್ರಿಕ ‘ಎ’ ವಿರುದ್ಧ 14 ವಿಕೆಟ್ ಕಬಳಿಸಿದ್ದರು. ಇತ್ತೀಚೆಗೆ ಭಾರತ ‘ಎ’ ತಂಡದೊಂದಿಗೆ ಕಿವೀಸ್‌ಗೆ ತೆರಳಿದ್ದ ಸಿರಾಜ್ 3 ಪ್ರಥಮ ದರ್ಜೆ ಪಂದ್ಯಗಳಲ್ಲಿ 3 ಇನಿಂಗ್ಸ್‌ಗಳಲ್ಲಿ 7 ವಿಕೆಟ್ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X