Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ಅಗ್ರಸ್ಥಾನಕ್ಕೇರುವ ಅವಕಾಶ

ಭಾರತಕ್ಕೆ ಅಗ್ರಸ್ಥಾನಕ್ಕೇರುವ ಅವಕಾಶ

ಐಸಿಸಿ ಏಕದಿನ ರ್ಯಾಂಕಿಂಗ್‌

ವಾರ್ತಾಭಾರತಿವಾರ್ತಾಭಾರತಿ9 Jan 2019 11:54 PM IST
share

ದುಬೈ,ಜ.9: ಐಸಿಸಿ ರ್ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ಜಸ್‌ಪ್ರಿತ್ ಬುಮ್ರಾ ಕ್ರಮವಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಮುಂದಿನ ದಿನಗಳಲ್ಲಿ 8 ಪಂದ್ಯಗಳನ್ನು ಆಡಲಿರುವ ಭಾರತಕ್ಕೆ ನಂ.1 ಸ್ಥಾನದಲ್ಲಿರುವ ಇಂಗ್ಲೆಂಡ್‌ಗೆ ನಿಕಟ ಪೈಪೋಟಿ ನೀಡುವ ಅವಕಾಶವಿದೆ.

ಭಾರತ ತಂಡ ಆಸ್ಟ್ರೇಲಿಯ ವಿರುದ್ಧ 3 ಪಂದ್ಯಗಳನ್ನು ಹಾಗೂ ನ್ಯೂಝಿಲೆಂಡ್ ವಿರುದ್ಧ 5 ಪಂದ್ಯಗಳ ಸರಣಿಯನ್ನು ಆಡಲಿದೆ. ಒಂದು ವೇಳೆ ಭಾರತ ಎಲ್ಲ 8 ಪಂದ್ಯಗಳನ್ನು ಜಯಿಸಲು ಸಮರ್ಥವಾದರೆ 125 ಅಂಕ ಗಳಿಸಲಿದೆ. ಇಂಗ್ಲೆಂಡ್‌ಗಿಂತ ಒಂದು ಅಂಕ ಹಿಂದುಳಿಯಲಿದೆ.

ಪ್ರಸ್ತುತ ಇಂಗ್ಲೆಂಡ್ 126 ಅಂಕ ಗಳಿಸಿ ತಂಡಗಳ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲಿದೆ. 121 ಅಂಕ ಗಳಿಸಿರುವ ಭಾರತ ಎರಡನೇ ಸ್ಥಾನದಲ್ಲಿದೆ. ಬ್ಯಾಟಿಂಗ್ ರ್ಯಾಂಕಿಂಗ್‌ನಲ್ಲಿ ಕೊಹ್ಲಿ(1) ಹಾಗೂ ರೋಹಿತ್ ಶರ್ಮಾ(2)ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಬುಮ್ರಾ ಬೌಲಿಂಗ್ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲಿದ್ದು, ಅಫ್ಘಾನಿಸ್ತಾನದ ರಶೀದ್ ಖಾನ್ ಹಾಗೂ ಕುಲ್‌ದೀಪ್ ಯಾದವ್ ಕ್ರಮವಾಗಿ 2 ಹಾಗೂ 3ನೇ ಸ್ಥಾನದಲ್ಲಿದ್ದಾರೆ.

ಭಾರತದ ಇತರ ಆಟಗಾರರಾದ ಶಿಖರ್ ಧವನ್ 9ನೇ ಸ್ಥಾನದಲ್ಲಿದ್ದರೆ, ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಇಂಗ್ಲೆಂಡ್‌ನ ಆದಿಲ್ ರಶೀದ್‌ರೊಂದಿಗೆ 6ನೇ ಸ್ಥಾನ ಹಂಚಿಕೊಂಡಿದ್ದಾರೆ.

ಇತರ ತಂಡಗಳ ಆಟಗಾರರು ರ್ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದಾರೆ.

ನ್ಯೂಝಿಲೆಂಡ್‌ನ ಲೆಗ್ ಸ್ಪಿನ್ನರ್ ಐಶ್ ಸೋಧಿ ಹಾಗೂ ವೇಗದ ಬೌಲರ್ ಫರ್ಗ್ಯುಸನ್ ಶ್ರೀಲಂಕಾ ವಿರುದ್ಧ ಮಂಗಳವಾರ ಕೊನೆಗೊಂಡ ಸ್ವದೇಶಿ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ 31ನೇ ಸ್ಥಾನ ಹಂಚಿಕೊಂಡಿದ್ದಾರೆ. ಸರಣಿಯಲ್ಲಿ 8 ವಿಕೆಟ್ ಪಡೆದಿರುವ ಸೋಧಿ 26 ಸ್ಥಾನ ಭಡ್ತಿ ಪಡೆದರೆ, 7 ವಿಕೆಟ್ ಪಡೆದಿರುವ ಫರ್ಗ್ಯುಸನ್ 12 ಸ್ಥಾನ ಭಡ್ತಿ ಪಡೆದರು. ರಾಸ್ ಟೇಲರ್ ಹಾಗೂ ಮಾರ್ಟಿನ್ ಗಪ್ಟಿಲ್ ಲಂಕಾ ವಿರುದ್ಧ ಕ್ರಮವಾಗಿ 281 ಹಾಗೂ 153 ರನ್ ಗಳಿಸಿದ ಕಾರಣ 3ನೇ ಹಾಗೂ 14ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ 11ನೇ ಸ್ಥಾನಕ್ಕೆ ಜಾರಿದ್ದಾರೆ.

ಟೀಮ್ ರ್ಯಾಂಕಿಂಗ್‌ನಲ್ಲಿ ನ್ಯೂಝಿಲೆಂಡ್ 3ನೇ ಸ್ಥಾನ ಉಳಿಸಿಕೊಂಡಿದೆ. ಒಂದು ಅಂಕ ಗಳಿಸಿ ಒಟ್ಟು 113 ಪಾಯಿಂಟ್ ಪಡೆದಿದೆ. ಶ್ರೀಲಂಕಾ 8ನೇ ಸ್ಥಾನ ಉಳಿಸಿಕೊಂಡಿದ್ದರೂ ಒಂದು ಅಂಕ ಕಳೆದುಕೊಂಡು 78 ಅಂಕಕ್ಕೆ ಕುಸಿದಿದೆ.

ಮೇ 30 ರಿಂದ ಜು.14ರ ತನಕ ಇಂಗ್ಲೆಂಡ್‌ನಲ್ಲಿ ನಡೆಯುವ ಐಸಿಸಿ ವಿಶ್ವಕಪ್‌ಗೆ ತಯಾರಿ ನಡೆಸುತ್ತಿರುವ ಎಲ್ಲ ತಂಡಗಳು ರ್ಯಾಂಕಿಂಗ್‌ನಲ್ಲಿ ಪ್ರಗತಿ ಸಾಧಿಸಲು ಎದುರು ನೋಡುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X