ಕಾರು ಢಿಕ್ಕಿ: ಸೈಕಲ್ ಸವಾರ ಮೃತ್ಯು
ಬೈಂದೂರು, ಜ.9: ಗೋಳಿಹೊಳೆ ಗ್ರಾಮದ ಅರೆಶಿರೂರು ಬಸ್ ನಿಲ್ದಾಣದ ಬಳಿ ಜ.9ರಂದು ಬೆಳಗ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ಸೈಕಲ್ನೊಂದಿಗೆ ನಿಂತಿದ್ದ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಅರೆಶಿರೂರಿನ ಬಾಲಯ್ಯ ಶೇರುಗಾರ ಎಂದು ಗುರುತಿಸಲಾಗಿದೆ. ಇವರು ದಾಟಲು ರಸ್ತೆಯ ಬದಿ ಸೈಕಲ್ ನಿಲ್ಲಿಸಿಕೊಂಡು ನಿಂತಿರುವಾಗ ಯಡ್ತರೆ ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಬಾಲಯ್ಯ ಬೈಂದೂರು ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತ್ಯಪಟ್ಟರು.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story