Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾಳೆ ಅತ್ತಿಬೆಲೆ ಬಂದ್: ವಾಟಾಳ್ ನಾಗರಾಜ್

ನಾಳೆ ಅತ್ತಿಬೆಲೆ ಬಂದ್: ವಾಟಾಳ್ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ10 Jan 2019 7:55 PM IST
share
ನಾಳೆ ಅತ್ತಿಬೆಲೆ ಬಂದ್: ವಾಟಾಳ್ ನಾಗರಾಜ್

ಬೆಂಗಳೂರು, ಜ.10: ಮೇಕೆದಾಟು ಯೋಜನೆ ವಿರೋಧಿಸುತ್ತಿರುವ ತಮಿಳುನಾಡು ಸರಕಾರದ ವಿರುದ್ಧ 12ರಂದು ಬೆಳಗ್ಗೆ 11.30ಕ್ಕೆ ತಮಿಳುನಾಡಿನ ಗಡಿಭಾಗ ಅತ್ತಿಬೆಲೆ ಬಂದ್ ಮಾಡಲಾಗುವುದು ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ತಮಿಳುನಾಡು ಸರಕಾರ ಹಾಗೂ ಅಲ್ಲಿನ ಜನರು ಅಡ್ಡಿಪಡಿಸುತ್ತಿರುವುದು ಸರಿಯಲ್ಲ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಆದರೂ ಕ್ಯಾತೆ ತೆಗೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯಾವುದೇ ಕಾರಣಕ್ಕೂ ತಮಿಳುನಾಡು ಸರಕಾರವಾಗಲಿ, ಅಲ್ಲಿನ ಮುಖಂಡರಾಗಲಿ ಈ ಯೋಜನೆಗೆ ಅಡ್ಡಿಪಡಿಸಬಾರದು. ರಾಜ್ಯ ಸರಕಾರ ಕೂಡಲೇ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು. ನೀಲನಕ್ಷೆ ತಯಾರಿಸಬೇಕು. ಯೋಜನೆಗೆ ಎಷ್ಟು ಹಣ ವೆಚ್ಚವಾಗುತ್ತದೆ ಎಂಬುದನ್ನು ನಿಗದಿಪಡಿಸಬೇಕು. ಎಷ್ಟು ವರ್ಷದಲ್ಲಿ ಪೂರ್ಣಗೊಳ್ಳುತ್ತದೆ ಎಂಬುದನ್ನು ಪ್ರಕಟಿಸಬೇಕು ಹಾಗೂ ಇದಕ್ಕಾಗಿ ವಿಶೇಷ ಕಾರ್ಯತಂತ್ರ ರೂಪಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಸರಕಾರ ಈ ಯೋಜನೆ ಅನುಷ್ಠಾನದ ವಿಷಯದಲ್ಲಿ ಮೃದು ಧೋರಣೆ ಅನುಸರಿಸುತ್ತಿದೆ. ಮೇಕೆದಾಟು ಜಲಾಶಯದಿಂದ ವಿದ್ಯುಚ್ಛಕ್ತಿ ತಯಾರಿಕೆ, ಕುಡಿಯುವ ನೀರಿಗೆ ಅನುಕೂಲವಾಗಲಿದೆ. ಸಮುದ್ರಕ್ಕೆ ಹೋಗುವ ಹೆಚ್ಚುವರಿ ನೀರನ್ನು ತಡೆದು ಮೇಕೆದಾಟು ಯೋಜನೆ ಆರಂಭಿಸಲಾಗುತ್ತದೆ. ಇದರಿಂದ ತಮಿಳುನಾಡಿಗೆ ಯಾವುದೇ ತೊಂದರೆ ಆಗುವುದಿಲ್ಲ. ಇದನ್ನು ಅಲ್ಲಿನ ಸರಕಾರ ಅರ್ಥ ಮಾಡಿಕೊಳ್ಳಬೇಕು ಎಂದರು.

ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ಕ್ಯಾತೆ ತೆಗೆದಿದ್ದು, ಇದಕ್ಕೆ ನಾವು ಬಗ್ಗುವುದಿಲ್ಲ. ಅವರಷ್ಟೇ ಅಲ್ಲ ನಾವೂ ಹೋರಾಟ ಮಾಡುತ್ತೇವೆ. ರಾಜ್ಯ ಸರಕಾರ ಕೂಡಲೇ ಯೋಜನೆ ಶಂಕುಸ್ಥಾಪನೆ ಮಾಡಬೇಕು ಎಂದರು.

ಹದಿನೈದು ದಿನಗಳೊಳಗಾಗಿ ಜಲಸಂಪನ್ಮೂಲ ಸಚಿವರು ಕ್ರಮ ವಹಿಸದಿದ್ದರೆ ಸಚಿವರ ಮನೆ ಮುಂದೆ ಧರಣಿ ನಡೆಸಿ, ಮೇಕೆದಾಟಿಗೆ ಜಲಿಕಲ್ಲು, ಮಣ್ಣು, ಸಿಮೆಂಟ್ ತೆಗೆದುಕೊಂಡು ಹೋಗಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗುವುದು.

-ವಾಟಾಳ್ ನಾಗರಾಜ್, ಕನ್ನಡ ಒಕ್ಕೂಟದ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X