Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುರಕ್ಷಿತವಾಗಿ ದುಬೈ ತಲುಪಿದ ಉತ್ತರ...

ಸುರಕ್ಷಿತವಾಗಿ ದುಬೈ ತಲುಪಿದ ಉತ್ತರ ಕನ್ನಡ ಜಿಲ್ಲೆಯ 18 ಮೀನುಗಾರರು

ತಾಯ್ನಾಡಿಗೆ ಮರಳುವ ತವಕ

ವಾರ್ತಾಭಾರತಿವಾರ್ತಾಭಾರತಿ10 Jan 2019 8:42 PM IST
share
ಸುರಕ್ಷಿತವಾಗಿ ದುಬೈ ತಲುಪಿದ ಉತ್ತರ ಕನ್ನಡ ಜಿಲ್ಲೆಯ 18 ಮೀನುಗಾರರು

ಭಟ್ಕಳ,ಜ.10: ಅಕ್ರಮ ಗಡಿ ಪ್ರವೇಶದ ಆರೋಪದಡಿ ಕಳೆದ 8 ತಿಂಗಳ ಹಿಂದೆ ಇರಾನ್ ಸರ್ಕಾರದಿಂದ ಬಂಧಿಸಲ್ಪಟ್ಟು ಅಲ್ಲಿ ಗೃಹಬಂಧನ ಎದುರಿಸುತ್ತಿದ್ದ ಉತ್ತರಕನ್ನಡ ಜಿಲ್ಲೆಯ 18 ಮೀನುಗಾರರು ಸೇರಿದಂತೆ ಭಾರತದ ಒಟ್ಟು 28 ಮೀನುಗಾರರು ಸುರಕ್ಷಿತವಾಗಿ ಬುಧವಾರ ರಾತ್ರಿ ಬೋಟ್ ಮೂಲಕ ದುಬೈನ ಜುಮೈರಾ ಬಂದರ್ ತಲುಪಿದರು.

ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ ತಲುಪಿದ್ದಾಗಿ ಮೀನುಗಾರರ ಕುಟುಂಬದವರು ದೃಢಪಡಿಸಿದ್ದು, ದುಬೈಯಿಂದ ಫೋಟೊ ಮತ್ತು ವಿಡಿಯೋ ಬಿಡುಗಡೆಗೊಳಿಸಿದ್ದಾರೆ. 

ಜುಲೈ 27ರಂದು 28 ಮೀನುಗಾರರು ದುಬೈ ಮೂಲಕ ಮೀನುಗಾರಿಕೆಗೆ ತೆರಳಿದ್ದು, ಇರಾನ್ ನೇವಿ ಆಧಿಕಾರಿಗಳು ಅಕ್ರಮ ಗಡಿ ಪ್ರವೇಶದ ಹಿನ್ನೆಲೆಯಲ್ಲಿ ಮೂರು ಪ್ರತ್ಯೇಕ ಬೋಟುಗಳನ್ನು ವಶಕ್ಕೆ ಪಡೆದು, ಅದರಲ್ಲಿದ್ದ ಮೀನುಗಾರರನ್ನು ಗೃಹಬಂಧನದಲ್ಲಿಟ್ಟಿದ್ದರು.

ದುಬೈ ಕರ್ನಾಟಕ ಎನ್.ಅರ್.ಐ ಫೋರಂ ನ ಪ್ರಯತ್ನದಿಂದಾಗಿ ಮಂಗಳವಾರ ಬಿಡುಗಡೆಗೊಂಡಿದ್ದ ಭಟ್ಕಳ, ಉತ್ತರ ಕನ್ನಡ ಜಿಲ್ಲೆಯ 18 ಮೀನುಗಾರರು ಸೇರಿದಂತೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಐವರು ಹಾಗೂ 5 ಜನ ಬೋಟ್ ಮಾಲಕರು ಸೇರಿದಂತೆ ಒಟ್ಟು 28 ಮಂದಿ ಈಗ ಸುರಕ್ಷಿತವಾಗಿ ದುಬೈ ತಲುಪಿದ್ದಾರೆ. 

ಉತ್ತರಕನ್ನಡ ಜಿಲ್ಲೆಯ 18 ಮೀನುಗಾರರ ವಿವರ: ಭಟ್ಕಳದ ನಿವಾಸಿಗಳಾದ ಮುಹಮ್ಮದ್ ಷರೀಫ್, ಉಸ್ಮಾನ್ ಬೊಂಬಾಯಿಕರ್, ಅಬ್ದುಲ್ಲಾ ಡಾಂಗಿ, ಅತೀಖುರ್ರಹ್ಮಾನ್ ಘಾರೊ, ಜಾಫರ್ ತಡಲಿಕರ್, ಖಲೀಲ್ ಪಾನಿ ಬುಡ್ಡೋ, ನಯೀಂ ಭಂಡಿ, ಇಬ್ರಾಹೀಂ ಮುಲ್ಲಾ, ಎಂ.ಅನ್ಸಾರ್ ಬಾಬು, ಕುಮಟಾ ತಾಲೂಕಿನ ಯಾಕೂಬ್ ಶಮಾಲಿ, ಇಲ್ಯಾಸ್ ಅಂಬಾಡಿ, ಇನಾಯತ್ ಶಮಾಲಿ, ಇಲ್ಯಾಸ್ ಘಾರೋ, ಅಜ್ಮಲ್ ಶಮಾಲಿ, ಇಬ್ರಾಹೀಂ ಹೂಡೆಕರ್, ಹೊನ್ನಾವರ ತಾಲೂಕಿನ ಮಂಕಿಯ ಮತ್ಲೂಬ್ ಸಾರಂಗ್, ಅಂಕೋಲಾ ತಾಲೂಕಿನ ಖಾಸಿಮ್ ಶೇಖ್ ಮತ್ತು ಶಿರೂರಿನ ಅಬ್ದುಲ್ ಹುಸೇನ್ ಸುರಕ್ಷಿತವಾಗಿ ತಲುಪಿದ್ದಾರೆ.

ಬುಧವಾರ ರಾತ್ರಿ ದುಬೈನ ಜುಮೈರಾ ಬಂದರ್ ತಲುಪಿದ ಇವರನ್ನು ಅವರ ಸಂಬಂಧಿಕರು, ಸ್ನೇಹಿತರು, ಹಿತೈಷಿಗಳು ಸಂತೋಷದಿಂದ ಬರಮಾಡಿಕೊಂಡರು.

ತಾಯ್ನಾಡಿಗೆ ಮರಳುವ ತವಕ: ದುಬೈಯಿಂದ ದೂರವಾಣಿಯಲ್ಲಿ ಮಾತನಾಡಿದ ಉಸ್ಮಾನ್ ಬೊಂಬಾಯಿಕರ್ ತನ್ನ ತಾಯ್ನಾಡಿಗೆ ಆದಷ್ಟು ಬೇಗ ಮರಳುವ ತವಕವನ್ನು ವ್ಯಕ್ತಪಡಿಸಿದ್ದು, ಮನೆಯಲ್ಲಿ ತಾಯಿ ಹಾಗೂ ಸಹೋದರರನ್ನು ಕಾಣಬೇಕೆಂದು ಬಹುದಿನಗಳ ಕನಸು ಈಗ ನನಸಾಗುತ್ತಿದೆ. ನಮ್ಮೆಲ್ಲರನ್ನು ಸುರಕ್ಷಿತವಾಗಿ ಮರಳುವಂತೆ ಮಾಡಿದ ಅಲ್ಲಾಹನಿಗೆ ಕೃತಜ್ಞತೆಯನ್ನು ಸಲ್ಲಿಸುವುದಾಗಿ ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X